AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ: ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ತಿಂಗಳ ಒಳಗೆ ಎಲ್ಲವೂ ಸರಿಯಾಗದಿದ್ದರೆ ಹೋರಾಟ ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ: ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ
ನಳಿನ್​ ಕುಮಾರ್​ ಕಟೀಲ್​
ಕಿರಣ್ ಹನುಮಂತ್​ ಮಾದಾರ್
|

Updated on:May 27, 2023 | 1:35 PM

Share

ಮಂಗಳೂರು: ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ದ್ವೇಷದ ರಾಜಕಾರಣವನ್ನು ವಿರೋಧಿಸಿ ಪ್ರತಿಭಟಿಸುತ್ತೇವೆ. ತಿಂಗಳ ಒಳಗೆ ಎಲ್ಲವೂ ಸರಿಯಾಗದಿದ್ದರೆ ಹೋರಾಟ ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel) ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ‘ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಗಳ ಪೂರ್ಣ ತನಿಖೆ ನಡೆಯಲಿ. ಸಿದ್ಧರಾಮಯ್ಯ ಮೇಲಿರುವ ಲೋಕಾಯುಕ್ತ ಕೇಸ್ ನ್ನೂ ತನಿಖೆ ಮಾಡಲಿ. ಕರಾವಳಿ ಜಿಲ್ಲೆಗೆ ಒಂದೂ ಮಂತ್ರಿ ಪಟ್ಟ ಇಲ್ಲ, ಈ ಬಗ್ಗೆ ಕೂಡ ದುಃಖ ಇದೆ ಎಂದಿದ್ದಾರೆ.

ಮಂಗಳೂರಿನಲ್ಲಿ ಜಿಲ್ಲೆಯ ಆರು ಬಿಜೆಪಿ ಶಾಸಕರೊಂದಿಗೆ ನಳಿನ್ ಕುಮಾರ್ ಕಟೀಲ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ‘ಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಸಮಸ್ಯೆಗೆ ಪರಿಹಾರ ಮಾಡುವ ಬದಲು ಅಧಿಕಾರ ಹಂಚಿಕೆಯ ಚರ್ಚೆಯಲ್ಲಿದೆ. ಐದು ಉಚಿತ ಯೋಜನೆಗಳನ್ನು 20 ದಿನಗಳಾದರೂ ಹಂಚಿಕೆ ಮಾಡಿಲ್ಲ. ಸರ್ಕಾರಿ ನೌಕರರು ಏಟು ತಿನ್ನುವ ಪರಿಸ್ಥಿತಿ ಬಂದಿದೆ. ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಹೋದವರಿಗೆ ಏಟು ಬೀಳುತ್ತಿದೆ. ಕಾಂಗ್ರೆಸ್ ವಿಜಯೋತ್ಸವದಲ್ಲೇ ಗಲಭೆ ಮಾಡಿದ್ದು, ದ್ವೇಷದ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ:ಶಾಸಕ, ಪರಿಷತ್ ಸದಸ್ಯರಾಗದಿದ್ದರೂ ಸಚಿವರಾದ ಎನ್ಎಸ್ ಬೋಸರಾಜು ಯಾರು? ಇವರ ಬಗ್ಗೆ ಒಂದಿಷ್ಟು ತಿಳಿದುಕೊಳ್ಳಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ಮಾಡಲಾಗಿದೆ. ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರ ಮೇಲೂ ಕೇಸ್ ಹಾಕಲಾಗಿದೆ. ಕಾಂಗ್ರೆಸ್ ದ್ವೇಷ ಸಾಧನೆ ಮೂಲಕ ಬಿಜೆಪಿಯನ್ನು ಕಟ್ಟಿಹಾಕುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ಬಿಟ್ಟು ಹಲ್ಲೆ ಹತ್ಯೆ ಮಾಡುತ್ತಿದೆ. ಕಾಂಗ್ರೆಸ್ ನಲ್ಲಿ ತಾಕತ್ ಇದ್ರೆ, ಪಾಕ್ ಪರ ಜೈಕಾರ ಕೂಗಿದವರನ್ನು ಬಂಧಿಸಲಿ. ಪ್ರವೀಣ್ ನೆಟ್ಟಾರ್ ಪತ್ನಿಗೆ ನೀಡಿದ್ದ ಉದ್ಯೋಗ ವನ್ನು ಕಾಂಗ್ರೆಸ್ ಕಿತ್ತುಕೊಂಡಿದೆ. ಅನುಕಂಪದ ಆಧಾರದ ಮೇಲೆ ಮತ್ತೆ ಉದ್ಯೋಗ ನೀಡಿ ಎಂದು ಸಿಎಂ ಸಿದ್ಧರಾಮಯ್ಯಗೆ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದು, ನೀವು ಉದ್ಯೋಗ ನೀಡದಿದ್ದರೂ ಕೇಂದ್ರದ ಎನ್ಎಂಪಿಟಿಯಲ್ಲಿ ಉದ್ಯೋಗ ನೀಡುತ್ತೇವೆ ಎಂದಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:35 pm, Sat, 27 May 23

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?