
ಬೆಂಗಳೂರು, ಮಾ.3: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ರ ಆಯವ್ಯಯದ ಮೇಲೆ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. ರಾಜ್ಯದ ಸಾಲದ ಪ್ರಮಾಣವು ಅಪಾಯಕಾರಿ ಮಟ್ಟವನ್ನು ತಲುಪುತ್ತಿದ್ದು, ಮುಂದಿನ ವರ್ಷದ ಅಂತ್ಯಕ್ಕೆ ಕರ್ನಾಟಕದ ಒಟ್ಟು ಸಾಲ 7,64,655 ಕೋಟಿ ರೂಪಾಯಿ ದಾಟಲಿದೆ ಎಂಬ ಅಂಕಿಅಂಶಗಳು ಆತಂಕ ಮೂಡಿಸಿವೆ. 2025-26ರ ಅಂತ್ಯಕ್ಕೆ ಈ ಸಾಲದ ಪರಿಣಾಮ ಜನರ ಮೇಲೆ ಬೀಳಲಿದೆ. ಪ್ರಸಕ್ತ ಆರ್ಥಿಕ ವರ್ಷವೊಂದರಲ್ಲೇ ಸರ್ಕಾರ ಸುಮಾರು 1.16 ಲಕ್ಷ ಕೋಟಿ ರೂ. ಸಾಲ ಪಡೆದಿದೆ ಎಂದು ಜೆಡಿಎಸ್ ಎಕ್ಸ್ನಲ್ಲಿ ಬರೆದುಕೊಂಡಿದೆ.
ವಾರ್ಷಿಕವಾಗಿ ಸುಮಾರು 50,000 ಕೋಟಿ ರೂ. ಹಣವನ್ನು ಕೇವಲ ಸಾಲದ ಬಡ್ಡಿ ಪಾವತಿಗಾಗಿಯೇ ಮೀಸಲಿಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇದು ಅಭಿವೃದ್ಧಿ ಕೆಲಸಗಳಿಗೆ ಹಣದ ಕೊರತೆ ಉಂಟುಮಾಡಬಹುದು. ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 50,000 ರಿಂದ 60,000 ಕೋಟಿ ರೂ. ಅಗತ್ಯವಿದ್ದು, ಇದನ್ನು ಸರಿದೂಗಿಸಲು ಸರ್ಕಾರ ಸಾಲದ ಮೊರೆ ಹೋಗುತ್ತಿದೆ ಎಂದು ಹೇಳಿದೆ.
ಗ್ಯಾರಂಟಿಯಿಂದ ರಾಜ್ಯವನ್ನು ದಿವಾಳಿ ಎಬ್ಬಿಸಿರುವ ಸ್ವಯಂ ಘೋಷಿತ ಆರ್ಥಿಕ ತಜ್ಞ
@siddaramaiah, ಕರ್ನಾಟಕದ ಜನರ ತಲೆಯ ಮೇಲೆ ಮತ್ತೊಂದು ಸಾಲದ ಹೊರೆ ಹೊರಿಸುವ ಬಜೆಟ್ ಮಂಡಿಸಲು ರೆಡಿಯಾಗಿದ್ದಾರೆ. 2025-26 ರ ಅಂತ್ಯಕ್ಕೆ ಕರ್ನಾಟಕ ರಾಜ್ಯದ ಒಟ್ಟು ಸಾಲ 7,64,655 ಕೋಟಿ ರೂ. ದಾಟಲಿದೆ. ವಾರ್ಷಿಕ 50,000 ಕೋಟಿ ರೂ. ಗಳಷ್ಟು ಬಡ್ಡಿ ಪಾವತಿ ಒತ್ತಡ, ಆದಾಯ ಹಾಗೂ ಖರ್ಚಿನ ನಡುವಿನ ಅಂತರ @INCKarnataka ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 1.16 ಲಕ್ಷ ಕೋಟಿ ರೂ. ಸಾಲ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಕ್ಕಾ ಪಟ್ಟೆ ಸಾಲ ಮಾಡಿ ಕನ್ನಡಿಗರ ಪಾಲಿಗೆ ಸಾಲರಾಮಯ್ಯ ಆಗಿದ್ದಾರೆ.
ಇದನ್ನೂ ಓದಿ: ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ಡಿಸಿಎಂ ನಡೆ
ಜೆಡಿಎಸ್ ಪೋಸ್ಟ್;
ಗ್ಯಾರಂಟಿಯಿಂದ ರಾಜ್ಯವನ್ನು ದಿವಾಳಿ ಎಬ್ಬಿಸಿರುವ ಸ್ವಯಂ ಘೋಷಿತ ಆರ್ಥಿಕ ತಜ್ಞ @siddaramaiah, ಕರ್ನಾಟಕದ ಜನರ ತಲೆಯ ಮೇಲೆ ಮತ್ತೊಂದು ಸಾಲದ ಹೊರೆ ಹೊರಿಸುವ ಬಜೆಟ್ ಮಂಡಿಸಲು ರೆಡಿಯಾಗಿದ್ದಾರೆ.
2025-26 ರ ಅಂತ್ಯಕ್ಕೆ ಕರ್ನಾಟಕ ರಾಜ್ಯದ ಒಟ್ಟು ಸಾಲ 7,64,655 ಕೋಟಿ ರೂ. ದಾಟಲಿದೆ. ವಾರ್ಷಿಕ 50,000 ಕೋಟಿ ರೂ. ಗಳಷ್ಟು ಬಡ್ಡಿ ಪಾವತಿ… pic.twitter.com/IEwYHBmzEJ
— Janata Dal Secular (@JanataDal_S) March 3, 2026
ತೆರಿಗೆ ಸಂಗ್ರಹದ ಗುರಿ ತಲುಪಿದರೂ, ಬದ್ಧ ವೆಚ್ಚಗಳು (ಸಂಬಳ, ಪಿಂಚಣಿ, ಬಡ್ಡಿ) ಮತ್ತು ಗ್ಯಾರಂಟಿ ವೆಚ್ಚಗಳ ನಡುವಿನ ಸಮತೋಲನ ಕಾಪಾಡುವುದು ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 1.16 ಲಕ್ಷ ಕೋಟಿ ರೂ. ಎಂದು ಹೇಳಿದೆ. ಈ ಮೂಲಕ ಸಾಲ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಕ್ಕಾ ಪಟ್ಟೆ ಸಾಲ ಮಾಡಿ ಕನ್ನಡಿಗರ ಪಾಲಿಗೆ ಸಾಲರಾಮಯ್ಯ ಆಗಿದ್ದಾರೆ ಎಂದು ಟೀಕಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ರಾಜ್ಯದ ಸಾಲವು ಜಿಎಸ್ಡಿಪಿ (GSDP) ಮಿತಿಯೊಳಗೇ ಇದೆ. ಬಡವರ ಕೈಗೆ ಹಣ ನೀಡುವ ಮೂಲಕ ಮಾರುಕಟ್ಟೆಯಲ್ಲಿ ಚಲಾವಣೆ ಹೆಚ್ಚುತ್ತಿದ್ದೇವೆ” ಎಂದು ಈ ಹಿಂದೆಯೇ ಸರ್ಕಾರ ಸಮರ್ಥಿಸಿಕೊಂಡಿದೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ