AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೋ ಯಾತ್ರೆಗೆ ರೆಸ್ಟ್: ನಾಗರಹೊಳೆ ಅಭಯಾರಣ್ಯದಲ್ಲಿ ಸೋನಿಯಾ, ರಾಹುಲ್ ಸಫಾರಿ

ರಾಜಕೀಯ ಜಂಜಾಟದಿಂದ ಕೊಂಚ ಬಿಡುವು ಪಡೆದುಕೊಂಡು ತಾಯಿ ಹಾಗೂ ಪುತ್ರ ನಾಗರಹೊಳೆ ಅಭಯಾರಣ್ಯ ಸುತ್ತಾಡಿ ಪ್ರಕೃತಿಯ ಸೊಬಗನ್ನು ಸವಿದರು.

ಭಾರತ್ ಜೋಡೋ ಯಾತ್ರೆಗೆ ರೆಸ್ಟ್: ನಾಗರಹೊಳೆ ಅಭಯಾರಣ್ಯದಲ್ಲಿ ಸೋನಿಯಾ, ರಾಹುಲ್ ಸಫಾರಿ
Sonia Gandhi
TV9 Web
| Edited By: |

Updated on:Oct 04, 2022 | 9:18 PM

Share

ಮೈಸೂರು: ಪುತ್ರ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರಗೆ ಸಾಥ್​ ನೀಡಲು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ  ಮೈಸೂರಿಗೆ ಆಗಮಿಸಿದ್ದಾರೆ. ಆದ್ರೆ, ನಿತ್ಯದ ರಾಜಕೀಯ ಜಂಜಾಟದಿಂದ ದೂರವಾಗಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯ ಸುತ್ತಿದ್ದಾರೆ.

ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಅಕ್ಟೋಬರ್ 4 ಹಾಗೂ 5ರಂದು ಎರಡು ದಿನಗಳ ಕಾಲ ವಿಶ್ರಾಂತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಇಂದು(ಅ.04) ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

ಇದನ್ನೂ ಓದಿ: ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೇ ? ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ಪಂಚ್

ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಕಬಿನಿ ಬಳಿಯ ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ ಸೋನಿಯಾ, ರಾಹುಲ್‌ಗಾಂಧಿ ಇಂದು ಮಧ್ಯಾಹ್ನ ನಾಗರಹೊಳೆ ಅಭಯಾರಣ್ಯದಲ್ಲಿ 3 ಗಂಟೆ ಕಾಲ ಸಫಾರಿ ಮಾಡಿ ಎಂಜಾಯ್ ಮಾಡಿದರು.

ರೆಸಾರ್ಟ್ ನಿಂದ ತೆರೆದ ಸಫಾರಿ ವಾಹನದಲ್ಲೇ ಮೂರು ಗಂಟೆಗಳ ಕಾಲ ನಾಗರಹೊಳೆ ಅಭಯಾರಣ್ಯ ಸುತ್ತಾಡಿ ಪ್ರಕೃತಿಯ ಸೊಬಗನ್ನು ಸವಿದರು.

ಒಂದೆಡೆ ಅಧ್ಯಕ್ಷ ಚುನಾವಣೆ ಮತ್ತೊಂದೆಡೆ ಪಕ್ಷವನ್ನು ಮುಂದಿನ ಚುನಾವಣೆಗೆ ಶತಾಯಗತಾಯವಾಗಿ ಅಧಿಕಾರಕ್ಕೆ ತರಲು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸಾಗುತ್ತಿರುವ ಜೋಡೋ ಯಾತ್ರೆಗೆ ಸಾಥ್ ನೀಡಲು ಸೋನಿಯಾ ರಾಜ್ಯಕ್ಕೆ ಆಗಮಿಸಿದ್ದಾರೆ.

ನಾಡಿದ್ದು ಸೆಪ್ಟೆಂಬರ್ 6ರಿಂದ ಮಂಡ್ಯದಲ್ಲಿ ಆರಂಭವಾಗಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಹೆಜ್ಜೆ ಹಾಕುವ ಸಾಧ್ಯತೆಗಳಿವೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:46 pm, Tue, 4 October 22

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ