AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಭ್ರಷ್ಟಾಚಾರದ ಅವತಾರ ತಾಳಿದೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿ

ಒಂದೆಡೆ ಚಲುವರಾಯಸ್ವಾಮಿ ಅವರ ಭ್ರಷ್ಟಾಚಾರದ ಕೃಷಿಗೆ ಇಲಾಖೆ ಅಧಿಕಾರಿಗಳ ಮೇಲೆ ಸಚಿವರು ಒತ್ತಡ ಹೇರುತ್ತಿದ್ದಾರೆ. ಮತ್ತೊಂದೆಡೆ ಖುದ್ದು ಕಲೆಕ್ಷನ್‌ಗೆ ಡಿಸಿಎಂ ಡಿಕೆ ಶಿವಕುಮಾರ್​ ಇಳಿದಿದ್ದಾರೆ. ಇಂತಹ ಭ್ರಷ್ಟ ಎಟಿಎಂ ಸರ್ಕಾರದ ಸಚಿವರ ರಾಜಿನಾಮೆ ಯಾವಾಗ ಸಿಎಂ ಸಿದ್ಧರಾಮಯ್ಯ ಅವರೇ? ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ.​​

ಕಾಂಗ್ರೆಸ್​ ಭ್ರಷ್ಟಾಚಾರದ ಅವತಾರ ತಾಳಿದೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಸುನಿಲ್​ ಎಮ್​ ಹೆಚ್​
| Edited By: |

Updated on: Aug 09, 2023 | 3:16 PM

Share

ಬೆಂಗಳೂರು, ಆಗಸ್ಟ್​ 09: ಖುದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಗುತ್ತಿಗೆದಾರರಲ್ಲಿ ಕಮಿಷನ್ ಕೇಳುತ್ತಿದ್ದಾರೆ. ಚೆಲುವರಾಯ ಸ್ವಾಮಿ ಅವರು ತಮ್ಮ ಭ್ರಷ್ಟಾಚಾರದ ಕೃಷಿಗೆ ಅಧಿಕಾರಗಳ ಮೇಲೆ ಒತ್ತಡ ಹೇರುತ್ತಿದ್ದಾರೆ. ಕಾಂಗ್ರೆಸ್ ಆಡಳಿತವೇ ಭ್ರಷ್ಟಾಚಾರದ ಅವತಾರ ಎತ್ತಿದೆ.‌ ಇಂತಹ ಭ್ರಷ್ಟ ಎಟಿಎಂ ಸರ್ಕಾರದ ಸಚಿವರ ರಾಜಿನಾಮೆ ಯಾವಾಗ ಸಿದ್ಧರಾಮಯ್ಯ ಅವರೇ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಟ್ವೀಟ್​ ಮಾಡಿದ್ದಾರೆ.​​

ರಾಜ್ಯದ ಅಭಿವೃದ್ಧಿಗಳಿಗೆ ಸರ್ಕಾರ ತಿಲಾಂಜಲಿ ಇಡುತ್ತಿದೆ

ಅವಾಸ್ತವಿಕ ಗ್ಯಾರಂಟಿಗಳಿಂದಾಗಿ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಅವರೇ ಒಪ್ಪಿಕೊಂಡಿದ್ದಾರೆ. ಗುತ್ತಿಗೆದಾರರಿಗೆ ಬಿಲ್‌ಗಳನ್ನು ಪಾವತಿಸಲು ಕನಿಷ್ಠ 3 ವರ್ಷ ಬೇಕು ಎಂದು ಡಿಸಿಎಂ ಹೇಳುತ್ತಿರುವುದು ರಾಜ್ಯದ ಅಭಿವೃದ್ಧಿಗಳಿಗೆ ಕಾಂಗ್ರೆಸ್ ಸರ್ಕಾರ ಸಂಪೂರ್ಣ ತಿಲಾಂಜಲಿ ಇಡುವ ಸ್ಪಷ್ಟ ಸೂಚನೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ಭೇಟಿಯಾದ ಬಿಬಿಎಂಪಿ ಗುತ್ತಿಗೆದಾರರ ಸಂಘ, ರಾಜಕೀಯ ಸ್ವರೂಪ ಪಡೆದುಕೊಳ್ತಾ?

ಡಿಕೆ ಶಿವಕುಮಾರ್​ ಗುತ್ತಿಗೆದಾರರ ಜೀವ ಹಿಂಡುತ್ತಿದ್ದಾರೆ

ಒಂದೆಡೆ ಚೆಲುವರಾಯ ಸ್ವಾಮಿ ಅವರ ಭ್ರಷ್ಟಾಚಾರದ ಕೃಷಿಗೆ ಇಲಾಖೆ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ. ಮತ್ತೊಂದೆಡೆ ಖುದ್ದು ಕಲೆಕ್ಷನ್‌ಗೆ ಇಳಿದಿರುವ ಡಿಸಿಎಂ ಡಿಕೆ ಶಿವಕುಮಾರ್​ ಗುತ್ತಿಗೆದಾರರ ಜೀವ ಹಿಂಡುತ್ತಿದ್ದಾರೆ.

ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಮಾತ್ರವಲ್ಲದೇ, ಕಮಿಷನ್ ಮತ್ತು ಕಲೆಕ್ಷನ್ ಕೂಡ ಬಣಕ್ಕೆ ಇಂತಿಷ್ಟು ಎಂದು ಫಿಕ್ಸ್ ಆಗಿರುವ ಹಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಸೋಲಿನ ಆಘಾತದಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಂತಿದೆ: ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು

ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರಾಜ್ಯದ ಹಣ ಏಕೆ ನಿಲ್ಲಿಸಿದ್ದೀರಿ? ಸಿ.ಟಿ.ರವಿ ಪ್ರಶ್ನೆ

ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರಾಜ್ಯದ ಹಣ ಏಕೆ ನಿಲ್ಲಿಸಿದ್ದೀರಿ? ಎಂದು ಮಾಜಿ‌ ಶಾಸಕ ಸಿ.ಟಿ.ರವಿ ಪ್ರಶ್ನೆ ಮಾಡಿದ್ದಾರೆ. ಫ್ರೀಡಂಪಾರ್ಕ್​ನಲ್ಲಿ ರೈತ ಮೋರ್ಚಾ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕದ್ದುಮುಚ್ಚಿ ತಮಿಳುನಾಡಿಗೆ ನೀರು ಹರಿಸುತ್ತಿದ್ದೀರಿ ಎಂದು ವಾಗ್ದಾಳಿ ಮಾಡಿದ್ದಾರೆ.

ಮೊದಲು ನಮ್ಮ ಮಂಡ್ಯ ಜಿಲ್ಲೆಯ ರೈತರ ಬೆಳೆಗಳಿಗೆ ನೀರು ಹರಿಸಿ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಈಗ ಪೇಚಾಡುತ್ತಿದ್ದಾರೆ. ಬಾಣಲೆಯಿಂದ ಬೆಂಕಿಗೆ ಬಿದ್ದಿದ್ದೇವೆ ಎಂದು ಕೆಂಪಣ್ಣ ಹೇಳುತ್ತಿದ್ದಾರೆ. ಇವತ್ತು ಚುನಾವಣೆ ನಡೆದರೆ ಸಿಎಂ ಸಿದ್ದರಾಮಯ್ಯ ಸೇರಿ ಅನೇಕರು ಸೋಲಲಿದ್ದಾರೆ. ಇದು ರೈತ ವಿರೋಧಿ ಸರ್ಕಾರ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್