ವಿಧಾನಪರಿಷತ್ ಸ್ಥಾನಕ್ಕೆ ಸೀತಾರಾಂ, ಉಮಾಶ್ರೀ, ಸುಧಾಮ್‌ ದಾಸ್‌ ಹೆಸರಿಗೆ ಅನುಮೋದನೆ; ದಲಿತ ಸಚಿವರು, ನಾಯಕರಿಗೆ ತೀವ್ರ ಹಿನ್ನಡೆ

Karnataka Legislative Council; ಸೀತಾರಾಂ ಹಾಗೂ ಸುಧಾಮ್ ದಾಸ್ ಅವರನ್ನು ನಾಮನಿರ್ದೇಶ ಮಾಡುವುದನ್ನು ಪ್ರತಿಭಟಿಸಿ ದಲಿತ ಸಚಿವರು, ನಾಯಕರು ಹೈಕಮಾಂಡ್​ಗೆ ಪತ್ರ ಬರೆದಿದ್ದರು. ಇವರಿಬ್ಬರ ಬದಲಿಗೆ ಬೇರೆ ಕಾರ್ಯಕರ್ತರಿಗೆ ಅವಕಾಶ ನೀಡುವಂತೆ ಒತ್ತಾಯಿಸಿದ್ದರು. ಇಷ್ಟೇ ಅಲ್ಲದೆ, ಇವರಿಬ್ಬರ ವಿರುದ್ಧ ರಾಜ್ಯಪಾಲರಿಗೂ ದೂರು ನೀಡಿದ್ದರು. ಇವೆಲ್ಲವನ್ನೂ ಮೀರಿ ಪರಿಷತ್ ಸ್ಥಾನ ಪಡೆಯುವಲ್ಲಿ ಇಬ್ಬರೂ ಯಶಸ್ವಿಯಾಗಿದ್ದಾರೆ.

ವಿಧಾನಪರಿಷತ್ ಸ್ಥಾನಕ್ಕೆ ಸೀತಾರಾಂ, ಉಮಾಶ್ರೀ, ಸುಧಾಮ್‌ ದಾಸ್‌ ಹೆಸರಿಗೆ ಅನುಮೋದನೆ; ದಲಿತ ಸಚಿವರು, ನಾಯಕರಿಗೆ ತೀವ್ರ ಹಿನ್ನಡೆ
ವಿಧಾನಪರಿಷತ್ ಸ್ಥಾನಕ್ಕೆ ಸೀತಾರಾಂ, ಉಮಾಶ್ರೀ, ಸುಧಾಮ್‌ ದಾಸ್‌ ಹೆಸರಿಗೆ ಅನುಮೋದನೆ
Follow us
| Updated By: ಗಣಪತಿ ಶರ್ಮ

Updated on:Aug 19, 2023 | 5:44 PM

ಬೆಂಗಳೂರು, ಆಗಸ್ಟ್ 19: ದಲಿತ ಸಚಿವರು, ನಾಯಕರ ತೀವ್ರ ವಿರೋಧದ ನಡುವೆಯೂ ವಿಧಾನಪರಿಷತ್ ಸ್ಥಾನಕ್ಕೆ (MLC Post) ಕರ್ನಾಟಕ ಕಾಂಗ್ರೆಸ್ (Karnataka Congress) ಸರ್ಕಾರ ಶಿಫಾರಸು ಮಾಡಿದ್ದ ಮೂವರ ಹೆಸರುಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶನಿವಾರ ಅನುಮೋದನೆ ನೀಡಿದ್ದಾರೆ. ಸೀತಾರಾಂ, ಉಮಾಶ್ರೀ, ಸುಧಾಮ್‌ ದಾಸ್‌ ಹೆಸರುಗಳಿಗೆ ರಾಜ್ಯಪಾಲರ ಮುದ್ರೆ ಬಿದ್ದಿದೆ. ಇದರೊಂದಿಗೆ ಕಾಂಗ್ರೆಸ್ ಸರ್ಕಾರದ ದಲಿತ ಸಚಿವರು, ನಾಯಕರಿಗೆ ತೀವ್ರ (Dalit Leaders) ಹಿನ್ನಡೆಯಾದಂತಾಗಿದೆ. ಸೀತಾರಾಂ ಹಾಗೂ ಸುಧಾಮ್ ದಾಸ್ ಅವರನ್ನು ಪರಿಷತ್​ಗೆ ನಾಮನಿರ್ದೇಶನ ಮಾಡುವುದಕ್ಕೆ ಕಾಂಗ್ರೆಸ್​ನ ಒಂದು ವರ್ಗದ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಸೀತಾರಾಂ ಹಾಗೂ ಸುಧಾಮ್ ದಾಸ್ ಅವರನ್ನು ನಾಮನಿರ್ದೇಶ ಮಾಡುವುದನ್ನು ಪ್ರತಿಭಟಿಸಿ ದಲಿತ ಸಚಿವರು, ನಾಯಕರು ಹೈಕಮಾಂಡ್​ಗೆ ಪತ್ರ ಬರೆದಿದ್ದರು. ಇವರಿಬ್ಬರ ಬದಲಿಗೆ ಬೇರೆ ಕಾರ್ಯಕರ್ತರಿಗೆ ಅವಕಾಶ ನೀಡುವಂತೆ ಒತ್ತಾಯಿಸಿದ್ದರು. ಇಷ್ಟೇ ಅಲ್ಲದೆ, ಇವರಿಬ್ಬರ ವಿರುದ್ಧ ರಾಜ್ಯಪಾಲರಿಗೂ ದೂರು ನೀಡಿದ್ದರು. ಇವೆಲ್ಲವನ್ನೂ ಮೀರಿ ಪರಿಷತ್ ಸ್ಥಾನ ಪಡೆಯುವಲ್ಲಿ ಇಬ್ಬರೂ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಎಐಸಿಸಿ ಅಧ್ಯಕ್ಷರಿಗೆ ನಾನು ಪತ್ರ ಬರೆದಿದ್ದು ನಿಜ: ಗೃಹಸಚಿವ ಪರಮೇಶ್ವರ್

ಈ ಮಧ್ಯೆ, ಸೀತಾರಾಂ ಹಾಗೂ ಸುಧಾಮ್ ದಾಸ್ ಅವರನ್ನು ಪರಿಷತ್​​​ಗೆ ನಾಮ ನಿರ್ದೇಶನ ಮಾಡುವುದನ್ನು ವಿರೋಧಿಸಿ ಪತ್ರ ಬರೆದಿರುವುದನ್ನು ಗೃಹ ಸಚಿವ ಜಿ ಪರಮೇಶ್ವರ ಒಪ್ಪಿಕೊಂಡಿದ್ದಾರೆ. ಪತ್ರ ಬರೆದಿರುವುದು ನಿಜ. ಆ ಪತ್ರಕ್ಕೆ ಉತ್ತರ ಬಂದಿದೆ. ಏನಿದ್ದರೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಅವರು ಹೇಳಿದ್ದಾರೆ.

ವಿರೋಧಿಸಿದವರು ಯಾರೆಲ್ಲ?

ಸುಧಾಮ್ ದಾಸ್ ಹಾಗೂ ​ಸೀತಾರಾಂಗೆ ಪರಿಷತ್ ಸ್ಥಾನ ನೀಡುವುದಕ್ಕೆ ದಲಿತ ಸಮುದಾಯದ ಸಚಿವರಾದ ಜಿ ಪರಮೇಶ್ವರ್, ಹೆಚ್​​ಸಿ ಮಹದೇವಪ್ಪ ಆರ್​​ಬಿ ತಿಮ್ಮಾಪುರ, ಕೆಹೆಚ್ ಮುನಿಯಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Sat, 19 August 23

ತಾಜಾ ಸುದ್ದಿ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ