AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಪತಿ ಕೂರಿಸುವ ವಿಚಾರದಲ್ಲಿ ಮುಸ್ಲಿಮರ ಜೊತೆ ಕೈಜೋಡಿಸಿದ ಬಿಜೆಪಿ: ಪ್ರಮೋದ್ ಮುತಾಲಿಕ್ ವಾಗ್ದಾಳಿ

ವಿವಾದಿತ ಚಾಮರಾಜಪೇಟೆ ಮೈದಾನದಲ್ಲಿ ಗಣಪತಿ ಕೂರಿಸಲು ಅಂದಿನ ಬಿಜೆಪಿ ಸರ್ಕಾರ ಅವಕಾಶ ನೀಡಿರಲಿಲ್ಲ. ಈ ಬಗ್ಗೆ ಇಂದು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ ಪ್ರಮೋದ್ ಮುತಾಲಿಕ್, ಬಿಜೆಪಿ ಮುಸ್ಲಿಮರ ಜೊತೆ ಕೈಜೋಡಿಸಿತ್ತು ಎಂದು ಆರೋಪಿಸಿದ್ದಾರೆ.

ಗಣಪತಿ ಕೂರಿಸುವ ವಿಚಾರದಲ್ಲಿ ಮುಸ್ಲಿಮರ ಜೊತೆ ಕೈಜೋಡಿಸಿದ ಬಿಜೆಪಿ: ಪ್ರಮೋದ್ ಮುತಾಲಿಕ್ ವಾಗ್ದಾಳಿ
ಪ್ರಮೋದ್ ಮುತಾಲಿಕ್ ಮತ್ತು ಬಸವರಾಜ ಬೊಮ್ಮಾಯಿ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jul 30, 2023 | 3:39 PM

Share

ಹಾವೇರಿ, ಜುಲೈ 30: ಚಾಮರಾಜಪೇಟೆ ಮೈದಾನದಲ್ಲಿ ಗಣಪತಿ ಕೂರಿಸುವ ವಿಚಾರದಲ್ಲಿ ಬಿಜೆಪಿ (BJP) ಮುಸ್ಲಿಮರ ಜೊತೆ ಕೈ ಜೋಡಿಸಿದ್ದರು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಆರೋಪಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರೇ ನೇಮಿಸಿದ ವಕ್ಫ್ ಬೋರ್ಡ್​ ಅಧ್ಯಕ್ಷ ಶಫಿ ಸಹದಿ ಗಣಪತಿ ಕೂಸಿಲು ಅವಕಾಶ ನೀಡಬಾರದೆಂದು ಕೋರ್ಟ್​​ಗೆ ಹೋಗಿದ್ದರು. ಇವನಿಗೆ ಆಧಾರವಾಗಿ ನಿಂತಿದ್ದು ಸಚಿವ ಜಮೀರ್ ಅಹ್ಮದ್ ಖಾನ್ ಎಂಬ ಮತಾಂಧ, ದೇಶದ್ರೋಹಿ ಎಂದು ವಾಗ್ದಾಳಿ ನಡೆಸಿದರು.

ಅಲ್ಲದೆ, ಮೈದಾನದಲ್ಲಿ ಒಂದು ಗಣಪತಿ ಕೂರಿಸಲು ಬಿಡಲಿಲ್ಲ. ಅದಕ್ಕೆ ಬಿಜೆಪಿಯವರೇ ಮುಸ್ಲಿಮರ ಜೊತೆ ಕೈ ಜೋಡಿಸಿದ್ದರು. ನ್ಯಾಯಾಲಯ ಕೂಡಾ ಸ್ಟೇ ಕೊಟ್ಟಿತ್ತು. ಕೋರ್ಟ್ ಒಂದು ಕಡೆ ನಿಮ್ಮದೇ ಜಾಗ ಎಂದು ಹೇಳಿತು, ಇನ್ನೊಂದು ಕಡೆ ಸ್ಟೇ ಕೊಟ್ಟಿತು. ಇದೇ ಕಾರಣಕ್ಕೆ ಬಿಜೆಪಿಯವರು ಚುನಾವಣೆಯಲ್ಲಿ ಮಣ್ಣು ತಿಂದರು ಎಂದರು.

ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಪ್ರಮುಖ ಹುದ್ದೆಗಳಲ್ಲಿ ಮಹತ್ವದ ಬದಲಾವಣೆ, ಯಾರಿಗೆ? ಯಾವ ಸ್ಥಾನ?

ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರದ ಧ್ವಜನೇ ಹಾರಲಿಲ್ಲ. ಇದಕ್ಕೆ ಕಠೀಣ ಕ್ರಮ ತೆಗೆದುಕೊಳ್ಳುತ್ತೇವೆ ಅಂತ ಬಿಜೆಪಿಯವರು ಹೇಳಿ ಏನೂ ಮಾಡಲಿಲ್ಲ. ನಮಗೆ ಕಾಂಗ್ರೆಸ್​, ಜೆಡಿಎಸ್​ನವರ ಮೇಲೆ ಬೇಸರ ಆಗಲಿಲ್ಲ. ಕೇಸರಿ ಹಾಕಿಕೊಂಡು ಹಿಂದುತ್ವದ ಮೇಲೆ ಅಧಿಕಾರಕ್ಕೆ ಬಂದರವ ಮೇಲೆ ನಮಗೆ ಬೇಸರ ಆಯ್ತು. ಅಲ್ಲಿ ಧ್ವಜ ಹಾರಿಸಿದ್ದು ಬಿಜೆಪಿಯವರಲ್ಲ, ನಾವು ಎಂದರು.

ಮೊನ್ನೆ ಸಚಿವ ಜಮೀರ್ ಮುಖ್ಯಮಂತ್ರಿ ಜೊತೆ ಹೋಗಿ ನಮಾಜ್ ಮಾಡಿದರು. ಆದರೆ ಬಿಜೆಪಿ ಅವಧಿಯಲ್ಲಿ ಶಿಗ್ಗಾವಿ ಕ್ಷೇತ್ರದಲ್ಲಿ ಶೇಕಡಾ 30 ರಷ್ಟು ಮುಸ್ಲಿಮರಿದ್ದಾರೆ ಅಂತ ಆಗಿನ ಮುಖ್ಯಮಂತ್ರಿ ಅಲ್ಲಿಗೆ ಹೋಗಲೇ ಇಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವಿರುದ್ಧ ಮುತಾಲಿಕ್ ವಾಗ್ದಾಳಿ ನಡೆಸಿದರು.

ಈ ಕರ್ನಾಟಕದ ಬಿಜೆಪಿ ನಾಯಕರ ಬಗ್ಗೆ ಚರ್ಚೆನೇ ಬೇಡ. ದೇಶ ಉಳಿಸಬೇಕಿದೆ. ನರೇಂದ್ರ ಮೋದಿ ಅವರನ್ನು ಗೆಲ್ಲಿಸಿ ದೇಶ ಉಳಿಸಿ ಅಭಿಯಾನ ಆರಂಭ ಮಾಡುತ್ತಿದ್ದೇವೆ. ಈ ವರ್ಷ ಪೂರ್ತಿ ಮನೆ ಮನೆಗಳಲ್ಲಿ ಮೋದಿ ಗೆಲ್ಲಿಸಿ ದೇಶ ಉಳಿಸಿ ಅಭಿಯಾನ ಮಾಡುತ್ತೇವೆ. ಗ್ಯಾರಂಟಿ ವಾರಂಟಿ ಮರೆಯಿರಿ, ದೇಶ ಉಳಿಸೋಣ ಬನ್ನಿ ಅಂತ ಕಾರ್ಯಕರ್ತರು ಜಾಗೃತಿ ಮೂಡಿಸಲಿದ್ದಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?