AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಅಧಿಕಾರಕ್ಕೆ ಬರ್ತೇವೆ, ನಾನೇ ಅನುಭವ ಮಂಟಪ ಉದ್ಘಾಟಿಸ್ತೇನೆ ಎಂದ ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬರ್ತೇವೆ, ನಾನೇ ಅನುಭವ ಮಂಟಪ ಉದ್ಘಾಟಿಸ್ತೇನೆ. ಇದರಿಂದ ನನಗೆ ಪುಣ್ಯ ಬರುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ನಾವು ಅಧಿಕಾರಕ್ಕೆ ಬರ್ತೇವೆ, ನಾನೇ ಅನುಭವ ಮಂಟಪ ಉದ್ಘಾಟಿಸ್ತೇನೆ ಎಂದ ಸಿದ್ದರಾಮಯ್ಯ
ಸಿದ್ದರಾಮಯ್ಯ Image Credit source: indiatoday.in
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 03, 2023 | 4:07 PM

ಬೀದರ್: ನಾವು ಅಧಿಕಾರಕ್ಕೆ ಬರ್ತೇವೆ, ನಾನೇ ಅನುಭವ ಮಂಟಪ ಉದ್ಘಾಟಿಸ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದರು. ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿರುವ ಅನುಭವ ಮಂಟಪದ ಬಳಿ ಮಾತನಾಡಿ, ಅನುಭವ ಮಂಟಪ ಉದ್ಘಾಟನೆ ‌ಮಾಡಿದರೆ ನನಗೆ ಪುಣ್ಯ ಬರುತ್ತದೆ. ಬಸವ ಜಯಂತಿ ದಿನ ನಾನು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದೆ. ಪ್ರಮಾಣವಚನ ಸ್ವೀಕರಿಸಿದ ಕೆಲ ಹೊತ್ತಲ್ಲಿ ಅನ್ನಭಾಗ್ಯ, ದಾಸೋಹದ ಪರಿಕಲ್ಪನೆ ಇಟ್ಟುಕೊಂಡು ಈ ಯೋಜನೆ ಜಾರಿಗೆ ತಂದಿದ್ದೆ. ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಬೇಕೆಂದು ಅನ್ನಭಾಗ್ಯ ಯೋಜನೆ ತರಲಾಯಿತು. ನಾನು ಬಸವಣ್ಣನ ತತ್ವದ ಮೇಲೆ ನಂಬಿಕೆ ಇಟ್ಟವನು. ಪ್ರತಿಯೊಬ್ಬರಿಗೂ ಸಮಾನ ಹಕ್ಕು ಹಾಗೂ ಸಮಾನ ಅವಕಾಶ ಸಿಗಬೇಕು. ಸರ್ಕಾರಿ ಕಚೇರಿಯಲ್ಲಿ ಬಸವಣ್ಣ ಫೋಟೋ ಇಡಲು ಆದೇಶ ಮಾಡಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಲೂಟಿ ಹೊಡೆಯುವುದು ಬಿಟ್ರೆ ಬಿಜೆಪಿಯವರಿಗೆ ಬೇರೆ ಕೆಲಸ ಇಲ್ಲ

ಪ್ರಜಾಧ್ವನಿ ಮೂಲಕ ಬಿಜೆಪಿ ಭ್ರಷ್ಟಾಚಾರವನ್ನು ಜನರ ಮುಂದಿಟ್ಟಿದ್ದೇವೆ. ಬಿಜೆಪಿ ಸರ್ಕಾರದ ಪಾಪ ಮತ್ತು ಕರ್ಮಕಾಂಡವನ್ನು ಜನರ ಮುಂದಿಟ್ಟಿದ್ದೇವೆ. ಲೂಟಿ ಹೊಡೆಯುವುದು ಬಿಟ್ರೆ ಬಿಜೆಪಿಯವರಿಗೆ ಬೇರೆ ಕೆಲಸ ಇಲ್ಲ. ವಿಧಾನಸೌಧದ ಗೋಡೆಗೆ ಕಿವಿಕೊಟ್ಟರೆ ಬರೀ ಲಂಚ ಅಂತಾ ಕೇಳಿಸುತ್ತೆ. ವಿಧಾನಸೌಧದ ಪ್ರತಿ ಗೋಡೆಗಳು ಲಂಚದ ಬಗ್ಗೆ ಪಿಸುಗುಟ್ಟುತ್ತಿವೆ. ಬಿಜೆಪಿ ಕಮಿಷನ್ ದಂಧೆಗೆ ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಾನಂದ ಎಂಬುವರು ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರದ ಪ್ರತಿ ಕಚೇರಿಯಲ್ಲೂ ಲಂಚ ತಾಂಡವವಾಡುತ್ತಿದೆ. ವರ್ಗಾವಣೆ ಹಾಗೂ ಬಡ್ತಿ ಪಡೆಯುವುದಕ್ಕೂ ಲಂಚ ನಡೀತಾ ಇದೆ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಹಾಲಿನ ಬೆಂಬಲ ಬೆಲೆ ಹೆಚ್ಚಳ, ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ‌ ರೂ. ಅನುದಾನ: ಸಿದ್ಧರಾಮಯ್ಯ ಘೋಷಣೆ

ಶಾಸಕ ರಾಜಶೇಖರ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ

ಜಿಲ್ಲೆಯ ಹುಮ್ನಾಬಾದ್ ಶಾಸಕ ರಾಜಸೇಖರ್ ಪಾಟೀಲ್ ಮನೆಗೆ ಸಿದ್ದರಾಮಯ್ಯ ಭೇಟಿ ನೀಡಿ ಚಹಾ ನೀರು ಸೇವಿಸಿದರು. ನಂತರ ಬಸವಕಲ್ಯಾಣ ಪ್ರಜಾ ಧ್ವನಿ ಸಮಾವೇಶಕ್ಕೆ ಹೊರಟರು. ಸಿದ್ದರಾಮಯ್ಯಗೆ, ಎಂಬಿ ಪಾಟೀಲ್, ಜಮೀರ್ ಅಹ್ಮದ್, ಈಶ್ವರ ಖಂಡ್ರೆ ಸಾಥ್ ಕೊಟ್ಟರು.

ಇದನ್ನೂ ಓದಿ: Kichcha Sudeep: ಕಿಚ್ಚ ಸುದೀಪ್-ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಭೇಟಿ; ಇಲ್ಲಿದೆ ಕಾರಣ

ಸಿದ್ದರಾಮಯ್ಯ ಜೀವನಾಧಾರಿತ ಗೀತೆ ಬಿಡುಗಡೆಗೆ ಸಜ್ಜು..!

ಇನ್ನು ಸಿದ್ದರಾಮಯ್ಯ ಜೀವನಾಧಾರಿತ ಗೀತೆ ಬಿಡುಗಡೆಗೆ ಸಜ್ಜಾಗಿದೆ. ಮಾಜಿ‌ ಮುಖ್ಯ ಮಂತ್ರಿ ಬಾಲ್ಯ ಹಾಗೂ ಅವರು ಬೆಳೆದು ಬಂದ ಹಾದಿಯನ್ನ ಈ ಹಾಡು ಪರಿಚಯಿಸಲಿದೆ. ಆಂದ್ರ ಸೇರಿದಂತೆ ಹಲವೆಡೆ ಶೂಟಿಂಗ್ ಮಾಡಲಾಗಿದೆ. ಮನೋಜ್ ಹಾಗೂ ಅವರ ತಂಡ ಇಂತಹ ಪ್ರಯತ್ನ ಮಾಡಿದ್ದು, ಕನ್ನಡ, ತೆಲುಗು, ತಮಿಳಿನಲ್ಲಿ ನಾಳೆ ಸಾಂಗ್ ರಿಲೀಸ್ ಆಗಲಿದೆ. ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಡು ಬಿಡುಗಡೆಗೆ ಭರ್ಜರಿ ಯೋಜನೆ ಮಾಡಿದ್ದಾರೆ. ಹೈದರಾಬಾದ್ ಮೂಲದ ಶ್ರೀಧರ್ ಅವರ ಪರಿಕಲ್ಪನೆ ನಿರ್ಮಾಣದಲ್ಲಿ ಸಾಂಗ್ ಮೂಡಿಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು