AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು, ದಾಬಸ್ ಪೇಟೆ ಸೇರಿದಂತೆ ಹಲವೆಡೆಗೆ ಸಬ್​ಅರ್ಬನ್​ ರೈಲು ಮಾರ್ಗ ವಿಸ್ತರಣೆ: ಸಚಿವ ಎಂಬಿ ಪಾಟೀಲ್​

ಸಬ್​ಅರ್ಬನ್​ ರೈಲಿನ ಮಾರ್ಗ ವಿಸ್ತರಣೆ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದು, ಮೈಸೂರು, ದಾಬಸ್ ಪೇಟೆ ಸೇರಿದಂತೆ ಹಲವು ಕಡೆ ವಿಸ್ತರಣೆಗೆ ನಿರ್ಧಾರ ಮಾಡಿದ್ದೇವೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್​ ಹೇಳಿದರು.

ಮೈಸೂರು, ದಾಬಸ್ ಪೇಟೆ ಸೇರಿದಂತೆ ಹಲವೆಡೆಗೆ ಸಬ್​ಅರ್ಬನ್​ ರೈಲು ಮಾರ್ಗ ವಿಸ್ತರಣೆ: ಸಚಿವ ಎಂಬಿ ಪಾಟೀಲ್​
ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್
ಗಂಗಾಧರ​ ಬ. ಸಾಬೋಜಿ
|

Updated on: Jun 13, 2023 | 5:36 PM

Share

ಬೆಂಗಳೂರು: ಸಬ್​ಅರ್ಬನ್​ ರೈಲಿನ ಮಾರ್ಗ ವಿಸ್ತರಣೆ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದು, ಮೈಸೂರು, ದಾಬಸ್ ಪೇಟೆ ಸೇರಿದಂತೆ ಹಲವು ಕಡೆ ವಿಸ್ತರಣೆಗೆ ನಿರ್ಧಾರ ಮಾಡಿದ್ದೇವೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ (M B Patil) ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಏರ್​ಪೋರ್ಟ್​​ಗಳನ್ನು ನಾವೇ ನಿರ್ವಹಣೆ ಮಾಡಲು ಚಿಂತನೆ ಮಾಡಿದ್ದು, 2-3 ಕಡೆ ರಾಜ್ಯ ಸರ್ಕಾರವೇ ಏರ್​ಪೋರ್ಟ್​​ ನಿರ್ವಹಣೆ ಮಾಡುತ್ತಿದೆ ಎಂದು ಹೇಳಿದರು.

ಕೈಗಾರಿಕೆ ವಲಯದಲ್ಲಿ 7 ಸೆಕ್ಟರ್ ಗುರುತಿಸಿದ್ದೇವೆ‌‌.​ ವಿಷನ್ ಗ್ರೂಪ್ ಮಾಡಿ ಅಭಿವೃದ್ಧಿ ಮಾಡುವ ಚಿಂತನೆ ನಡೆಸಿದ್ದೇವೆ. ಅಗತ್ಯ ಬಿದ್ದರೆ 7 ಸೆಕ್ಟರ್ ಜೊತೆ ಇನ್ನು 2 ಸೆಕ್ಟರ್ ಪ್ರಾರಂಭ ಮಾಡುವುದಕ್ಕೆ ಸಿದ್ದವಾಗಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಯಾರ್ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂದು ಅವರೇ ಹೇಳಲಿ: ಪ್ರತಾಪ್​ ಸಿಂಹ ವಿರುದ್ಧ ಸಚಿವ ಹೆಚ್​ಸಿ ಮಹದೇವಪ್ಪ ಕಿಡಿ

ಪ್ರತಾಪ್ ಸಿಂಹ, ಸಿ.ಟಿ.ರವಿ ಸುಮ್ಮನೆ ಹೀಗೆ ಹೇಳೋದು ಬೇಡ

ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿಗೆ ಸೋಲು ಎಂಬ ಆರೋಪ ವಿಚಾರವಾಗಿ ಮಾತನಾಡಿದ ಅವರು, ಪ್ರತಾಪ್ ಸಿಂಹ, ಸಿ.ಟಿ.ರವಿ ಸುಮ್ಮನೆ ಹೀಗೆ ಹೇಳೋದು ಬೇಡ. ಹೊಂದಾಣಿಕೆ ಮಾಡಿಕೊಂಡವರ ಹೆಸರನ್ನು ಬಹಿರಂಗಪಡಿಸಬೇಕು. ನಾನು ಅವರನ್ನ ಒತ್ತಾಯ ಮಾಡುತ್ತೇನೆ ಅವರು ಹೆಸರು ಹೇಳಲಿ. ಅವರು ಹೆಸರು ಬಹಿರಂಗ ಪಡೆಸುತ್ತಾರೆ ಎಂಬ ವಿಶ್ವಾಸ ಇದೆ ಎಂದರು.

ಇದನ್ನೂ ಓದಿ: ಹುಸಿ ಗ್ಯಾರಂಟಿಗಳ ಭಾರದಿಂದಲೇ ಕಾಂಗ್ರೆಸ್ ಸರ್ಕಾರ ಕುಸಿದು ಬೀಳುವುದು ನಿಶ್ಚಿತ: ಸುನಿಲ್ ಕುಮಾರ್

ಯಾವುದೇ ಸಂಸ್ಥೆಗೆ ನೀಡಿದ ಭೂಮಿ ಹಿಂದಕ್ಕೆ ಪಡೆಯುವ ಪ್ರಸ್ತಾಪವಿಲ್ಲ

ಆರ್​ಎಸ್​ಎಸ್​ ಅಂಗಸಂಸ್ಥೆಗೆ ನೀಡಿದ್ದ ಭೂಮಿ ಹಿಂಪಡೆಯುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಸಂಸ್ಥೆಗೆ ನೀಡಿದ ಭೂಮಿ ಹಿಂದಕ್ಕೆ ಪಡೆಯುವ ಪ್ರಸ್ತಾಪವಿಲ್ಲ. ಭೂಮಿ ನೀಡಿರುವ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಯಾವ ರೀತಿ ಉಪಯೋಗ ಆಗುತ್ತಿದೆ ಅನ್ನೋದು ಮುಖ್ಯವಾಗುತ್ತದೆ. ಎಲ್ಲೆಲ್ಲಿ ಭೂಮಿ ನೀಡಲಾಗಿದೆ ಅನ್ನೋ ಮಾಹಿತಿ ಪಡೆದುಕೊಳ್ಳುತ್ತೇವೆ. ಸದ್ಯಕ್ಕೆ ಭೂಮಿ ಹಿಂಪಡೆಯುವ ತೀರ್ಮಾನ ಆಗಿಲ್ಲ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ