AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿವೇಶನಕ್ಕೆ ಗೈರು: ರಮೇಶ್ ಜಾರಕಿಹೊಳಿ, ಈಶ್ವರಪ್ಪಗೆ ಸ್ಪೀಕರ್ ಶಾಕ್!

ಮಾಜಿ ಸಚಿವರು, ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಕೆ.ಎಸ್. ಈಶ್ವರಪ್ಪ ಅವರಿಗೆ ಸ್ಪೀಕರ್ ಶಾಕ್ ಕೊಟ್ಟಿದ್ದಾರೆ.

ಅಧಿವೇಶನಕ್ಕೆ ಗೈರು: ರಮೇಶ್ ಜಾರಕಿಹೊಳಿ, ಈಶ್ವರಪ್ಪಗೆ ಸ್ಪೀಕರ್ ಶಾಕ್!
Eshwarappa And Ramesh Jarkiholi
TV9 Web
| Edited By: |

Updated on:Oct 14, 2022 | 8:22 PM

Share

ಬೆಂಗಳೂರು: ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಕೆ.ಎಸ್​.ಈಶ್ವರಪ್ಪ ಅವರು ಸಚಿವ ಸ್ಥಾನ ಸಿಗದಿದ್ದಕ್ಕೆ ಅಧಿವೇಶನಕ್ಕೆ ಗೈರಾಗುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಇದರ ಮಧ್ಯೆ ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿಗೆ ಸ್ಪೀಕರ್ ಶಾಕ್ ಕೊಟ್ಟಿದ್ದಾರೆ.

ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪತ್ರ ಬರೆಯುವ ಮೂಲಕ ವಿಧಾನಸಭಾ ಅಧಿವೇಶನಕ್ಕೆ ಗೈರಾಗಿರುವುದನ್ನು ಪ್ರಶ್ನಿಸಿದ್ದಾರೆ.

ಜಾರಕಿಹೊಳಿ ಬುಟ್ಟಿಗೆ ಕೈ ಹಾಕಿದ ಎಚ್​ಡಿಕೆ, ಮತ್ತೆ ರಾಜಕೀಯ ಧೃವೀಕರಣಕ್ಕೆ ಸಾಕ್ಷಿಯಾಗತ್ತಾ ರಾಜ್ಯ ರಾಜಕಾರಣ?

ವಿಧಾನಸಭೆ ಅಧಿವೇಶನ ಶಾಸಕರ ಸಾಂವಿಧಾನಿಕ‌ ಹಕ್ಕು. ನೀವು ಸದನಕ್ಕೆ ಬಾರದೇ ಇದ್ದಿದ್ದು ನಮಗೆ ಅಸಂವಿಧಾನಿಕ ಸಾರ್ವಜನಿಕವಾಗಿ ಸದನಕ್ಕೆ ಹಾಜರಾಗಲ್ಲ ಎಂಬುದು ಸಹ ಒಪ್ಪಿತವಲ್ಲ. ಮುಂದಿನ ದಿನಗಳಲ್ಲಿ ಸದನಕ್ಕೆ ಗೈರಾಗಲ್ಲ ಎಂದು ಭಾವಿಸುತ್ತೇನೆ. ಸಾಂವಿಧಾನಿಕವಾಗಿ ನಡೆದುಕೊಳ್ಳಬೇಕಿರುವುದು ನಮ್ಮ ಕರ್ತವ್ಯ ಎಂದು ಈಶ್ವರಪ್ಪ, ರಮೇಶ್​ ಜಾರಕಿಹೊಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮಳೆಗಾಲದ ಅಧಿವೇಶನಕ್ಕೆ ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಅವರು ಗೈರಾಗಿದ್ದರು. ಇದರೊಂದಿಗೆ ಈ ಇಬ್ಬರು ನಾಯಕರು ಬೊಮ್ಮಾಯಿ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ರಮೇಶ್ ಜಾರಕಿಹೊಳಿ ಅವರದ್ದು ಇದೇನಿದು ಮೊದಲಲ್ಲ. ಈ ಹಿಂದೆ ಕಾಂಗ್ರೆಸ್​ನಲ್ಲಿದ್ದಾಗಲೂ ಸರಿಯಾಗಿ ಅಧಿವೇಶನ ಹಾಗೂ ಸಚಿವ ಸಂಪುಟಕ್ಕೆ ಗೈರಾಗಿರುವ ಸಾಕಷ್ಟು ಉದಾಹರಣೆಗಳು ಇವೆ.

ಇನ್ನು ಈಶ್ವರಪ್ಪ ಸಚಿವರಾಗಿದ್ದಾಗ ಪ್ರತಿ ಅಧಿವೇಶನದಲ್ಲೂವಿಪಕ್ಷಗಳ ವಿರುದ್ಧ ಮುಗಿಬಿದ್ದು, ಸರ್ಕಾರದ ಪರ ಮಾತನಾಡುತ್ತಿದ್ದರು. ಆದರೆ ಈಶ್ವರಪ್ಪ ಈ ಬಾರಿ ಅಧಿವೇಶನಕ್ಕೆ ಒಂದು ವಾರದಿಂದ ಗೈರಾಗುವ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ತಮ್ಮ ಹುದ್ದೆಗೋಸ್ಕರ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತದೇ ಗೈರಾಗಿರುವುದು ವಿಪರ್ಯಾಸವೇ ಸರಿ.

Published On - 8:22 pm, Fri, 14 October 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?