AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪ್ತನ ಸೋಲನ್ನು ಗಂಭೀರವಾಗಿ ಪರಿಗಣಿಸಿದ ಸಿದ್ದರಾಮಯ್ಯ, ಈ ಇಬ್ಬರು ನಾಯುಕರ ವಿರುದ್ಧ ಶಿಸ್ತು ಕ್ರಮಕ್ಕೆ ಪತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತನ ಸೋಲನ್ನು ಗಂಭೀರವಾಗಿ ಪರಿಗಣಿಸಿದ್ದು, ಸೋಲಿಗೆ ಕಾರಣರಾದ ಇಬ್ಬರು ಮುಖಂಡರ ವಿರುದ್ಧ ಕ್ರಮಕೈಗೊಳ್ಳುವಂತೆ ಪತ್ರ ಬರೆದಿದ್ದಾರೆ.

ಆಪ್ತನ ಸೋಲನ್ನು ಗಂಭೀರವಾಗಿ ಪರಿಗಣಿಸಿದ ಸಿದ್ದರಾಮಯ್ಯ, ಈ ಇಬ್ಬರು ನಾಯುಕರ ವಿರುದ್ಧ ಶಿಸ್ತು ಕ್ರಮಕ್ಕೆ ಪತ್ರ
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ|

Updated on: Jun 29, 2023 | 8:02 AM

Share

ಮೈಸೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ(siddaramaiah) ಅವರು ಈಗಾಗಲೇ ಮುಖ್ಯಮಂತ್ರಿಯಾಗಿ ಈ ಸರ್ಕಾರದ ಮೊದಲ ಬಜೆಟ್ (ಜುಲೈ 07)​ ಮಂಡನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಇದರ ನಡುವೆ ಆಪ್ತನ ಸೋಲು ಸಿದ್ದರಾಮಯ್ಯ ಅವರನ್ನು ಚಿಂತೆಗೀಡು ಮಾಡಿದ್ದು, ಈ ಬಗ್ಗೆ ಬೇಸರಗೊಂಡಿದ್ದಾರೆ. ಕಾಂಗ್ರೆಸ್​(Congress) ಅಲೆಯ ನಡುವೆಯೂ ಆಪ್ತನ ಸೋಲನ್ನು ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಿದ್ದು, ಸೋಲಿಗೆ ಕಾರಣರಾದವರ ವಿರುದ್ಧ ಶಿಸ್ತು ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ವಿಪಕ್ಷ ನಾಯಕರ ಜೊತೆ ಒಳ ಒಪ್ಪಂದ: ಶಾಸಕ ಯತ್ನಾಳ್​ ವಿರುದ್ಧ ಮಾಜಿ ಸಚಿವ ಮುರುಗೇಶ್ ನಿರಾಣಿ ಆರೋಪ

ಕಾಂಗ್ರೆಸ್ ಅಲೆಯ ನಡುವೆಯೂ ಸಿದ್ದರಾಮಯ್ಯನವರ ಅತ್ಯಾಪ್ತರಾಗಿರುವ ಎಂ.ಕೆ ಸೋಮಶೇಖರ್ 7 ಸಾವಿರ ಮತಗಳಿಂದ ಸೋತಿದ್ದಾರೆ. ಮೈಸೂರಿನ ಕೃಷ್ಣರಾಜ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಎಂ.ಕೆ ಸೋಮಶೇಖರ್ ಸೋಲಿನ ಬಗ್ಗೆ ಸಿದ್ದರಾಮಯ್ಯ ತಲೆ ಕೆಡಿಸಿಕೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಸ್ಥಳೀಯ ಕಾಂಗ್ರೆಸ್‌ ನಾಯಕರಾದ ಪ್ರದೀಪ್‌ಕುಮಾರ್ ಹಾಗೂ ನವೀನ್‌ಕುಮಾರ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಪತ್ರ ಬರೆದಿದ್ದಾರೆ.

ತಮ್ಮ ಸೋಲಿಗೆ ಕಾಂಗ್ರೆಸ್‌ನ ಪ್ರದೀಪ್‌ಕುಮಾರ್ ಹಾಗೂ ನವೀನ್‌ಕುಮಾರ್ ಕಾರಣ ಎಂದು ಎಂ.ಕೆ ಸೋಮಶೇಖರ್ ಅವರು ಸಿದ್ದರಾಮಯ್ಯಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರದೀಪ್‌ಕುಮಾರ್ ಹಾಗೂ ನವೀನ್‌ಕುಮಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಪ್ರದೀಪ್ ಕುಮಾರ್ ಮತ್ತು ಎಂ.ಎನ್.ನವೀನ್ ಕುಮಾರ್ ಅವರು ಕೃಷ್ಣರಾಜ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದ್ರೆ, ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸೋಮಶೇಖರ್​ಗೆ ಟಿಕೆಟ್ ಕೊಡಿಸಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ಪ್ರದೀಪ್ ಕುಮಾರ್ ಮತ್ತು ಎಂ.ಎನ್.ನವೀನ್ ಕುಮಾರ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸೋಮಶೇಖರ್​ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರು ಎಂದು ಆರೋಪ ಕೇಳಿಬಂದಿವೆ. ಈಗ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಆದ್ರೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ