AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಅಲುಗಾಡುತ್ತಾ ಸಿಎಂ ಕುರ್ಚಿ? ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ ಶಿಷ್ಯ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ, ಇದರ ಮಧ್ಯೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಕಡಿಮೆ ಸ್ಥಾನಗಳು ಬಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರ ಮಧ್ಯೆ ಇದೀಗ ಸಿದ್ದರಾಮಯ್ಯನವರ ಶಿಷ್ಯನ ಬಾಯಲ್ಲೇ ಇಂತಹದೊಂದು ಮಾತು ಬಂದಿದ್ದು ಅಚ್ಚರಿಗೆ ಕಾರಣವಾಗಿದೆ.

ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಅಲುಗಾಡುತ್ತಾ ಸಿಎಂ ಕುರ್ಚಿ? ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ ಶಿಷ್ಯ
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Apr 18, 2024 | 4:06 PM

Share

ಕೋಲಾರ, (ಏಪ್ರಿಲ್ 18): ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಪ್ರಚಾರ ಭರ್ಜರಿಯಾಗಿ ನಡೀತಿದ್ರೆ, ಸಿಎಂ ತವರು ಕ್ಷೇತ್ರದಲ್ಲಿ ಮಾತ್ರ ಪ್ರಚಾರ ಮತ್ತೊಂದು ಹಂತಕ್ಕೆ ತಲುಪಿದೆ. ಮೈಸೂರು-ಚಾಮರಾಜನಗರದಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ (Siddaramaiah) 9 ದಿನ ಪ್ರಚಾರ ಮಾಡಿದ್ದಾರೆ. ಇದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಬಾರಿ ಈ ಎರಡೂ ಕ್ಷೇತ್ರಗಳನ್ನು ಗೆಲ್ಲಲೇಬೇಕು. ಇಲ್ಲವಾದಲ್ಲಿ ಸಿಎಂ ಕುರ್ಚಿ ಕಂಟಕ ಇದೆ ಎನ್ನುವ ಮಾತುಗಳು ಹರಿದಾಡುತ್ತಿವೆ. ಇದರ ಮಧ್ಯೆ ಇದೀಗ ಸಿದ್ದರಾಮಯ್ಯನವರ ಶಿಷ್ಯ, ಸಚಿವ ಬೈರತಿ ಸುರೇಶ್​ (Byrathi suresh) ಸಹ  ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕವಾಗಲಿದೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಇದು ರಾಜ್ಯ ಕಾಂಗ್ರೆಸ್​ನಲ್ಲಿ ಬಾರೀ ಸಂಚಲನಕ್ಕೆ ಕಾರಣವಾಗಿದೆ.

ಇಂದು (ಏಪ್ರಿಲ್ 18) ಕೋಲಾರ ನಗರದ ಹಾಲಿಸ್ಟರ್ ಭವನದಲ್ಲಿ ನಡೆದ ಕುರುಬ ಸಮುದಾಯದ ಮುಖಂಡ ಸಭೆಯಲ್ಲಿ ಮಾತನಾಡಿದ ಸಚಿವ ಬೈರತಿ ಸುರೇಶ್, ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕವಾಗಲಿದೆ. ಹೀಗಾಗಿ ಕುರುಬ ಸಮುದಾಯ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು. ನಿಮ್ಮ ಬೆಂಬಲ ಕಾಂಗ್ರೆಸ್​​ ಪಕ್ಷದ ಮೇಲಿರಲಿ, ಸಿದ್ದರಾಮಯ್ಯನವರ ಮೇಲಿರಲಿ, ಹಾಗೇ ಅಭ್ಯರ್ಥಿ ಗೌತಮ್​ ಮೇಲಿರಲಿ. ಒಂದು ವೇಳೆ ನೀವು ಬೇರೆ ಮನಸ್ಸು ಮಾಡಿ ಬೇರೆ ಅಭ್ಯರ್ಥಿ ಏನಾದರೂ ಗೆದ್ದರೆ ಸಿದ್ದರಾಮಯ್ಯನವರ ಸೀಟಿಗೆ ಕಂಟಕವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಡಾ ಕೆ ಸುಧಾಕರ್ ಜೈಲಿಗೆ ಹೋಗುವ ಸ್ಥಿತಿ ಬರಲಿದೆ: ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇದೇ ಅರ್ಥದಲ್ಲಿ ಹೇಳಿದ್ದ ಮತ್ತೋರ್ವ ಕೈ ಶಾಸಕ

ಮೊನ್ನೇ ಅಷ್ಟೇ ಕಾಂಗ್ರೆಸ್ ಶಾಸಕ ಎಸ್‌ಆರ್‌ ಶ್ರೀನಿವಾಸ್‌ ಅವರು ಸಹ ಇದೇ ಅರ್ಥದಲ್ಲಿ ಹೇಳಿಕೆ ನೀಡಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್‌ ಹೆಚ್ಚಿನ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಸಂಗ ಬರುತ್ತದೆ ಎಂದು ಹೇಳಿದ್ದರು. ಈ ಮೂಲಕ ಲೋಕಸಭಾ ಚುನಾವಣೆಯ ಬಳಿಕ ಮುಖ್ಯಮಂತ್ರಿ ಬದಲಾಗುವ ಸುಳಿವನ್ನು ಗುಬ್ಬಿ ಶಾಸಕ ನೀಡಿದ್ದರು. ಈ ಹೇಳಿಕೆ ಕಾಂಗ್ರೆಸ್​ನಲ್ಲಿ ಮಾತ್ರವಲ್ಲದೇ ರಾಜ್ಯ ರಾಜಕಾರನದಲ್ಲೂ ಸಂಚಲನ ಸೃಷ್ಟಿಸಿತ್ತು.

ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ ಸಿದ್ದರಾಮಯ್ಯ ಈಗಾಗಲೇ ಶಾಸಕರು, ಸಚಿವರು, ನಗಮ ಮಂಡಳಿ ಅಧ್ಯಕ್ಷರಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಟಾಸ್ಕ್ ನೀಡಿದೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈ ಬಾರಿ ತಮ್ಮ ತವರು ಜಿಲ್ಲೆಯ ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರಬೇಕೆಂದು ಹೈಕಮಾಂಡ್​ ಸೂಚಿಸಿದೆ ಎಂದು ತಿಳಿದುಬಂದಿದೆ. ಹೀಗಾಗಿ ​ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಚುನಾವಣೆ ದಿನಾಂಕ ಘೋಷಣೆಯಾದ ಆರಂಭದಲ್ಲೇ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಎರಡ್ಮೂರು ದಿನಗಳ ಕಾಲ ಠಿಕಾಣಿ ಹೂಡಿ ನಾನಾ ತಂತ್ರಗಳನ್ನು ರೂಪಿಸಿದ್ದಾರೆ.

2 ಕ್ಷೇತ್ರದಲ್ಲಿ 9 ದಿನ ಪ್ರಚಾರ

ಈ ಬಾರಿ ಸಿಎಂ ಸಿದ್ದರಾಮಯ್ಯ ಲೋಕಸಭಾ ಚುನಾವಣೆ ಪ್ರಚಾರ ಶುರು ಮಾಡಿದ್ದೇ ತವರು ಜಿಲ್ಲೆಯಿಂದ. ಮಾರ್ಚ್ 24 ರಿಂದ 4 ದಿನಗಳ ಕಾಲ ಎರಡು ಕ್ಷೇತ್ರದಲ್ಲಿ ಸಿಎಂ ಪ್ರಚಾರ ಮಾಡಿದ್ರೆ, ಏಪ್ರಿಲ್ 01ರಿಂದ ಮತ್ತೆ 3 ದಿನಗಳ ಕಾಲ ಸಿದ್ದರಾಮಯ್ಯ ತಮ್ಮ ಸಮಯವನ್ನ ಎರಡು ದಿನಗಳ ಮೈಸೂರು ಹಾಗೂ ಚಾಮರಾಜನಗರಕ್ಕೆ ಮೀಸಲಿಟ್ಟಿದ್ರು. ಹೀಗೆ ಸಿದ್ದರಾಮಯ್ಯ ಮೈಸೂರು ಮತ್ತು ಚಾಮರಾಜನಗರಕ್ಕೆ ಸಿಎಂ ಒಟ್ಟು 9 ದಿನ ಪ್ರಚಾರ ಮಾಡಿದ್ದಾರೆ.

ನಿಜಕ್ಕೂ ಚುನಾವಣೆ ಬಳಿಕ ಬದಲಾಗ್ತಾರಾ ಸಿಎಂ?

ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ವಿಧಾನಸಭಾ ಚುನಾವಣೆ ಮುಗಿದಾಗಿನಿಂದಲೂ ಸಿಎಂ ಸ್ಥಾನದ ವಿಚಾರವಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಉತ್ತಮ ಸಾಧನೆ ಮಾಡದಿದ್ದರೆ ಸಿದ್ದರಾಮಯ್ಯ ಅವರ ಸಿಎಂ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್‌ ಸಿಎಂ ಆಗಿಲ್ಲ ಎಂದರೂ ಬೇರೆಯವರನ್ನು ಮುಖ್ಯಮಂತ್ರಿ ಮಾಡುವ ಸಾಧ್ಯತೆ ಇದೆ. ಅದಕ್ಕಾಗಿಯೇ ದಲಿತ ಸಿಎಂ ಕೂಗು ಕೂಡ ನಿರಂತರವಾಗಿ ಕೇಳಿಬರುತ್ತಲೇ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:57 pm, Thu, 18 April 24

ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್