AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈ ಎಲೆಕ್ಷನ್ ಟೆನ್ಶನ್‌ ನಡುವೆ ಹೆಚ್​ಡಿ ದೇವೇಗೌಡರು ದೆಹಲಿಯತ್ತ, ಸಿಎಂ ಬಸವರಾಜ ಬೊಮ್ಮಾಯಿ ಮಂಡ್ಯದತ್ತ ಪ್ರಯಾಣ!

ಬೆಂಗಳೂರು: ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬೈ ಎಲೆಕ್ಷನ್ ಮತ ಎಣಿಕೆ ನಡೆದಿದ್ದು, ಫಲಿತಾಂಶ ಕುತೂಃಲ ಕೆರಳಿಸಿದೆ. ಫಲಿತಾಂಶ ಹಾವು ಏಣಿಯಂತೆ ಸರಿದಾಡುತ್ತಿದ್ದು, ರಾಜಕೀಯ ನಾಯಕರು ಭಾರೀ ಟೆನ್ಶನ್​ನಲ್ಲಿದ್ದಾರೆ. ಈ ನಡುವೆ ಜೆಡಿಎಸ್ ನೇತಾರ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ದಿಢೀರನೆ ದೆಹಲಿಯತ್ತ ಪ್ರಯಾಣ ಬೆಳೆಸಿದ್ದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂರ್ವನಿಗದಿಯಂತೆ ಮಂಡ್ಯದತ್ತ ಪ್ರಯಾಣ ಮಾಡಿದ್ದಾರೆ. ಮಾಜಿ ಪ್ರಧಾನಿ ದೇವೆಗೌಡ ದಿಢೀರನೆ ಬೆಂಗಳೂರಿನಿಂದ ದೆಹಲಿಗೆ ಇಂದು ಬೆಳಗ್ಗೆ 9 ಗಂಟೆಗೆ ತೆರಳಿದ್ದಾರೆ. ರಾತ್ರಿ ವೇಳೆಗೆ ದೇವೆಗೌಡ್ರು […]

ಬೈ ಎಲೆಕ್ಷನ್ ಟೆನ್ಶನ್‌ ನಡುವೆ ಹೆಚ್​ಡಿ ದೇವೇಗೌಡರು ದೆಹಲಿಯತ್ತ, ಸಿಎಂ ಬಸವರಾಜ ಬೊಮ್ಮಾಯಿ ಮಂಡ್ಯದತ್ತ ಪ್ರಯಾಣ!
ಬೈ ಎಲೆಕ್ಷನ್ ಟೆನ್ಶನ್‌ ನಡುವೆ ದೇವೇಗೌಡರು ದೆಹಲಿಯತ್ತ, ಸಿಎಂ ಬೊಮ್ಮಾಯಿ ಮಂಡ್ಯದತ್ತ ಪ್ರಯಾಣ!
TV9 Web
| Updated By: ಸಾಧು ಶ್ರೀನಾಥ್​|

Updated on:Nov 02, 2021 | 10:21 AM

Share

ಬೆಂಗಳೂರು: ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬೈ ಎಲೆಕ್ಷನ್ ಮತ ಎಣಿಕೆ ನಡೆದಿದ್ದು, ಫಲಿತಾಂಶ ಕುತೂಃಲ ಕೆರಳಿಸಿದೆ. ಫಲಿತಾಂಶ ಹಾವು ಏಣಿಯಂತೆ ಸರಿದಾಡುತ್ತಿದ್ದು, ರಾಜಕೀಯ ನಾಯಕರು ಭಾರೀ ಟೆನ್ಶನ್​ನಲ್ಲಿದ್ದಾರೆ. ಈ ನಡುವೆ ಜೆಡಿಎಸ್ ನೇತಾರ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ದಿಢೀರನೆ ದೆಹಲಿಯತ್ತ ಪ್ರಯಾಣ ಬೆಳೆಸಿದ್ದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂರ್ವನಿಗದಿಯಂತೆ ಮಂಡ್ಯದತ್ತ ಪ್ರಯಾಣ ಮಾಡಿದ್ದಾರೆ.

ಮಾಜಿ ಪ್ರಧಾನಿ ದೇವೆಗೌಡ ದಿಢೀರನೆ ಬೆಂಗಳೂರಿನಿಂದ ದೆಹಲಿಗೆ ಇಂದು ಬೆಳಗ್ಗೆ 9 ಗಂಟೆಗೆ ತೆರಳಿದ್ದಾರೆ. ರಾತ್ರಿ ವೇಳೆಗೆ ದೇವೆಗೌಡ್ರು ಬೆಂಗಳೂರಿಗೆ ವಾಪಸು ಆಗಲಿದ್ದಾರೆ. ಹಾನಗಲ್​ ಅಸೆಂಬ್ಲಿ ಕ್ಷೇತ್ರದಲ್ಲಿ ಜೆಡಿಎಸ್ ಹೀನಾಯ ಸೋಲಿನತ್ತ ಮುಖ ಮಾಡಿದೆ.

ಇನ್ನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿಂದಗಿ ಮತ್ತು ಹಾನಗಲ್ ಅಸೆಂಬ್ಲಿ ಆರಂಭಿಕ ಫಲಿತಾಂಶಗಳು ಹಾವು ಏಣಿ ಆಟದಂತೆ ನಡೆದಿದ್ದು, ಬೆಳಗ್ಗೆಯಿಂದ ಮನೆಯಲ್ಲಿ ಟೆನ್ಶನ್​ನಲ್ಲಿಯೇ ಟಿವಿ ವರದಿ ನೋಡುತ್ತಿದ್ದರು.

ಸಿಎಂ ಬೊಮ್ಮಾಯಿ ಅವರು ಇವತ್ತು ಮಧ್ಯಾಹ್ನದ ವೇಳೆಗೆ ಮೊದಲು ಕಬಿನಿ ಜಲಾಶಯಕ್ಕೆ ಬಾಗಿನ ಮತ್ತು ಆ ನಂತರ ಕೆಆರ್​ಎಸ್ ಅಣೆಕಟ್ಟೆ ಬಳಿ ಕಾವೇರಿ ತಾಯಿಗೆ ಬಾಗಿನ ಕೊಟ್ಟು ಬರುತ್ತೇನೆ ಎಂದು ಇದೀಗ ಬೆಂಗಳೂರಿನಿಂದ ಹೊರಟಿದ್ದಾರೆ.

ಚುನಾವಣಾ ಫಲಿತಾಂಶ ತಾಜಾ ಏನು? (10.10 ರ ವೇಳೆಗೆ): ಸಿಂದಗಿ ಉಪಚುನಾವಣೆ ಫಲಿತಾಂಶದಲ್ಲಿ ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡು ಬಂದಿರುವ ಬಿಜೆಪಿ ಮೊದಲ, ಎರಡನೇ, ಮೂರನೇ, ನಾಲ್ಕನೇ ಹಾಗೂ ಐದನೇ ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತ್ತು.

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ವಿವರ, ನಾಲ್ಕನೇ ಸುತ್ತಿನಲ್ಲಿ ಪಡೆದ ಮತಗಳ ವಿವರ ಹೀಗಿದೆ: ಬಿಜೆಪಿ-17,769, ಕಾಂಗ್ರೆಸ್‌-18,019, ಜೆಡಿಎಸ್-149.

ತಾಜಾ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್​ ಮಾಡಿ:

Karnataka ByElection Results 2021 Counting LIVE: ಇಂದು ಹಾನಗಲ್​, ಸಿಂದಗಿ ಉಪಚುನಾವಣೆ ಫಲಿತಾಂಶ

(sindagi hangal assembly by election result cm basavaraj bommai leaves for mandya and hd devegowda leaves for delhi)

Published On - 10:12 am, Tue, 2 November 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು