AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಮತ್ತೆ ಸಿಎಂ; ಇಂದಿರಾ ಕ್ಯಾಂಟೀನ್​ಗೆ ಸಿಗಲಿದೆ ಮರುಜೀವ

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನಗರದೆಲ್ಲೆಡೆ ಆರಂಭಿಸಲಾಗಿದ್ದ, ಅವರ ಕನಸಿನ ಕೂಸಾಗಿದ್ದ ಇಂದಿರಾ ಕ್ಯಾಂಟೀನ್​ಗೆ ಮರುಜೀವ ದೊರೆಯುವ ನಿರೀಕ್ಷೆ ಇದೆ.

ಸಿದ್ದರಾಮಯ್ಯ ಮತ್ತೆ ಸಿಎಂ; ಇಂದಿರಾ ಕ್ಯಾಂಟೀನ್​ಗೆ ಸಿಗಲಿದೆ ಮರುಜೀವ
ಇಂದಿರಾ ಕ್ಯಾಂಟೀನ್​ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on:May 18, 2023 | 3:48 PM

Share

ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನಗರದೆಲ್ಲೆಡೆ ಆರಂಭಿಸಲಾಗಿದ್ದ, ಅವರ ಕನಸಿನ ಕೂಸಾಗಿದ್ದ ಇಂದಿರಾ ಕ್ಯಾಂಟೀನ್​ಗೆ ಮರುಜೀವ ದೊರೆಯುವ ನಿರೀಕ್ಷೆ ಇದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದು ಖಚಿತವಾಗುತ್ತಿದ್ದಂತೆಯೇ ಇಂದಿರಾ ಕ್ಯಾಂಟಿನ್​​​ಗಳಿಗೆ ಮರುಜೀವ ನೀಡಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಹುತೇಕ ಕ್ಯಾಂಟೀನ್​ಗಳು ಮುಚ್ಚಲ್ಪಟ್ಟಿದ್ದರೆ, ಅನೇಕ ಕ್ಯಾಂಟೀನ್​ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ.

ಮಾಜಿ ಸಿಎಂ ಸಿದ್ದರಾಮಯ್ಯ ಕನಸಿನ ಕೂಸಿಗೆ ಮರುಜೀವ ನೀಡಬೇಕು ಎಂದು ಬಿಬಿಎಂಪಿ ಕಾಂಗ್ರೆಸ್ ಸದಸ್ಯರು ಪಟ್ಟು ಹಿಡಿದಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ಕ್ಯಾಂಟಿನ್​ಗಳನ್ನು ಮುಚ್ಚಿಸುವ ಹುನ್ನರ ಮಾಡಲಾಗಿತ್ತು. ಆದರೆ, ಅದನ್ನು ತಡೆಯಲಾಗಿದೆ. ಆದಾಗ್ಯೂ ಕ್ಯಾಂಟೀನ್​ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಬಡವರಿಗೆ, ಕೂಲಿ ಕಾರ್ಮಿಕರಿಗೆ ಬೆಳಿಗ್ಗೆ ತಿಂಡಿ ಮಧ್ಯಾಹ್ನದ ಊಟ ಸಿಗುತ್ತಿತ್ತು. ಕೇವಲ 10 ರೂಪಾಯಿಗೆ ಬಡ ಜನರಿಗೆ ಊಟ ಸಿಗುತ್ತಿತ್ತು. ಕಾಂಗ್ರೆಸ್ ಅಧಿಕಾರವಧಿಯಲ್ಲಿ ರಾಜ್ಯದ ಎಲ್ಲಾ ಕ್ಯಾಂಟಿನ್​​ಗಳಿಗೆ ಅನುದಾನ ನೀಡಲಾಗಿತ್ತು. ಅದ್ರೆ ಬಿಜೆಪಿ ಸರ್ಕಾರ ಬಂದ ಕೆಲವೇ ದಿನಗಳಲ್ಲಿ ರಾಜ್ಯದ ಹಲವು ಕಡೆ ಅನುದಾನ ಕೊಡದೆ ಕ್ಯಾಂಟಿನ್ ಬಂದ್ ಮಾಡಲಾಗಿತ್ತು ಎಂದು ಅವರು ದೂರಿದ್ದಾರೆ.

ಈ ಮಧ್ಯೆ, ಮತ್ತೆ ಬಡವರ ಪಾಲಿನ ಇಂದಿರಾ ಕ್ಯಾಂಟಿನ್ ರಾಜ್ಯದೇಲ್ಲೆಡೆ ತೆರೆಯಲು ಸಿದ್ಧತೆ ನಡೆಸಲಾಗಿದೆ. ಇದಕ್ಕೆ ಬಿಬಿಎಂಪಿ ಕಾಂಗ್ರೆಸ್ ಕಾರ್ಪೋರೇಟರ್​​​​ಗಳು ಆಗ್ರಹಿಸಿದ್ದಾರೆ. ಸರ್ಕಾರ ರಚನೆಯಾಗುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:48 pm, Thu, 18 May 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ