AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ಹಂಚಿಕೆ ಇಲ್ಲ, ಸಿದ್ದರಾಮಯ್ಯ ಪೂರ್ಣವಧಿ ಸಿಎಂ ಆಗಲಿದ್ದಾರೆ; ಎಂಬಿ ಪಾಟೀಲ್

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರೇ ಪೂರ್ಣವಧಿ ಇರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸಚಿವ ಎಂಬಿ ಪಾಟೀಲ್ (MB Patil) ಹೇಳಿದ್ದಾರೆ.

ಅಧಿಕಾರ ಹಂಚಿಕೆ ಇಲ್ಲ, ಸಿದ್ದರಾಮಯ್ಯ ಪೂರ್ಣವಧಿ ಸಿಎಂ ಆಗಲಿದ್ದಾರೆ; ಎಂಬಿ ಪಾಟೀಲ್
ಎಂಬಿ ಪಾಟೀಲ್
ಗಣಪತಿ ಶರ್ಮಾ
|

Updated on:May 22, 2023 | 9:15 PM

Share

ಮೈಸೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರೇ ಪೂರ್ಣವಧಿ ಇರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸಚಿವ ಎಂಬಿ ಪಾಟೀಲ್ (MB Patil) ಹೇಳಿದ್ದಾರೆ. ಮೈಸೂರಿಮ ಸುತ್ತೂರಿನಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಸಿದ್ದರಾಮಯ್ಯ ಮುಂದಿನ ಐದು ವರ್ಷವೂ ಸಿಎಂ ಆಗಿರಲಿದ್ದಾರೆ ಎಂಬುದನ್ನು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರೇ ಸ್ಪಷ್ಟಪಡಿಸಿದ್ದಾರೆ ಎಂದರು.

ಬಿಜೆಪಿ ಅಧಿಕಾರವಧಿಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್ಐ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಎಲ್ಲ ಹಗರಣಗಳನ್ನೂ ತನಿಖೆ ನಡೆಸಿ ತಾರ್ಕಿಕ ಅಂತ್ಯ ಕಾಣಿಸುತ್ತೇವೆ. ತಪ್ಪಿಸ್ತರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದು ಅವರು ಹೇಳಿದರು.

ಗ್ಯಾರಂಟಿ ಕಾರ್ಡ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮೊದಲ ಸಚಿವ ಸಂಪುಟ ಸಭೆಯಲ್ಲೇ ಚರ್ಚೆ ಆಗಿದೆ, ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಎಲ್ಲ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ತಡೆಹಿಡಿದ ಸಿದ್ದರಾಮಯ್ಯ ಸರ್ಕಾರ

ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಭಾರೀ ಪೈಪೋಟಿ ನಡೆದಿತ್ತು. ಕೊನೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿತ್ತು. ಹೈಕಮಾಂಡ್ ಇಬ್ಬರ ನಡುವೆ ಅಧಿಕಾರ ಹಂಚಿಕೆ ಸೂತ್ರ ರಚಿಸಿರುವ ಸಾಧ್ಯತೆ ಇದೆ ಎಂದು ಕೆಲವು ಮೂಲಗಳು ಅಭಿಪ್ರಾಯಪಟ್ಟಿದ್ದವು. ಆದರೆ, ಈ ವಿಚಾರವಾಗಿ ಎಐಸಿಸಿ ಅಧಿಕೃತ ಹೇಳಿಕೆಯನ್ನೇನೂ ನೀಡಿಲ್ಲ. ಈ ಬಗ್ಗೆ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲವಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಎಂಬಿ ಪಾಟೀಲ್ ಅಧಿಕಾರ ಹಂಚಿಕೆ ಮಾತುಕತೆಯಾಗಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:14 pm, Mon, 22 May 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ