AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Assembly Elections 2022 : ನರೇಂದ್ರ ಮೋದಿ ತಾಯಿಯನ್ನು ಅವಮಾನಿಸಿದ್ದಕ್ಕಾಗಿ AAP ವಿರುದ್ಧ ಸ್ಮೃತಿ ಇರಾನಿ ತೀವ್ರ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿಯನ್ನು ಅವಮಾನಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಆಮ್ ಆದ್ಮಿ ಪಕ್ಷದ ವಿರುದ್ಧ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Gujarat Assembly Elections 2022 : ನರೇಂದ್ರ ಮೋದಿ ತಾಯಿಯನ್ನು ಅವಮಾನಿಸಿದ್ದಕ್ಕಾಗಿ AAP ವಿರುದ್ಧ ಸ್ಮೃತಿ ಇರಾನಿ ತೀವ್ರ ವಾಗ್ದಾಳಿ
TV9 Web
| Edited By: |

Updated on: Oct 14, 2022 | 5:20 PM

Share

ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ತಾಯಿಯನ್ನು ಅವಮಾನಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಆಮ್ ಆದ್ಮಿ ಪಕ್ಷದ ವಿರುದ್ಧ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಇರಾನಿ, ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಕೆಟ್ಟಾಗಿ ರಾಜಕಾರಣ ಮಾಡುತ್ತಿರುವ ಆಮ್ ಆದ್ಮಿ ಪಕ್ಷದ ಗುಜರಾತ್ ಘಟಕವು ಪ್ರಧಾನಿಯ ತಾಯಿಯನ್ನು ಅವಮಾನಿಸಿದೆ ಎಂದು ಹೇಳಿದರು. ಅರವಿಂದ್ ಕೇಜ್ರಿವಾಲ್ ಅವರ ಆಜ್ಞೆಯ ಮೇರೆಗೆ ಗುಜರಾತ್ ಎಎಪಿ ನಾಯಕರು ಪ್ರಧಾನಿ ಮೋದಿಯವರ ತಾಯಿಯ ವಿರುದ್ಧ ಅಸಭ್ಯ ಭಾಷೆ ಬಳಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಎರಡು ಬಾರಿ ದೇಶದ ಆಶೀರ್ವಾದ ಪಡೆದು ಪ್ರಧಾನ ಸೇವಕನ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಮಗನಿಗೆ ಜನ್ಮ ನೀಡಿದ ಕಾರಣಕ್ಕಾಗಿ ಗುಜರಾತ್‌ನ ಆಮ್ ಆದ್ಮಿ ಪಕ್ಷದ ನಾಯಕರೊಬ್ಬರು ಮೋದಿ ಅವರ ತಾಯಿಯನ್ನು ಅವಮಾನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಹೀನಾಯ ಸೋಲನ್ನು ಎದುರಿಸಲಿದೆ ಎಂದು ಇರಾನಿ ಎಚ್ಚರಿಸಿದ್ದಾರೆ. ನಾನು ಇಂದು ಅರವಿಂದ್ ಕೇಜ್ರಿವಾಲ್ ಜಿ ಅವರಿಗೆ ಹೇಳಲು ಬಯಸುತ್ತೇನೆ, ಕೋಪವನ್ನು ವ್ಯಕ್ತಪಡಿಸಲು ಪದಗಳು ನಿಯಂತ್ರಣದಲ್ಲಿ ಇರಲಿ. ಗುಜರಾತ್ ಮತ್ತು ಗುಜರಾತಿಗಳು ಮುಂಬರುವ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ನಾಶಪಡಿಸುವ ಪ್ರತಿಜ್ಞೆಯನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಸ್ಮೃತಿ ಇರಾನಿ ಅವರು ಎಎಪಿ ಗುಜರಾತ್ ಮುಖ್ಯಸ್ಥ ಗೋಪಾಲ್ ಇಟಾಲಿಯಾ ಅವರ ಹೊಸ ವೀಡಿಯೊವನ್ನು ಟ್ವೀಟ್ ಮಾಡಿದ್ದು ಇದು ಅವರ ರಾಜಕೀಯ ಸಣ್ಣತನವನ್ನು ಹೇಳುತ್ತಿದೆ. ರಾಜಕೀಯ ಲಾಭಕ್ಕಾಗಿ ತುಂಬಾ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ. ಗೋಪಾಲ್ ಇಟಾಲಿಯಾ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನಿಂದನೀಯ ಪದಗಳನ್ನು ಬಳಸಿದ ವೀಡಿಯೊಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಅವರನ್ನು ಬಂಧಿಸಿದ ಮೂರು ಗಂಟೆಗಳ ನಂತರ ಬಿಡುಗಡೆ ಮಾಡಿದರು. ಅವರ ಬಂಧನ ಬಿಜೆಪಿ ಮತ್ತು ಎಎಪಿ ನಡುವೆ ಮತ್ತಷ್ಟು ರಾಜಕೀಯ ಗಲಾಟೆಗೆ ಕಾರಣವಾಗಿತ್ತು.

ಪ್ರಧಾನಿ ನರೇಂದ್ರ ಮೋದಿಯ ಬಗ್ಗೆ ಅವಹೇಳನಕಾರಿ ಭಾಷೆ ಬಳಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಇಟಾಲಿಯಾ ಅವರನ್ನು ಎನ್‌ಸಿಡಬ್ಲ್ಯೂ ಸಮನ್ಸ್ ನೀಡಿತ್ತು. ವೈರಲ್ ವೀಡಿಯೊದಲ್ಲಿ, ಇಟಾಲಿಯಾ ಪ್ರಧಾನಿ ಮೋದಿಯನ್ನು ನಿಂದಿಸುತ್ತಿರುವುದನ್ನು ಮತ್ತು ಅವರ ಬಗ್ಗೆ ಜಾತಿವಾದಿ ಟೀಕೆಗಳನ್ನು ಮಾಡುವುದನ್ನು ಕಾಣಬಹುದು.

ಪ್ರಧಾನಿಯವರ ತಾಯಿಯನ್ನು ಅವಮಾನಿಸುವ ಮೂಲಕ ಎಎಪಿ ನಾಯಕರು ಕೀಳು ರಾಜಕಾರಣಕ್ಕಾಗಿ ಗುಜರಾತ್ ಮತ್ತು ಅಲ್ಲಿನ ಜನರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಬಿಜೆಪಿ ನಾಯಕ ಎಚ್ಚರಿಸಿದ್ದಾರೆ. ಗುಜರಾತಿಗಳು ಅವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ.

ತನ್ನ ಗುಜರಾತ್ ಘಟಕದ ನಾಯಕರನ್ನು ರಕ್ಷಿಸಿದ್ದಕ್ಕಾಗಿ ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ ಇರಾನಿ, “ಅರವಿಂದ್ ಕೇಜ್ರಿವಾಲ್ ಅವರ ಆಶೀರ್ವಾದದೊಂದಿಗೆ, ಗುಜರಾತ್‌ನ ಎಎಪಿ ನಾಯಕರು ಪ್ರಧಾನಿಯ ತಾಯಿಯ ಮೇಲೆ ದುರುದ್ದೇಶಪೂರ್ವಕವಾಗಿ ದಾಳಿ ಮಾಡಿದ್ದಾರೆ.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ