AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ ಭಾಗ್ಯವೇ ಇಲ್ಲ; ಪ್ರತಾಪ್​​ ಸಿಂಹ

ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ ಭಾಗ್ಯವೇ ಇಲ್ಲ. ಕ್ಷೇತ್ರ ಹುಡುಕಿಕೊಳ್ಳಬೇಕಾದ ದಯನೀಯ ಸ್ಥಿತಿ ಬಂದಿದೆ ಅಂದರೆ ಸಿದ್ದರಾಮಯ್ಯರ ಭಾಗ್ಯಗಳಿಗೆ ಜನ ಬೆಲೆ ಕೊಟ್ಟಿಲ್ಲ ಎಂದಾಯಿತು ಎನ್ನುವ ಮೂಲಕ ಪ್ರತಾಪ್​ ಸಿಂಹ ವ್ಯಂಗ್ಯ ಮಾಡಿದ್ದಾರೆ.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Mar 23, 2023 | 12:13 PM

Share

ಮುಖ್ಯಾಂಶಗಳು

  • ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ ಭಾಗ್ಯವೇ ಇಲ್ಲ; ಪ್ರತಾಪ್​​ ಸಿಂಹ
  • ಕ್ಷೇತ್ರ ಹುಡುಕಿಕೊಳ್ಳಬೇಕಾದ ದಯನೀಯ ಸ್ಥಿತಿ ಬಂದಿದೆ ಅಂದರೆ ಸಿದ್ದರಾಮಯ್ಯರ ಭಾಗ್ಯಗಳಿಗೆ ಜನ ಬೆಲೆ ಕೊಟ್ಟಿಲ್ಲ ಎಂದ ಪ್ರತಾಪ್​ ಸಿಂಹ
  • ಕುಟುಂಬದ ಬಗ್ಗೆ ಚಿಂತೆ ಮಾಡುವವರಿಂದ ರಾಜ್ಯಕ್ಕೆ ಹಿತ ಸಿಗುವುದಿಲ್ಲ; ಪ್ರತಾಪ್​ ಸಿಂಹ

ಮಡಿಕೇರಿ: ವಿಧಾನಸಭೆ ಚುನಾವಣೆ(Karnataka Assembly Election) ಹತ್ತಿರವಾಗುತ್ತಿದ್ದಂತೆ ಚುನಾವಣಾ ಕಾವು ಜೋರಾಗಿದೆ. ಆಡಳಿತ ಗದ್ದುಗೆ ಹಿಡಿಯಲು ಉಭಯ ಪಕ್ಷಗಳು ಹರಸಾಹಸ ನಡೆಸಿವೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ಕ್ಷೇತ್ರ ಗೊಂದಲ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಸುದ್ದಿಯಾಗಿದೆ. ಈ ಕುರಿತು ಬಿಜೆಪಿ ಸಂಸದ ಪ್ರತಾಪ್ ಸಿಂಹ(Pratap Simha) ‘ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ  ಭಾಗ್ಯವೇ ಇಲ್ಲ. ಕ್ಷೇತ್ರ ಹುಡುಕಿಕೊಳ್ಳಬೇಕಾದ ದಯನೀಯ ಸ್ಥಿತಿ ಬಂದಿದೆ ಅಂದರೆ ಸಿದ್ದರಾಮಯ್ಯರ ಭಾಗ್ಯಗಳಿಗೆ ಜನ ಬೆಲೆ ಕೊಟ್ಟಿಲ್ಲ ಎಂದಾಯಿತು. ಅವರ ಮೇಲೆ ಜನರಿಗೆ ವಿಶ್ವಾಸ ಇಲ್ಲ ಎಂಬುದು ಬಹಳ ಸ್ಪಷ್ಟವಾಗಿದೆ. ಅಂತಿಮವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಬರುತ್ತಾರೆ ಎನ್ನುವ ಮೂಲಕ ಮಡಿಕೇರಿಯಲ್ಲಿ ವ್ಯಂಗ್ಯ ಮಾಡಿದ್ದಾರೆ.

ಮಡಿಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ದಕ್ಷಿಣ‌ ಕರ್ನಾಟಕದ ಜನ ಕಾಂಗ್ರೆಸ್​, ಜೆಡಿಎಸ್​​ನಿಂದ‌ ಮಂಗಗಳಾಗಬೇಡಿ. ಯುಗಾದಿಗೆ ಕಾಂಗ್ರೆಸ್ ಟಿಕೆಟ್ ಅನೌನ್ಸ್​ ಆಗಬೇಕಿತ್ತು, ಆದರೆ ಆಗಿಲ್ಲ. ಸಿದ್ದರಾಮಯ್ಯಗೆ ಕ್ಷೇತ್ರದ ಚಿಂತೆ, ಅವರ ಪತ್ನಿಗೆ ಮಗನ ಭವಿಷ್ಯದ ಚಿಂತೆಯಾಗಿದೆ. ಹೆಚ್​​.ಡಿ.ರೇವಣ್ಣಗೆ ಭವಾನಿ ಚಿಂತೆ, ಕುಮಾರಣ್ಣಂಗೆ ನಿಖಿಲ್​​ ಚಿಂತೆ. ಕುಟುಂಬದ ಬಗ್ಗೆ ಚಿಂತೆ ಮಾಡುವವರಿಂದ ರಾಜ್ಯಕ್ಕೆ ಹಿತ ಸಿಗುವುದಿಲ್ಲ. ಆದ್ದರಿಂದ ಜನರು ಮಂಗ ಆಗಲು ಹೋಗಬೇಡಿ. ಉಚಿತವಾಗಿ ಕೊಡುತ್ತೀವಿ ಅಂದರೆ ಬಿಜೆಪಿಯನ್ನೂ ನಂಬಬೇಡಿ ಎನ್ನುವ ಮೂಲಕ ಕಾಂಗ್ರೆಸ್​, JDS ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Thu, 23 March 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ