AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ ಭಾಗ್ಯವೇ ಇಲ್ಲ; ಪ್ರತಾಪ್​​ ಸಿಂಹ

ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ ಭಾಗ್ಯವೇ ಇಲ್ಲ. ಕ್ಷೇತ್ರ ಹುಡುಕಿಕೊಳ್ಳಬೇಕಾದ ದಯನೀಯ ಸ್ಥಿತಿ ಬಂದಿದೆ ಅಂದರೆ ಸಿದ್ದರಾಮಯ್ಯರ ಭಾಗ್ಯಗಳಿಗೆ ಜನ ಬೆಲೆ ಕೊಟ್ಟಿಲ್ಲ ಎಂದಾಯಿತು ಎನ್ನುವ ಮೂಲಕ ಪ್ರತಾಪ್​ ಸಿಂಹ ವ್ಯಂಗ್ಯ ಮಾಡಿದ್ದಾರೆ.

ಕಿರಣ್ ಹನುಮಂತ್​ ಮಾದಾರ್
|

Updated on:Mar 23, 2023 | 12:13 PM

Share

ಮಡಿಕೇರಿ: ವಿಧಾನಸಭೆ ಚುನಾವಣೆ(Karnataka Assembly Election) ಹತ್ತಿರವಾಗುತ್ತಿದ್ದಂತೆ ಚುನಾವಣಾ ಕಾವು ಜೋರಾಗಿದೆ. ಆಡಳಿತ ಗದ್ದುಗೆ ಹಿಡಿಯಲು ಉಭಯ ಪಕ್ಷಗಳು ಹರಸಾಹಸ ನಡೆಸಿವೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ಕ್ಷೇತ್ರ ಗೊಂದಲ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಸುದ್ದಿಯಾಗಿದೆ. ಈ ಕುರಿತು ಬಿಜೆಪಿ ಸಂಸದ ಪ್ರತಾಪ್ ಸಿಂಹ(Pratap Simha) ‘ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ  ಭಾಗ್ಯವೇ ಇಲ್ಲ. ಕ್ಷೇತ್ರ ಹುಡುಕಿಕೊಳ್ಳಬೇಕಾದ ದಯನೀಯ ಸ್ಥಿತಿ ಬಂದಿದೆ ಅಂದರೆ ಸಿದ್ದರಾಮಯ್ಯರ ಭಾಗ್ಯಗಳಿಗೆ ಜನ ಬೆಲೆ ಕೊಟ್ಟಿಲ್ಲ ಎಂದಾಯಿತು. ಅವರ ಮೇಲೆ ಜನರಿಗೆ ವಿಶ್ವಾಸ ಇಲ್ಲ ಎಂಬುದು ಬಹಳ ಸ್ಪಷ್ಟವಾಗಿದೆ. ಅಂತಿಮವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಬರುತ್ತಾರೆ ಎನ್ನುವ ಮೂಲಕ ಮಡಿಕೇರಿಯಲ್ಲಿ ವ್ಯಂಗ್ಯ ಮಾಡಿದ್ದಾರೆ.

ಮಡಿಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ದಕ್ಷಿಣ‌ ಕರ್ನಾಟಕದ ಜನ ಕಾಂಗ್ರೆಸ್​, ಜೆಡಿಎಸ್​​ನಿಂದ‌ ಮಂಗಗಳಾಗಬೇಡಿ. ಯುಗಾದಿಗೆ ಕಾಂಗ್ರೆಸ್ ಟಿಕೆಟ್ ಅನೌನ್ಸ್​ ಆಗಬೇಕಿತ್ತು, ಆದರೆ ಆಗಿಲ್ಲ. ಸಿದ್ದರಾಮಯ್ಯಗೆ ಕ್ಷೇತ್ರದ ಚಿಂತೆ, ಅವರ ಪತ್ನಿಗೆ ಮಗನ ಭವಿಷ್ಯದ ಚಿಂತೆಯಾಗಿದೆ. ಹೆಚ್​​.ಡಿ.ರೇವಣ್ಣಗೆ ಭವಾನಿ ಚಿಂತೆ, ಕುಮಾರಣ್ಣಂಗೆ ನಿಖಿಲ್​​ ಚಿಂತೆ. ಕುಟುಂಬದ ಬಗ್ಗೆ ಚಿಂತೆ ಮಾಡುವವರಿಂದ ರಾಜ್ಯಕ್ಕೆ ಹಿತ ಸಿಗುವುದಿಲ್ಲ. ಆದ್ದರಿಂದ ಜನರು ಮಂಗ ಆಗಲು ಹೋಗಬೇಡಿ. ಉಚಿತವಾಗಿ ಕೊಡುತ್ತೀವಿ ಅಂದರೆ ಬಿಜೆಪಿಯನ್ನೂ ನಂಬಬೇಡಿ ಎನ್ನುವ ಮೂಲಕ ಕಾಂಗ್ರೆಸ್​, JDS ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Thu, 23 March 23

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..