AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ ಭಾಗ್ಯವೇ ಇಲ್ಲ; ಪ್ರತಾಪ್​​ ಸಿಂಹ

ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ ಭಾಗ್ಯವೇ ಇಲ್ಲ. ಕ್ಷೇತ್ರ ಹುಡುಕಿಕೊಳ್ಳಬೇಕಾದ ದಯನೀಯ ಸ್ಥಿತಿ ಬಂದಿದೆ ಅಂದರೆ ಸಿದ್ದರಾಮಯ್ಯರ ಭಾಗ್ಯಗಳಿಗೆ ಜನ ಬೆಲೆ ಕೊಟ್ಟಿಲ್ಲ ಎಂದಾಯಿತು ಎನ್ನುವ ಮೂಲಕ ಪ್ರತಾಪ್​ ಸಿಂಹ ವ್ಯಂಗ್ಯ ಮಾಡಿದ್ದಾರೆ.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Mar 23, 2023 | 12:13 PM

Share

ಮುಖ್ಯಾಂಶಗಳು

  • ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ ಭಾಗ್ಯವೇ ಇಲ್ಲ; ಪ್ರತಾಪ್​​ ಸಿಂಹ
  • ಕ್ಷೇತ್ರ ಹುಡುಕಿಕೊಳ್ಳಬೇಕಾದ ದಯನೀಯ ಸ್ಥಿತಿ ಬಂದಿದೆ ಅಂದರೆ ಸಿದ್ದರಾಮಯ್ಯರ ಭಾಗ್ಯಗಳಿಗೆ ಜನ ಬೆಲೆ ಕೊಟ್ಟಿಲ್ಲ ಎಂದ ಪ್ರತಾಪ್​ ಸಿಂಹ
  • ಕುಟುಂಬದ ಬಗ್ಗೆ ಚಿಂತೆ ಮಾಡುವವರಿಂದ ರಾಜ್ಯಕ್ಕೆ ಹಿತ ಸಿಗುವುದಿಲ್ಲ; ಪ್ರತಾಪ್​ ಸಿಂಹ

ಮಡಿಕೇರಿ: ವಿಧಾನಸಭೆ ಚುನಾವಣೆ(Karnataka Assembly Election) ಹತ್ತಿರವಾಗುತ್ತಿದ್ದಂತೆ ಚುನಾವಣಾ ಕಾವು ಜೋರಾಗಿದೆ. ಆಡಳಿತ ಗದ್ದುಗೆ ಹಿಡಿಯಲು ಉಭಯ ಪಕ್ಷಗಳು ಹರಸಾಹಸ ನಡೆಸಿವೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ಕ್ಷೇತ್ರ ಗೊಂದಲ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಸುದ್ದಿಯಾಗಿದೆ. ಈ ಕುರಿತು ಬಿಜೆಪಿ ಸಂಸದ ಪ್ರತಾಪ್ ಸಿಂಹ(Pratap Simha) ‘ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ  ಭಾಗ್ಯವೇ ಇಲ್ಲ. ಕ್ಷೇತ್ರ ಹುಡುಕಿಕೊಳ್ಳಬೇಕಾದ ದಯನೀಯ ಸ್ಥಿತಿ ಬಂದಿದೆ ಅಂದರೆ ಸಿದ್ದರಾಮಯ್ಯರ ಭಾಗ್ಯಗಳಿಗೆ ಜನ ಬೆಲೆ ಕೊಟ್ಟಿಲ್ಲ ಎಂದಾಯಿತು. ಅವರ ಮೇಲೆ ಜನರಿಗೆ ವಿಶ್ವಾಸ ಇಲ್ಲ ಎಂಬುದು ಬಹಳ ಸ್ಪಷ್ಟವಾಗಿದೆ. ಅಂತಿಮವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಬರುತ್ತಾರೆ ಎನ್ನುವ ಮೂಲಕ ಮಡಿಕೇರಿಯಲ್ಲಿ ವ್ಯಂಗ್ಯ ಮಾಡಿದ್ದಾರೆ.

ಮಡಿಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ದಕ್ಷಿಣ‌ ಕರ್ನಾಟಕದ ಜನ ಕಾಂಗ್ರೆಸ್​, ಜೆಡಿಎಸ್​​ನಿಂದ‌ ಮಂಗಗಳಾಗಬೇಡಿ. ಯುಗಾದಿಗೆ ಕಾಂಗ್ರೆಸ್ ಟಿಕೆಟ್ ಅನೌನ್ಸ್​ ಆಗಬೇಕಿತ್ತು, ಆದರೆ ಆಗಿಲ್ಲ. ಸಿದ್ದರಾಮಯ್ಯಗೆ ಕ್ಷೇತ್ರದ ಚಿಂತೆ, ಅವರ ಪತ್ನಿಗೆ ಮಗನ ಭವಿಷ್ಯದ ಚಿಂತೆಯಾಗಿದೆ. ಹೆಚ್​​.ಡಿ.ರೇವಣ್ಣಗೆ ಭವಾನಿ ಚಿಂತೆ, ಕುಮಾರಣ್ಣಂಗೆ ನಿಖಿಲ್​​ ಚಿಂತೆ. ಕುಟುಂಬದ ಬಗ್ಗೆ ಚಿಂತೆ ಮಾಡುವವರಿಂದ ರಾಜ್ಯಕ್ಕೆ ಹಿತ ಸಿಗುವುದಿಲ್ಲ. ಆದ್ದರಿಂದ ಜನರು ಮಂಗ ಆಗಲು ಹೋಗಬೇಡಿ. ಉಚಿತವಾಗಿ ಕೊಡುತ್ತೀವಿ ಅಂದರೆ ಬಿಜೆಪಿಯನ್ನೂ ನಂಬಬೇಡಿ ಎನ್ನುವ ಮೂಲಕ ಕಾಂಗ್ರೆಸ್​, JDS ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Thu, 23 March 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್