AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾರಕಕ್ಕೇರಿದ ಸೊರಬ ಬಿಜೆಪಿಯಲ್ಲಿನ ಭಿನ್ನಮತ, ಕುಮಾರ್ ಬಂಗಾರಪ್ಪ ವಿರುದ್ಧ ಸ್ವಪಕ್ಷದ ಮುಖಡರಿಂದಲೇ ಬೈಕ್​ ರ್ಯಾಲಿ

ಕುಮಾರ್ ಬಂಗಾರಪ್ಪ ನಡೆಯ ವಿರುದ್ಧ ಮೂಲ ವಲಸಿಗ ಸಂಘರ್ಷ ನಡೆಯುತ್ತಲೇ ಇದೆ. ಈ ಎರಡು ಬಣಗಳ ನಡುವಿನ ಗುದ್ದಾಟ ಈಗ ಚುನಾವಣೆ ಸಂದರ್ಭದಲ್ಲಿ ಮತ್ತಷ್ಟು ಹೆಚ್ಚಾಗಿದೆ.

ತಾರಕಕ್ಕೇರಿದ ಸೊರಬ ಬಿಜೆಪಿಯಲ್ಲಿನ ಭಿನ್ನಮತ, ಕುಮಾರ್ ಬಂಗಾರಪ್ಪ ವಿರುದ್ಧ ಸ್ವಪಕ್ಷದ ಮುಖಡರಿಂದಲೇ ಬೈಕ್​ ರ್ಯಾಲಿ
ಕುಮಾರ್ ಬಂಗಾರಪ್ಪ ವಿರುದ್ಧ ಬೈಕ್ ರ್ಯಾಲಿ
ರಮೇಶ್ ಬಿ. ಜವಳಗೇರಾ
|

Updated on: Mar 26, 2023 | 12:56 PM

Share

ಮುಖ್ಯಾಂಶಗಳು

  • ಸೊರಬ ಬಿಜೆಪಿ ಪಾಳಯದಲ್ಲಿ ಭುಗಿಲೆದ್ದ ಭಿನ್ನಮತ
  • ಶಾಸಕ ಕುಮಾರ್ ಬಂಗಾರಪ್ಪ ವಿರುದ್ಧ ಮತ್ತೆ ಭುಗಿಲೆದ್ದ ಅಸಮಾಧಾನ
  • ಶಾಸಕ ಕುಮಾರ್ ಬಂಗಾರಪ್ಪ ವಿರುದ್ಧ ಘೋಷಣೆ ಕೂಗಿ ಬಿಜೆಪಿ ಮುಖಂಡರ ಆಕ್ರೋಶ

ಸೊರಬ: ಸೊರಬ ಬಿಜೆಪಿಯಲ್ಲಿ (soraba BJP) ಪುನಃ ಭಿನ್ನಮತ ಸ್ಫೋಟಗೊಂಡಿದೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಹಾಲಿ ಶಾಸಕ ಕುಮಾರ್ ಬಂಗಾರಪ್ಪ(Kumar Bangarappa) ವಿರುದ್ಧ ಅಸಮಾಧಾನ ಭುಗಿಲೆದ್ದಿದೆ. ಸೊರಬ ತಾಲೂಕಿನ ಮೂಲ ಬಿಜೆಪಿ ಹಾಗೂ ಆರ್​ಎಸ್​ಎಸ್ (BJP And RSS) ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು. ಯಾವುದೇ ಕಾರಣಕ್ಕೂ ಈ ಬಾರಿ ಕುಮಾರ್ ಬಂಗಾರಪ್ಪಗೆ ಬಿಜೆಪಿ ಟಿಕೆಟ್ ನೀಡದಂತೆ ನಮೋ ವೇದಿಕೆಯ ಸಾವಿರಾರು ಕಾರ್ಯಕರ್ತರು ಬೃಹತ್​ ಬೈಕ್ ರ್ಯಾಲಿ (Bike Rally) ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಈ ಮೂಲಕ ಕುಮಾರ್ ಬಂಗಾರಪ್ಪಗೆ ಟಿಕೆಟ್ ನೀಡದಂತೆ ಸಂದೇಶ ರವಾನಿಸಿದರು.

ಇದನ್ನೂ ಓದಿ: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿಟಿ ರವಿ: ಪಾದಯಾತ್ರೆಯಲ್ಲಿ ಘೋಷಣೆ

ಹೌದು…ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಇಂದು(ಮಾರ್ಚ್ 26) ಸೊರಬದ ಮೂಲಕ ಬಿಜೆಪಿಗರು ಹಾಗೂ ಆರ್​ಎಸ್​ಎಸ್​ ಮುಖಂಡರು ಬೃಹತ್ ಬೈಕ್ ರ್ಯಾಲಿ ಮಾಡಿದರು. ಆನವಟ್ಟಿಯ ಕೋಟಿಪುರ ವೃತ್ತದಿಂದ ಆನವಟ್ಟಿಯ ವರೆಗೂ ಬೈಕ್ ರ್ಯಾಲಿ ಮಾಡಿ ಶಾಸಕ ಕುಮಾರ್ ಬಂಗಾರಪ್ಪ ವಿರುದ್ಧ ಘೋಷಣೆ ಕೂಗಿದರು. ನಮೋ ವೇದಿಕೆಯಿಂದ ನಡೆದ ಬೈಕ್ ರ್ಯಾಲಿಯಲ್ಲಿ ಭಾಗಿಯಾದ ಸಾವಿರಾರು ಕಾರ್ಯಕರ್ತರು.

ಬಳಿಕ ನಮೋ ವೇದಿಕೆ ಕಾರ್ಯಕರ್ತರು ಬಹಿರಂಗ ಸಭೆ ನಡೆಸಿ ಕುಮಾರ್ ಬಂಗಾರಪ್ಪಗೆ ಬಿಜೆಪಿ ಟಿಕೆಟ್ ನೀಡದಂತೆ ಆಗ್ರಹಿಸಿದರು. ಈ ವೇಳೆ ಬಿಜೆಪಿ ಹಿರಿಯ ಮುಖಂಡ ಪದ್ಮನಾಭ ಭಟ್ ಹಾಗೂ ಸೊರಬ ನಮೋ ವೇದಿಕೆಯ ಪಾಣಿ ರಾಜಪ್ಪ ಅವರು ಕುಮಾರ್ ಬಂಗಾರಪ್ಪ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕಿದರು.

ಕುಮಾರ್ ಬಂಗಾರಪ್ಪ ವಿರುದ್ಧ ಸ್ವಪಕ್ಷದ ಮುಖಂಡರು ಅಸಮಾಧಾನ ವ್ಯಕ್ತಪಡಿಸುತ್ತಿರವುದು ಇದು ಮೊದಲಲ್ಲ. ಮೊದಲಿನಿಂದಲೂ ಸೊರಬ ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರ ನಡುವೆ ಭಿನ್ನಮತ ಇದೆ. ಕುಮಾರ್ ಬಂಗಾರಪ್ಪ ವಿರುದ್ಧ ನಮೋ ಸೊರಬ ವೇದಿಕೆ ಸ್ಥಾಪನೆಗೊಂಡಿದ್ದು, ಬಿಜೆಪಿ ಬಣ ಸಂಘರ್ಷ ಮತ್ತಷ್ಟು ತಾರಕ್ಕೇರಿದೆ. ನರೇಂದ್ರ ಮೋದಿ ಜನ್ಮದಿನದಂದೇ ಸೊರಬ ಬಿಜೆಪಿಯಲ್ಲಿನ ಭಿನಮ್ಮತ ಬಹಿರಂಗವಾಗಿತ್ತು. ಅಲ್ಲದೇ ಕುಮಾರ್ ಬಂಗಾರಪ್ಪ ಬಣ ಮತ್ತು ಮೂಲ ಬಿಜೆಪಿಗರಿಂದ ಪರಸ್ಪರ ಟೀಕೆ, ಸುದ್ದಿಗೋಷ್ಠಿಯಲ್ಲಿ ವಿವಾದಾತ್ಮಕ ಹೇಳಿಕೆಗಳಿಂದ ಪೊಲೀಸ್​ ಠಾಣೆ ಮೆಟ್ಟಿಲು ಸಹ ಏರಿದ್ದರು.

ಶಾಸಕ ಕುಮಾರ್ ಬಂಗಾರಪ್ಪ ಆಯ್ಕೆಯಾಗಿನಿಂದಲೂ ಅವರ ವಿರುದ್ಧ ಅದೇ ಪಕ್ಷದ ಮುಖಂಡರು, ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಕುಮಾರ್ ಬಂಗಾರಪ್ಪ ನಡೆಯ ವಿರುದ್ಧ ಮೂಲ ವಲಸಿಗ ಸಂಘರ್ಷ ನಡೆಯುತ್ತಲೇ ಇದೆ. ಈ ಎರಡು ಬಣಗಳ ನಡುವಿನ ಗುದ್ದಾಟ ಈಗ ಮತ್ತಷ್ಟು ಹೆಚ್ಚಾಗಿದೆ. ಚುನಾವಣೆ ಹೊಸ್ತಿಲಲ್ಲೇ ಬಣ ರಾಜಕೀಯದಿಂದ ಹಿರಿಯ ನಾಯಕರಿಗೆ ದೊಡ್ಡ ತಲೆನೋವಾಗಿದೆ.

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು