AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸಲಹೆ ಕೇಳುತ್ತಿದ್ದರೆ ಕುಮಾರಸ್ವಾಮಿ ಈಗಲೂ ಮುಖ್ಯಮಂತ್ರಿ ಆಗಿರುತ್ತಿದ್ದರು: ಶಾಸಕ ರಾಮಸ್ವಾಮಿ ಹೇಳಿಕೆ

ನನ್ನ ಸಲಹೆಯನ್ನು ಅಂದು ಕೇಳಿದ್ದಿದ್ದರೆ ಇಂದಿಗೂ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿ ಇರುತ್ತಿದ್ದರು. ನನ್ನ ಸಲಹೆಗಳನ್ನು ನೀವು ಯಾಕೆ ಕೇಳಲಿಲ್ಲವೋ ಗೊತ್ತಿಲ್ಲ. ಹಾಸನದಲ್ಲಿ ಜೆಡಿಎಸ್ ಶಾಸಕ ರಾಮಸ್ವಾಮಿ ಹೇಳಿಕೆ.

ನನ್ನ ಸಲಹೆ ಕೇಳುತ್ತಿದ್ದರೆ ಕುಮಾರಸ್ವಾಮಿ ಈಗಲೂ ಮುಖ್ಯಮಂತ್ರಿ ಆಗಿರುತ್ತಿದ್ದರು: ಶಾಸಕ ರಾಮಸ್ವಾಮಿ ಹೇಳಿಕೆ
ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ
TV9 Web
| Updated By: Rakesh Nayak Manchi|

Updated on:May 17, 2022 | 5:16 PM

Share

ಹಾಸನ: ಜೆಡಿಎಸ್(JDS) ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಂಡಿದ್ದ, ಪಕ್ಷದೊಂದಿಗೆ ಕಾಣಿಕೊಳ್ಳದ ಶಾಸಕ ಎ.ಟಿ‌.ರಾಮಸ್ವಾಮಿ(A.T.Ramaswami), ಇಂದು ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(H.D.Kumaraswami) ಅವರೊಂದಿಗೆ ವೇದಿಕೆ ಹಂಚಿಕೊಂಡು ಅಚ್ಚರಿ ಮೂಡಿಸಿದರು. ಅಲ್ಲದೆ, ಕುಮಾರಸ್ವಾಮಿ ನಡೆಯ ಬಗ್ಗೆ ರಾಮಸ್ವಾಮಿ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮಲ್ಲಿತಮ್ಮನಹಳ್ಳಿಯಲ್ಲಿ ನಡೆದ ದೇಗುಲ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಸಲಹೆಯನ್ನು ಅಂದು ಕೇಳಿದ್ದಿದ್ದರೆ ಇಂದಿಗೂ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿ ಇರುತ್ತಿದ್ದರು. ನನ್ನ ಸಲಹೆಗಳನ್ನು ನೀವು ಯಾಕೆ ಕೇಳಲಿಲ್ಲವೋ ಗೊತ್ತಿಲ್ಲ. ಬಹುಶಃ ನಿಮ್ಮ ಸಹೋದರ ರೇವಣ್ಣನ ಮಾತು ಕೇಳಿದ್ರೋ ಏನೋ ಎಂದು ಕುಟುಕಿದರು.

ಇದ್ದನ್ನು ಓದಿ: ಹೆಚ್.ಡಿ. ಕುಮಾರಸ್ವಾಮಿ

ಈ ವೇಳೆ ಎದ್ದು ನಿಂತು ಮಾತನಾಡಿದ ಮಾಜಿ ಸಚಿವ ಎಚ್.ಡಿ.ರೇವಣ್ಣ, ಅಭಿವೃದ್ಧಿಯಲ್ಲಿ ನಾನು ಎಂದೂ ರಾಮಸ್ವಾಮಿ ಅವರನ್ನು ಮೀರಿಸಲು ಸಾಧ್ಯ ಇಲ್ಲ. ನನ್ನ ರಾಜಕೀಯ ಜೀವನದಲ್ಲಿ 25 ವರ್ಷ ಶಾಸಕನಾಗಿದ್ದೇನೆ. ಸಚಿವನೂ ಆಗಿದ್ದೇನೆ. ಒಂದುಬಾರಿ ನಿಮ್ಮನ್ನ ಮಂತ್ರಿ ಮಾಡಬೇಕು ಎಂದು ನನ್ನ ಆಸೆ ಇದೆ ಎಂದು ಹೇಳಿದರು.

ರೇವಣ್ಣ ಅವರ ಮಾತಿಗೆ ಪ್ರತಿಕ್ರಿಯಿಸಿದ ರಾಮಸ್ವಾಮಿ, ನಾನು ಸಚಿವನಾಗಬೇಕೆಂದು ಯಾವತ್ತಿಗೂ  ಬಯಸಿದವನಲ್ಲ. ನಾನು ಸಚಿವನಾಗಲು ಬಯಸಿದ್ದರೆ ಎಂದೋ ಆಗಬಹುದಿತ್ತು. ಸಾಕಷ್ಟು ಬಾರಿ ನನ್ನನ್ನ ಕರೆದಿರುವ ಬಗ್ಗೆ ನಿಮಗೆ ಗೊತ್ತಿರುವ ವಿಚಾರ. ನಾನು ಅದಿಕಾರಕ್ಕಾಗಿ, ಹಣಕ್ಕಾಗಿ ಎಂದು ರಾಜಕೀಯ ಮಾಡಿಲ್ಲ ಎಂದರು.

ಇದನ್ನು ಓದಿ: ಎಚ್.ಡಿ.ರೇವಣ್ಣ

ಒಂದೇ ವೇದಿಕೆಯಲ್ಲಿ ಕುಮಾರಸ್ವಾಮಿ ಮತ್ತು ರಾಮಸ್ವಾಮಿ

ಜೆಡಿಎಸ್ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಂಡಿದ್ದ ಶಾಸಕ ಎ.ಟಿ‌.ರಾಮಸ್ವಾಮಿ, ಜೆಡಿಎಸ್ ಜಲಧಾರೆ ಸಮಾವೇಶಕ್ಕೂ ಗೈರಾಗಿದ್ದರು. ಇದೀಗ ಮತ್ತೆ ವೇದಿಕೆ ಹಂಚಿಕೊಂಡಿದ್ದಾರೆ. ಅದರಂತೆ, ಹಾಸನದಲ್ಲಿ ನಡೆದ ನೂತನ ದೇವಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಶಾಸಕ ಎ.ಟಿ.ರಾಮಸ್ವಾಮಿ ವೇದಿಕೆ ಹಂಚಿಕೊಂಡಿದ್ದಾರೆ. ಅರಕಲಗೂಡು ತಾಲೂಕಿನ ಮಲ್ಲಿತಮ್ಮನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ದೇವಮ್ಮದೇವಿ ಮತ್ತು ಗ್ರಾಮದೇವತೆಗಳ ಪುನರ್ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮ ಇದಾಗಿದೆ. ಈ ವೇಳೆ ಮಾಜಿ‌‌ ಸಚಿವ ಹೆಚ್.ಡಿ. ರೇವಣ್ಣ, ಶಾಸಕ ಸಿ.ಎನ್. ಬಾಲಕೃಷ್ಣ ಉಪಸ್ಥಿತರಿದ್ದರು.

ಮತ್ತಷ್ಟು ಸುದ್ದಿಗಳಿಗಾಗಿ ಲಿಂಕ್ ಕ್ಲಿಕ್ ಮಾಡಿ

Published On - 5:16 pm, Tue, 17 May 22

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ