AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸರ್ಕಾರ 2.O: ಮೇ. 27 ರಂದು ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಸೇರುವ 24 ಸಚಿವರ ಪಟ್ಟಿಯನ್ನು ಕಾಂಗ್ರೆಸ್​ ಹೈಕಮಾಂಡ್ ಬಹುತೇಕ​​ ಅಂತಿಮಗೊಳಿಸಿದೆ ಎಂದು ಕಾಂಗ್ರೆಸ್ ಮೂಲಗಳಿಂದ ಮಾಹಿತಿ ದೊರೆತಿದೆ.

ಸಿದ್ದರಾಮಯ್ಯ ಸರ್ಕಾರ 2.O: ಮೇ. 27 ರಂದು ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ
ಡಿಕೆ ಶಿವಕುಮಾರ್​, ಸಿದ್ದರಾಮಯ್ಯ
ವಿವೇಕ ಬಿರಾದಾರ
|

Updated on:May 26, 2023 | 10:41 PM

Share

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramiah) ಸಂಪುಟಕ್ಕೆ ಸೇರುವ 24 ಸಚಿವರ ಪಟ್ಟಿಯನ್ನು ಕಾಂಗ್ರೆಸ್​ ಹೈಕಮಾಂಡ್ ಬಹುತೇಕ​​ ಅಂತಿಮಗೊಳಿಸಿದೆ ಎಂದು ಕಾಂಗ್ರೆಸ್​ (Congress) ಮೂಲಗಳಿಂದ ಮಾಹಿತಿ ದೊರೆತಿದೆ. ಮೊದಲ ಹಂತದಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ 8 ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದು, ಇದೀಗ ನಾಳೆ (ಮೇ.27) ರಂದು ರಾಜಭವನದ ಗಾಜಿನಮನೆಯಲ್ಲಿ ಬೆಳಿಗ್ಗೆ 11:30 ನಿಮಿಷಕ್ಕೆ 24 ನೂತನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಜೋಡೆತ್ತು ಸರ್ಕಾರದ ಸಚಿವ ಸಂಪುಟ ರಚನೆಯಾಗಲಿದೆ.

ಹಲವು ಆಕಾಂಕ್ಷಿಗಳ ಒತ್ತಡ ಹಾಗೂ ಬೆಂಬಲಿಗರಿಗೆ ಅವಕಾಶ ಕೊಡಿಸುವ ನಾಯಕರ ಪ್ರಯತ್ನದಿಂದಾಗಿ ಕಳೆದ ಎರಡು ದಿನಗಳಿಂದ ಹೊಸ ಸಚಿವರ ಯಾದಿ ಅಂತಿಮಗೊಳಿಸುವ ಕಸರತ್ತು ನಡೆಯಿತು. ಜತೆಗೆ ಪೂರ್ಣ ಪ್ರಮಾಣದ ಸಂಪುಟ ಅಸ್ತಿತ್ವಕ್ಕೆ ಬಂದು ಸರಕಾರ ಆರಂಭದಲ್ಲೇ ಜಬರ್‌ದಸ್ತ್ ಟೇಕಾಫ್‌ ಆಗಿದೆ ಸಂದೇಶ ನೀಡಲು ಎಲ್ಲ 24 ಸ್ಥಾನಗಳನ್ನೂ ಭರ್ತಿ ಮಾಡಲು ಹೈಕಮಾಂಡ್‌ ಸೂಚಿಸಿದೆ.

ಇದನ್ನೂ ಓದಿ: ನಿಮ್ಮದು ಪ್ರೇಮ ರಾಜಕಾರಣವೇ; ಅಶ್ವತ್ಥನಾರಾಯಣಗೆ ಕಾಂಗ್ರೆಸ್ ಪ್ರಶ್ನೆ

ಜಾತಿ, ಪ್ರದೇಶ, ಹಿರಿತನ ಒಳಗೊಂಡು ನಾನಾ ಮಾನದಂಡಗಳಡಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತ್ಯೇಕ ಪಟ್ಟಿ ಹಿಡಿದುಕೊಂಡು ಬುಧವಾರ ಸಂಜೆ ದೆಹಲಿಗೆ ಹಾರಿದ್ದರು. ಇನ್ನು ದೆಹಲಿಗೆ ಬಂದಿದ್ದ ನಾಯಕರೊಂದಿಗೆ ಕೆ.ಸಿ.ವೇಣುಗೋಪಾಲ್‌ ತಡರಾತ್ರಿ ಒಂದು ಸುತ್ತಿನ ಸಭೆ ನಡೆಸಿದ್ದರು. ಗುರುವಾರ ಮತ್ತೆ ವೇಣುಗೋಪಾಲ್‌ ನಿವಾಸದಲ್ಲಿ 2ನೇ ಸುತ್ತಿನ ಸಭೆ ನಡೆಯಿತು.

ಈ ಬಳಿಕ ಇಂದು ಮೇ. 26 ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ನಡುವಿನ ಚರ್ಚೆ ಬಳಿಕ 24 ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಾಯಿತು.

ಇನ್ನು ಸಚಿವರ ಯಾದಿ ಕಸರತ್ತು ಪೂರ್ಣಗೊಂಡ ಬಳಿಕ ರಾಜ್ಯಪಾಲರ ಲಭ್ಯತೆಯ ಬಗ್ಗೆ ಸರಕಾರ ಮಾಹಿತಿ ಕೇಳಿ ಪಡೆದುಕೊಂಡಿದೆ. ಭಾನುವಾರ ನೂತನ ಪಾರ್ಲಿಮೆಂಟ್‌ ಕಟ್ಟಡ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಶನಿವಾರ ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಲು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಒಪ್ಪಿಗೆ ಸೂಚಿಸಿದ್ದಾರೆ.

ಸಚಿವರ ಸಂಭವ್ಯ ಪಟ್ಟಿ

  • ಹೆಚ್.ಕೆ.ಪಾಟೀಲ್​​
  • ಕೃಷ್ಣಭೈರೇಗೌಡ
  • ಚಲುವರಾಯಸ್ವಾಮಿ
  • ಪಿರಿಯಾಪಟ್ಟಣ ವೆಂಕಟೇಶ್ಡಾ
  • ಹೆಚ್.ಸಿ.ಮಹದೇವಪ್ಪ
  • ಈಶ್ವರ ಖಂಡ್ರೆ
  • ಕೆ.ಎನ್.ರಾಜಣ್ಣ
  • ದಿನೇಶ್ ಗುಂಡೂರಾವ್
  • ಶರಣಬಸಪ್ಪ ದರ್ಶನಾಪುರ
  • ಶಿವಾನಂದ ಪಾಟೀಲ್
  • ಆರ್.ಬಿ.ತಿಮ್ಮಾಪುರ
  • ಎಸ್.ಎಸ್.ಮಲ್ಲಿಕಾರ್ಜುನ,
  • ಶಿವರಾಜ ತಂಗಡಗಿ
  • ಡಾ.ಶರಣ ಪ್ರಕಾಶ್ ಪಾಟೀಲ್
  • ಮಂಕಾಳು ವೈದ್ಯ,
  • ಲಕ್ಷ್ಮೀ ಹೆಬ್ಬಾಳ್ಕರ್​
  • ರಹೀಂ ಖಾನ್
  • ಡಿ.ಸುಧಾಕರ್
  • ಸಂತೋಷ್ ಲಾಡ್​
  • ಬೋಸರಾಜು
  • ಬಿ.ಎಸ್.ಸುರೇಶ್
  • ಮಧು ಬಂಗಾರಪ್ಪ
  • ಎಂ.ಸಿ.ಸುಧಾಕರ್
  • ಬಿ.ನಾಗೇಂದ್ರ

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:46 pm, Fri, 26 May 23

ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಇಂದು ಉದ್ಘಾಟನೆಯಾಗಲಿರುವ ಮಾತಾ ತ್ರಿಪುರ ಸುಂದರಿ ದೇವಾಲಯ ಹೇಗಿದೆ ನೋಡಿ
ಇಂದು ಉದ್ಘಾಟನೆಯಾಗಲಿರುವ ಮಾತಾ ತ್ರಿಪುರ ಸುಂದರಿ ದೇವಾಲಯ ಹೇಗಿದೆ ನೋಡಿ