Sumalatha Ambareesh: ಅಭಿವೃದ್ಧಿಗೆ ಮತ್ತೊಂದು ಹೆಸರೇ ಪ್ರಧಾನಿ ಮೋದಿ; ಸುಮಲತಾ ಬಣ್ಣನೆ

ಅಭಿವೃದ್ಧಿಗೆ ಮತ್ತೊಂದು ಹೆಸರೇ ಪ್ರಧಾನಿ ನರೇಂದ್ರ ಮೋದಿ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಣ್ಣಿಸಿದರು.

Sumalatha Ambareesh: ಅಭಿವೃದ್ಧಿಗೆ ಮತ್ತೊಂದು ಹೆಸರೇ ಪ್ರಧಾನಿ ಮೋದಿ; ಸುಮಲತಾ ಬಣ್ಣನೆ
ನರೇಂದ್ರ ಮೋದಿ ಹಾಗೂ ಸುಮಲತಾ ಅಂಬರೀಶ್
Follow us
|

Updated on: Mar 10, 2023 | 8:51 PM

ಮಂಡ್ಯ: ಅಭಿವೃದ್ಧಿಗೆ ಮತ್ತೊಂದು ಹೆಸರೇ ಪ್ರಧಾನಿ ನರೇಂದ್ರ ಮೋದಿ (Narendra Modi) ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಬಣ್ಣಿಸಿದರು. ಬಿಜೆಪಿಗೆ ಸಂಪೂರ್ಣ ಬೆಂಬಲ ಘೋಷಿಸಿದ ನಂತರ ಗೆಜ್ಜಲಗೆರೆಗೆ ತೆರಳಿ ಬಿಜೆಪಿ ಮಾರ್ಚ್ 12ರ ಸಮಾವೇಶದ ಸ್ಥಳ ವೀಕ್ಷಣೆ ಮಾಡಿದ ಬಳಿಕ ಅವರು ಮಾತನಾಡಿದರು. ಅಂದು ಮೋದಿ ಬೆಂಗಳೂರು ಮೈಸೂರು ಎಕ್ಸ್​​​ಪ್ರೆಸ್​ ವೇ ಉದ್ಘಾಟನೆ ಮಾಡಲಿದ್ದಾರೆ. ಮಂಡ್ಯದಲ್ಲೇ ದಶಪಥ ಹೆದ್ದಾರಿ ಲೋಕಾರ್ಪಣೆಯಾಗುತ್ತಿರುವುದಕ್ಕೆ ಸುಮಲತಾ ಹರ್ಷ ವ್ಯಕ್ತಪಡಿಸಿದರು. 41 ವರ್ಷದ ಬಳಿಕ ಪ್ರಧಾನಿಯವರು ಮಂಡ್ಯಕ್ಕೆ ಆಗಮಿಸುತ್ತಿರುವುದಕ್ಕೆ ಖುಷಿ ನೀಡಿದೆ. ಮೋದಿ ಭೇಟಿಯಿಂದ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ. ಗೆಜ್ಜಲಗೆರೆ ಸಮಾವೇಶಕ್ಕೆ 2 ಲಕ್ಷಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

ಬಿಜೆಪಿ ಪರ ಪ್ರಚಾರ ನಡೆಸುವ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸುತ್ತೇನೆ. ಪಕ್ಷದ ನಾಯಕರ ತೀರ್ಮಾನದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕರ್ನಾಟಕದ ಅಭಿವೃದ್ಧಿಯ ಪಥಕ್ಕೆ ಕೊಡುಗೆ: ಪ್ರಧಾನಿ ಮೋದಿ

ಶುಕ್ರವಾರ ಮಧ್ಯಾಹ್ನ ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಸುಮಲತಾ, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಸಂಪೂರ್ಣ ಭರವಸೆಯಿಟ್ಟು ಬಿಜೆಪಿಗೆ ಬೆಂಬಲ ಘೋಷಿಸುತ್ತಿರುವುದಾಗಿ ತಿಳಿಸಿದ್ದರು. ಪ್ರಧಾನಿ ಮೋದಿಯವರಿಂದಾಗಿಯೇ ನಾವು ವಿದೇಶಗಳಲ್ಲೂ ತಲೆಯೆತ್ತಿ ತಿರುಗಾಡುಂತಾಗಿದೆ, ಕೇವಲ ಅವರಿಂದ ಮಾತ್ರ ದೇಶದ ಪ್ರಗತಿ ಸಾಧ್ಯ. ಅವರ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇಟ್ಟು ಬೆಂಬಲ ನೀಡುತ್ತಿದ್ದೇನೆ ಎಂದು ಹೇಳಿದ್ದರು. ಆದರೆ, ಅವರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿಲ್ಲ. ಈ ಬಾರಿಯ ಸಂಸತ್ತಿನ ಅವಧಿ ಮುಗಿಯುವವರೆಗೆ ಅವರು ಪಕ್ಷೇತರ ಸಂಸದರಾಗಿಯೇ ಮುಂದುವರಿಯಲಿದ್ದಾರೆ.

ಬಿಜೆಪಿಗೆ ಸುಮಲತಾ ಬೆಂಬಲ; ವಿಶೇಷವಿಲ್ಲ ಎಂದ ಡಿಕೆಶಿ

ಬಿಜೆಪಿಗೆ ಮಂಡ್ಯ ಸಂಸದೆ ಸುಮಲತಾ ಬೆಂಬಲ ಘೋಷಿಸಿರುವುದು ಹೊಸದೇನು ಅಲ್ಲ. ಅವರು ಮೊದಲಿನಿಂದಲೂ ಬಿಜೆಪಿ ಬೆಂಬಲಿಸಿದ್ದಾರೆ ಎಂದು ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಜೆಪಿಗೆ ಬೆಂಬಲ ನೀಡಿರುವುದು ಅವರ ವೈಯಕ್ತಿಕ ವಿಚಾರ. ಏನು ಬೇಕಾದರೂ ತೀರ್ಮಾನ ಮಾಡಲಿ. ಅವರಿಗೆ ಒಳ್ಳೆಯದಾಗಲಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಕೂಡ ಸುಮಲತಾ ಬಿಜೆಪಿಗೆ ಬೆಂಬಲ ಘೋಷಿಸಿದ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದರು. ಸುಮಲತಾ ಕೂಡ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್​ ಅನ್ನೇ ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದು ಬಿಟ್ಟರೆ ಕಾಂಗ್ರೆಸ್ ವಿರುದ್ಧ ಮಾತನಾಡಿರಲಿಲ್ಲ. ಇದರ ಹಿಂದೆ ಹಲವು ರಾಜಕೀಯ ಲೆಕ್ಕಾಚಾರಗಳಿರಬಹುದು ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್