Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಚುನಾವಣೆ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ಸೂಚನೆ: ವಲಸೆ ಹೋದವರಿಗೂ ಮುಕ್ತ ಆಹ್ವಾನ ಕೊಟ್ಟ ಡಿಕೆಶಿ

ವಿಧಾನಸಭೆ ಚುನಾವಣೆ ಟಿಕೆಟ್​ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ ಪಕ್ಷ ಬಿಟ್ಟು ಹೋದವರಿಗೆ ಮುಕ್ತ ಆಹ್ವಾನ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ಸೂಚನೆ: ವಲಸೆ ಹೋದವರಿಗೂ ಮುಕ್ತ ಆಹ್ವಾನ ಕೊಟ್ಟ ಡಿಕೆಶಿ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 02, 2022 | 4:08 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಆರೇಳು ತಿಂಗಳು ಮಾತ್ರ ಬಾಕಿ ಇದ್ದು, ಆಗಲೇ ಟಿಕೆಟ್ ಆಕಾಂಕ್ಷಿಗಳು ತಮ್ಮ ನಾಯಕರ ಮೂಲಕ ಲಾಬಿ ನಡೆಸಿದ್ದಾರೆ. ಒಂದು ಕ್ಷೇತ್ರದಲ್ಲಿ ಎರಡ್ಮೂರು ಟಿಕೆಟ್ ಆಕಾಂಕ್ಷಿ ಇರುವುದರಿಂದ ಕಾಂಗ್ರೆಸ್, ಬಿಜೆಪಿ ನಾಯಕರಿಗೆ  ದೊಡ್ಡ ತಲೆನೋವಾಗಿದೆ. ಒಬ್ಬರಿಗೆ ಟಿಕೆಟ್ ನೀಡಿದ್ರೆ ಮತ್ತೊಬ್ಬರು ಮುನಿಸಿಕೊಳ್ಳುವ ಆತಂಕ ಎದುರಾಗಿದೆ. ಇನ್ನು ಕಾಂಗ್ರೆಸ್​ನಲ್ಲಿ ಟಿಕೆಟ್​ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ ಪಕ್ಷ ಬಿಟ್ಟು ಹೋದವರಿಗೆ ಮುಕ್ತ ಆಹ್ವಾನ ನೀಡಿದ್ದಾರೆ.

ಇಂದು(ನ.02) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಮುಂದಿನ ಚುನಾವಣೆಗೆ ಕಾಂಗ್ರೆಸ್​​ ಪಕ್ಷ ಸಜ್ಜಾಗುತ್ತಿದ್ದು, ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ಎಲ್ಲಾ ತಯಾರಿ ಮಾಡಿಕೊಳುತ್ತಿದೆ. ಚುನಾವಣೆಗೆ ಸ್ಪರ್ಧಿಸಲು ಬಯಸುವವರು ಅರ್ಜಿ ಸಲ್ಲಿಸಬಹುದು. ಕೆಪಿಸಿಸಿ ಕಚೇರಿಯಲ್ಲಿ 5 ಸಾವಿರ ರೂಪಾಯಿ ಕೊಟ್ಟು ಅರ್ಜಿ ಪಡೆಯಬಹುದು ಎಂದ ಹೇಳಿದರು.

ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್: ಕೇಂದ್ರ ಸಚಿವಗೆ ಮಂಡ್ಯ ಉಸ್ತುವಾರಿ

ಅರ್ಜಿ ಜೊತೆಯಲ್ಲಿ 2 ಲಕ್ಷ ರೂ. ಡಿಡಿ ಶುಲ್ಕ ನೀಡಬೇಕು. ಎಸ್​ಸಿ, ಎಸ್​ಟಿ ಅಭ್ಯರ್ಥಿಗಳು 1 ಲಕ್ಷ ರೂ. ಡಿಡಿ ಮೂಲಕ ಅರ್ಜಿ ಸಲ್ಲಿಸಬೇಕು. ಯಾರು ಕಾಂಗ್ರೆಸ್​ ಟಿಕೆಟ್​ ಬಯಸುತ್ತಾರೋ ಅವರು ಅರ್ಜಿ ಹಾಕಬಹುದು. ನಾನು ಸ್ಪರ್ಧಿಸಬೇಕಾದರೂ ಕಾಂಗ್ರೆಸ್ ಪಕ್ಷಕ್ಕೆ ಅರ್ಜಿ ಹಾಕಬೇಕು. ಕಾಂಗ್ರೆಸ್​ ಟಿಕೆಟ್​​ಗೆ ಯಾರು ಬೇಕಾದರೂ ಅರ್ಜಿ ಹಾಕಬಹುದು. ವಲಸೆ ಹೋದವರಿಗೂ ಮುಕ್ತ ಆಹ್ವಾನ ಎಂದು ಹೇಳುವ ಮೂಲಕ ಈಗಾಗಲೇ ಕಾಂಗ್ರೆಸ್ ಬಿಟ್ಟು ಬೇರೆ-ಬೇರೆ ಪಕ್ಷಗಳಿಗೆ ಹೋಗಿರುವ ನಾಯಕರಿಗೂ ವಾಪಸ್ ಪಕ್ಷಕ್ಕೆ ಬರುವಂತೆ ಪರೋಕ್ಷವಾಗಿ ಆಹ್ವಾನ ಕೊಟ್ಟಿದ್ದಾರೆ.

ಮೊದಲ ಬಾರಿಗೆ ನೂತನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಕ್ಕೆ ಬರುತ್ತಿದ್ದಾರೆ. ರಾಜ್ಯಕ್ಕೆ ಭೇಟಿ ಕೊಟ್ಟು ಬಳಿಕ ಉಳಿದ ರಾಜ್ಯಗಳಿಗೆ ಹೋಗಲಿದ್ದಾರೆ. ನವೆಂಬರ್ 6ರಂದು ಬೆಳಗ್ಗೆ 10.50ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಸಾವಿರಾರು ಕಾರ್ಯಕರ್ತರು ಮುಖಂಡರು ಏರ್ ಪೋರ್ಟ್ ನಲ್ಲಿ ಖರ್ಗೆ ಅವರನ್ನು ಸ್ವಾಗತ ಕೋರಲಾಗುತ್ತೆ ಎಂದು ಮಾಹಿತಿ ನೀಡಿದರು.

ಬಳಿಕ ಅಂದೇ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ದೊಡ್ಡ ಸಮಾವೇಶ ಹಮ್ಮಿಕೊಂಡಿದ್ದೇವೆ. ಸರ್ವೋದಯ ಸಮಾವೇಶ ಅಂತ ಹೆಸರು ಇಡಲಾಗಿದ್ದು, ರಾಜ್ಯದ ವಿವಿಧ ಮೂಲೆಯಿಂದ ಜನ ಈ ಸಮಾವೇಶಕ್ಕೆ ಬರುತ್ತಾರೆ ಎಂದು ತಿಳಿಸಿದರು.

Published On - 4:07 pm, Wed, 2 November 22

ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!