Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಮಂಡಿಸಿದ ಬಜೆಟ್​ನಲ್ಲಿ ವಿಶೇಷತೆ ಏನಿಲ್ಲ: ಆದಾಯ ಹೆಚ್ಚಿಸಲು ಅಬಕಾರಿ ಸುಂಕ ಹೆಚ್ಚಳ ಎಂದ ಮಾಜಿ ಸಿಎಂ HD ಕುಮಾರಸ್ವಾಮಿ

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್​ನಲ್ಲಿ ವಿಶೇಷತೆ ಏನಿಲ್ಲ. ಒಂದೇ ವರ್ಷಕ್ಕೆ ಜನರ ಮೇಲೆ 85,000 ಕೋಟಿ ಸಾಲ ಹೇರುತ್ತಿದ್ದಾರೆ. ಆದಾಯ ಹೆಚ್ಚಿಸಲು ಸರ್ಕಾರ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಅನ್ನಭಾಗ್ಯ ಅಕ್ಕಿಗೆ ನೀಡುವ ಹಣ ಅಬಕಾರಿ ಇಲಾಖೆಗೆ ಹೋಗುತ್ತೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಮಂಡಿಸಿದ ಬಜೆಟ್​ನಲ್ಲಿ ವಿಶೇಷತೆ ಏನಿಲ್ಲ: ಆದಾಯ ಹೆಚ್ಚಿಸಲು ಅಬಕಾರಿ ಸುಂಕ ಹೆಚ್ಚಳ ಎಂದ ಮಾಜಿ ಸಿಎಂ HD ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ
Follow us
Sunil MH
| Updated By: ಗಂಗಾಧರ​ ಬ. ಸಾಬೋಜಿ

Updated on:Jul 07, 2023 | 4:20 PM

ಬೆಂಗಳೂರು: ಆದಾಯ ಹೆಚ್ಚಿಸಲು ಸರ್ಕಾರ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಅನ್ನಭಾಗ್ಯ ಅಕ್ಕಿಗೆ ನೀಡುವ ಹಣ ಅಬಕಾರಿ ಇಲಾಖೆಗೆ ಹೋಗುತ್ತೆ. ಆ ಅನ್ನಭಾಗ್ಯದ ಹಣವನ್ನು ತೆಗೆದುಕೊಂಡು ಮನೆಗೆ ಹೋಗುತ್ತಾನೋ, ಇನ್ನೆಲ್ಲಿಗೆ ಹೋಗುತ್ತಾನೋ ನನಗೆ ಗೊತ್ತಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್​ನಲ್ಲಿ ವಿಶೇಷತೆ ಏನಿಲ್ಲ ಎಂದಿದ್ದಾರೆ.

ಬಜೆಟ್​ಗಳ ಅಧ್ಯಯನ ಮಾಡಿದ್ದೇನೆ ಎಂದ ಹೆಚ್​.ಡಿ ಕುಮಾರಸ್ವಾಮಿ

ಒಂದೇ ವರ್ಷಕ್ಕೆ ಜನರ ಮೇಲೆ 85,000 ಕೋಟಿ ಸಾಲ ಹೇರುತ್ತಿದ್ದಾರೆ. 1995ರಿಂದ ಈವರೆಗೆ ಸಿದ್ದರಾಮಯ್ಯ  ಮಂಡಿಸಿದ 13 ಬಜೆಟ್​ಗಳ ಅಧ್ಯಯನ ಮಾಡಿದ್ದೇನೆ. ದುಡಿಯುವ ಕೈಗಳಿಗೆ ಸ್ವಾವಲಂಬಿಯಾಗಿಸಲು ಯೋಜನೆ ಏನು ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Agriculture, Horticulture Budget 2023: ಸಿದ್ಧರಾಮಯ್ಯ ಬಜೆಟ್​ನಲ್ಲಿ ರೈತರ ಜೀವಾಳ ಕೃಷಿ ಮತ್ತು ತೋಟಗಾರಿಕೆಗೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

ನಿಮ್ಮ ಯಾವ ಗ್ಯಾರಂಟಿಗೂ ನನ್ನ ತಕರಾರಿಲ್ಲ. ಇನ್ನೂ ಎರಡು ಗ್ಯಾರಂಟಿಗಳನ್ನು ಕೊಡಿ ನಮ್ಮದೇನು ತಕರಾರಿಲ್ಲ. ಗ್ಯಾರಂಟಿಗಳಿಗೆ ವರ್ಷಕ್ಕೆ 50-60 ಸಾವಿರ ಕೋಟಿ ವೆಚ್ಚ ಆಗಲಿದೆ. ಬೇರೆ ಯಾವುದಕ್ಕೂ ಬಜೆಟ್​ನಲ್ಲಿ ಸರ್ಕಾರ ಹಣ ಮೀಸಲಿಟ್ಟಿಲ್ಲ. ಕೇಂದ್ರ ಮತ್ತು ಹಿಂದಿನ ಸರ್ಕಾರವನ್ನು ದೂಷಿಸುವ ಬಜೆಟ್ ಅಷ್ಟೇ ಎಂದರು.

ಈ ಬಜೆಟ್​ನಲ್ಲಿ ಏನೂ ಇಲ್ಲ

ನೀರಾವರಿ, ಕೃಷಿಗೆ ಹಾಗೂ ರಾಜ್ಯದ ಜನರು ಬದುಕು ಕಟ್ಟಿಕೊಳ್ಳಲು ಸ್ವಾಭಿಮಾನಿಯನ್ನಾಗಿ ಮಾಡಲು ಬಜೆಟ್ ಎಷ್ಟು ಸಹಕಾರಿಯಾಗುತ್ತೆ. ಕೇಂದ್ರ-ರಾಜ್ಯ ಸರ್ಕಾರ ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು. ಪ್ರತಿ ಬಾರಿ ಕೇಂದ್ರದವರನ್ನು ದೂಷಿಸಿದರೆ ಯಾಕೆ ನೆರವು ನೀಡುತ್ತಾರೆ. ಕೇಂದ್ರ ಸರ್ಕಾರವನ್ನು ರಾಜ್ಯ ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಕರ್ನಾಟಕದ ಬಜೆಟ್ ದೇಶಕ್ಕೆ ಸಂದೇಶ ಕೊಡುವ ಬಜೆಟ್ ಅಂತೆ. ಬಹಳ ಆಕರ್ಷಕ ಬಜೆಟ್ ಅಂತೆ, ಈ ಬಜೆಟ್​ನಲ್ಲಿ ಏನೂ ಇಲ್ಲ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಭದ್ರತಾ ಲೋಪ: ಬಜೆಟ್ ಮಂಡನೆ ವೇಳೆ ಸದನದಲ್ಲಿ ಬಂದು ಕುಳಿತ ಅನಾಮಿಕ ವ್ಯಕ್ತಿ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಲೆಖಾನುದಾನ ಪಡೆದಿದ್ದಾರೆ. ಅದರ ಮುಂದುವರೆದ ಬಜೆಟ್ ಇದು. ನಮ್ಮ ಹಣಕಾಸು ಸಚಿವರ ದಾಖಲೆಯ ಬಜೆಟ್ ಇದು. ರಾಮಕೃಷ್ಣ ಹೆಗಡೆಯವರ ನಂತರ ಅತ್ಯಂತ ಹಿರಿಯ ರಾಜಕಾರಣಿ. ಜನತಾ ದಳದ ಆರ್ಥಿಕ ಸಚಿವರಾಗಿ 5 ಬಜೆಟ್, ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ 2 ಬಜೆಟ್​ ಹಾಗೂ ಅವರೇ ಸಿಎಂ ಆಗಿ 6 ಬಜೆಟ್ ಮಂಡಿಸಿದ್ದಾರೆ.

ರಾಜ್ಯದ ಅನುಭವಿ ಆರ್ಥಿಕ ಸಚಿವರು ರಾಜ್ಯದ ಜನರಿಗೆ ಸರ್ವರಿಗೂ ಸಮಪಾಲು, ಸಮಬಾಳಿನ ಬಜೆಟ್ ಮಂಡಿಸಿದ್ದಾರೆ. ಇದು ರಾಜ್ಯದ ಬಜೆಟ್ ಪುಸ್ತಕ ಅನ್ನುವುದಕ್ಕಿಂತ ಕೇಂದ್ರ ಸರ್ಕಾರ ಮತ್ತು ಹಿಂದಿನ ಸರ್ಕಾರ ಬಿಜೆಪಿಯ ಆಡಳಿತ ಬಂದ ನಂತರ ಆರ್ಥಿಕ ಶಿಸ್ತನ್ನ ಉಲ್ಲಂಘಿಸಿದ್ದಾರೆ. ಕೇಂದ್ರ ಸರ್ಕಾರ ನಮಗೆ ಅನ್ಯಾಯ ಮಾಡಿದೆ ಎಂಬ ಆರೋಪ ಮಾಡಿದ್ದಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:19 pm, Fri, 7 July 23

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ