AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಜೆಡಿಎಸ್​ ಮೈತ್ರಿಗೆ ಎಸ್​ಟಿ ಸೋಮಶೇಖರ್​ ವಿರೋಧ; ಅವರಿಗೆ  ಎಲ್ಲಿ ಆನಂದ ಇದೆಯೋ ಅಲ್ಲಿಗೆ ಹೋಗಲಿ ಎಂದ ಕೆಎಸ್​ ಈಶ್ವರಪ್ಪ

ಕೇಂದ್ರ ತೆಗೆದುಕೊಂಡ ತೀರ್ಮಾನವನ್ನು ಪ್ರಶ್ನಿಸುವ ಅಧಿಕಾರ ಇಲ್ಲ. ಕೇಂದ್ರದ ನಿರ್ಧಾರಕ್ಕೆ ಎಲ್ಲರೂ ಬದ್ಧ ಇರಬೇಕು ಎಂದು ಶಿವಮೊಗ್ಗದಲ್ಲಿ ಬಿಜೆಪಿ ಮಾಜಿ ಶಾಸಕ ಕೆ.ಎಸ್​.ಈಶ್ವರಪ್ಪ, ಎಸ್​ಟಿ ಸೋಮಶೇಖರ್​ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಬಿಜೆಪಿ, ಜೆಡಿಎಸ್​ ಮೈತ್ರಿಗೆ ಎಸ್​ಟಿ ಸೋಮಶೇಖರ್​ ವಿರೋಧ; ಅವರಿಗೆ  ಎಲ್ಲಿ ಆನಂದ ಇದೆಯೋ ಅಲ್ಲಿಗೆ ಹೋಗಲಿ ಎಂದ ಕೆಎಸ್​ ಈಶ್ವರಪ್ಪ
ಕೆಎಸ್​ ಈಶ್ವರಪ್ಪ
ಕಿರಣ್​ ಹನಿಯಡ್ಕ
| Edited By: |

Updated on:Oct 05, 2023 | 4:50 PM

Share

ಶಿವಮೊಗ್ಗ,ಅ.05: ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿಗೆ ಎಸ್​.ಟಿ.ಸೋಮಶೇಖರ್​ ವಿರೋಧ ವಿಚಾರ ‘ ಬೇಕಾದರೆ ನಮ್ಮ ಜೊತೆ ಇರಲಿ, ಬೇಡವಾದರೆ ಹೋಗಲಿ. ಅವರಿಗೆ ಎಲ್ಲಿ ಆನಂದ ಇದೆಯೋ ಅಲ್ಲಿಗೆ ಹೋಗಲಿ ಎನ್ನುವ ಮೂಲಕ ಶಾಸಕ ಎಸ್​.ಟಿ.ಸೋಮಶೇಖರ್(ST Somashekar)​ಗೆ ಕೆ.ಎಸ್​.ಈಶ್ವರಪ್ಪ (K. S. Eshwarappa) ತಿರುಗೇಟು ನೀಡಿದ್ದಾರೆ. ಕೇಂದ್ರ ತೆಗೆದುಕೊಂಡ ತೀರ್ಮಾನವನ್ನು ಪ್ರಶ್ನಿಸುವ ಅಧಿಕಾರ ಇಲ್ಲ. ಕೇಂದ್ರದ ನಿರ್ಧಾರಕ್ಕೆ ಎಲ್ಲರೂ ಬದ್ಧ ಇರಬೇಕು ಎಂದು ಶಿವಮೊಗ್ಗದಲ್ಲಿ ಬಿಜೆಪಿ ಮಾಜಿ ಶಾಸಕ ಕೆ.ಎಸ್​.ಈಶ್ವರಪ್ಪ ಹೇಳಿದ್ದಾರೆ.

ಮೈತ್ರಿ ವಿಚಾರದ ಬಗ್ಗೆ ಅಸಮಧಾನ ಹೊರಹಾಕಿದ್ದ ಎಸ್​ಟಿ ಸೋಮಶೇಖರ್​

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಕುರಿತು ‘ನನಗೂ ವೈಯಕ್ತಿಕವಾಗಿ ಅಸಮಾಧಾನವಿದೆ ಎಂದು ವಿಧಾನಸೌಧದಲ್ಲಿ ಹೇಳಿದ್ದರು. ವೈಯಕ್ತಿಕವಾಗಿ 20 ವರ್ಷದಿಂದ ಸೆಣಸಾಟ ಮಾಡಿಕೊಂಡು ಬಂದಿದ್ದೇವೆ. ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ನೋಡಿದ್ದೇನೆ. ಯಾವತ್ತೂ ನಮ್ಮ, ಅವರ ಕಾರ್ಯಕರ್ತರಿಗೆ ಹೊಂದಾಣಿಕೆ ಇಲ್ಲ. ಹತ್ತಿರದಿಂದ ಮಾನಸಿಕವಾಗಿ ಕಿರುಕುಳ ನೋಡಿದ್ದೇನೆ. ಅಧಿಕೃತವಾಗಿ ಮೈತ್ರಿಯಾದ ಬಳಿಕ ಮುಂದಿನ ನಿರ್ಧಾರ ಮಾಡುತ್ತೇನೆ ಎಂದು ಅಸಮಧಾನ ಹೊರ ಹಾಕಿದ್ದರು.

ಇದನ್ನೂ ಓದಿ:ಎಸ್​ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಚುರುಕಾದ ಜೆಡಿಎಸ್; ಕಾರಣವೇನು?

ಕೇವಲ ಹಿಂದೂಗಳ ಮನೆ ಟಾರ್ಗೆಟ್​ ಮಾಡಿದ್ದಾರೆ ಎಂದ ಈಶ್ವರಪ್ಪ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ‘ ಶಿವಮೊಗ್ಗದ ರಾಗಿಗುಡ್ಡಕ್ಕೆ ಬಿಜೆಪಿ ನಾಯಕರ ತಂಡ ಭೇಟಿ ನೀಡಿತ್ತು. ಕಲ್ಲು ತೂರಾಟ ಹಾಗೂ ಹಾನಿ ಬಗ್ಗೆ ಇಲ್ಲಿನ ಜನ ಮಾಹಿತಿ ನೀಡಿದ್ದಾರೆ. ಗಲಾಟೆ ವೇಳೆ ಕೇವಲ ಹಿಂದೂಗಳ ಮನೆ ಟಾರ್ಗೆಟ್​ ಮಾಡಿದ್ದು, ಇದಕ್ಕೆ ರಾಜ್ಯ ಸರ್ಕಾರದ ಸಂಪೂರ್ಣ ವೈಫಲ್ಯವೇ ಕಾರಣ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಹಿಂದೂಗಳು ಭಯಪಡುವ ಅಗತ್ಯವಿಲ್ಲ, ಅವರ ಜೊತೆ ಬಿಜೆಪಿ ಇದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Thu, 5 October 23

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ