AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಇನ್ನೂ ನಿಗೂಢ: ಜೆಪಿ ನಡ್ಡಾ ಭೇಟಿ ಬಳಿಕ ಸುಮಲತಾ ಅಚ್ಚರಿಕೆ ಹೇಳಿಕೆ

ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಈ ಬಾರಿ ಸ್ಪರ್ಧಿಸುವವರು ಯಾರು ಎನ್ನುವುದೇ ನಿಗೂಢವಾಗಿದೆ. ಮೂಲಗಳ ಪ್ರಕಾರ ಮಂಡ್ಯವನ್ನು ಜೆಡಿಎಸ್​ಗೆ ಬಿಟ್ಟುಕೊಡಲಾಗಿದ್ದು, ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಸಲು ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ. ಇದರ ಮಧ್ಯೆ ಇದೀಗ ಸುಮಲತಾ ಅಂಬರೀಶ್ ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ.

ಮಂಡ್ಯ ಇನ್ನೂ ನಿಗೂಢ: ಜೆಪಿ ನಡ್ಡಾ ಭೇಟಿ ಬಳಿಕ ಸುಮಲತಾ ಅಚ್ಚರಿಕೆ ಹೇಳಿಕೆ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Mar 18, 2024 | 4:48 PM

Share

ನವದೆಹಲಿ, (ಮಾರ್ಚ್ 18): ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ (Loksabha Elections 2024) ಕಾವು ರಂಗೇರಿದೆ. ಆದ್ರೆ, ರಾಜ್ಯದ ಕೆಲ ಕ್ಷೇತ್ರಗಳ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಅದರಲ್ಲೂ ಮಂಡ್ಯದಲ್ಲಿ(Mandya Loksabha) ಸುಮಲತಾ ಅಂಬರೀಶ್ (Sumalatha Ambareesh) ಮತ್ತು ಜೆಡಿಎಸ್​ ನಡುವೆ ಹಗ್ಗಜಗ್ಗಾಟ ನಡೆದಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 18) ಬಿಜೆಪಿ ರಾಷ್ಟ್ರೀಯ ನಾಯಕ ಜೆಪಿ ನಡ್ಡಾ ಅವರು ಸುಮಾಲತಾ ಅಂಬರೀಶ್ ಅವರನ್ನು ಕರೆದು ಮಾತುಕತೆ ನಡೆಸಿದರು. ಅಲ್ಲದೇ ಮಂಡ್ಯವನ್ನು ಜೆಡಿಎಸ್​ಗೆ ಬಿಟ್ಟುಕೊಡಲಾಗಿದ್ದು, ಬೇರೆ ಕ್ಷೇತ್ರದಿಂದ ಸ್ಪರ್ಧಿಸಿ ಎಂದು ಆಫರ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಜೆಪಿ ನಡ್ಡಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಮಂಡ್ಯದ ಸೀಟು ಹಂಚಿಕೆ ಇನ್ನೂ ಅಂತಿಮವಾಗಿಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಒಂದು ಸುದೀರ್ಘವಾದ ಚರ್ಚೆ ನಡೆಯಿತು. ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಜೊತೆ ಮಾತುಕತೆ ಮುಕ್ತಾಯವಾಗಿದೆ. ಮಂಡ್ಯದ ಬಗ್ಗೆ ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮಂಡ್ಯ ಕ್ಷೇತ್ರದಿಂದಲೇ ಟಿಕೆಟ್​ ಕೊಡಲು ನಾನು ಕೇಳಿದ್ದೇನೆ. ಇಂದು ಸಂಜೆ ಸಭೆ ನಡೆಯಲಿದೆ. ಈ ಸಭೆಯ ನಂತರ ನಿರ್ಧಾರವಾಗಲಿದೆ. ಮೋದಿಯವರು ನನಗೆ ಭರವಸೆ ನೀಡಿದ್ದಾರೆ. ನಿಮ್ಮನ್ನ ಮತ್ತು ನಿಮ್ಮ ಕಾರ್ಯಕರ್ತರನ್ನ ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆ ಇಲ್ಲ ಎಂದು ಭರವಸೆ‌ ನೀಡಿದ್ದಾರೆ. ನನ್ನ ಮುಂದಿನ ನಿರ್ಧಾರವನ್ನ ಕ್ಷೇತ್ರಕ್ಕೆ ತೆರಳಿ ನಮ್ಮ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇನೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿಯಿಂದ ದೂರ ಹೋಗುವ ಪ್ರಶ್ನೆ ಇಲ್ಲ. ನನ್ನ ಸಂಸತ್ ಅವಧಿ ಮುಕ್ತಾಯದ ನಂತರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದರು.

ಇದನ್ನೂ ಓದಿ: ವಿವಿಧ ರಾಜಕೀಯ ಪಕ್ಷಗಳ ನಾಯಕರು ನನ್ನನ್ನು ಸಂಪರ್ಕ ಮಾಡುತ್ತಿದ್ದಾರೆ: ಸದಾನಂದಗೌಡ

ನನ್ನ ಸ್ಪರ್ಧೆ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ

ನನ್ನ ಸ್ಪರ್ಧೆ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ನಿಶ್ಚಿಂತೆಯಾಗಿರಿ ಏನೂ ನಿರ್ಧಾರ ಆಗಿಲ್ಲ ಎಂದು ಜೆ.ಪಿ ನಡ್ಡಾ ಅವರೇ ಹೇಳಿದ್ದಾರೆ. ನಿಮ್ಮಂತಹ ನಾಯಕಿ ಬಿಜೆಪಿ ಪಕ್ಷಕ್ಕೆ ಬೇಕು. ಇಂದು ಮತ್ತೊಂದು ಸಭೆ ನಡೆಯಲಿದ್ದು, ಮಂಡ್ಯ ಬಗ್ಗೆ ಫೈನಲ್ ನಿರ್ಧಾರ ತಿಳಿಸುತ್ತೇವೆ ಎಂದು ನಡ್ಡಾ ಹೇಳಿದ್ದಾರೆ ಎಂದು ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದರು.

ಇನ್ನು, ನಾನು ಸ್ಪರ್ಧೆ ಮಾಡಬೇಕು ಅನ್ನೋದಕ್ಕಿಂತ ಮಂಡ್ಯದಲ್ಲಿ ಬಿಜೆಪಿ ಸ್ಪರ್ಧೆ ಮಾಡಬೇಕು. ಸ್ಪರ್ಧೆ ಮಾಡಿದ್ರೆ ಮಂಡ್ಯದಲ್ಲಿ ಬಿಜೆಪಿ ಬೇಸ್ ಉಳಿಯುತ್ತೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ವಿಚಾರ ಊಹಾಪೋಹ. ಯಾವ ಕ್ಷೇತ್ರ ಖಾಲಿ ಇರುತ್ತೆ ಅಲ್ಲಿ ನನ್ನ ಹೆಸರು ಜೋಡಿಸ್ತಿದ್ದಾರೆ. ಕಳೆದ ಬಾರಿ ಪಕ್ಷೇತರರವಾಗಿ ನಿಲ್ಲಿ ಎಂದು ಅಭಿಮಾನಿಗಳು ಹೇಳಿದ್ರು. ಮುಂದೆ ಯಾವುದೇ ನಿರ್ಧಾರ ಮಾಡುವುದಿದ್ದರೆ ಅವರನ್ನೇ ಕೇಳುತ್ತೇನೆ. ಮಂಡ್ಯದಲ್ಲಿ ಜೆಡಿಎಸ್ ಪಕ್ಷ ಸ್ಪರ್ಧೆ ಮಾಡ್ತಿವಿ ಅನ್ನೋದು ಸಹಜ. ಇಂದು ಬಿಜೆಪಿ ಹೈಕಮಾಂಡ್ ಏನ್ ನಿರ್ಧಾರ ಮಾಡುತ್ತೆ ಅದನ್ನು ಬೆಂಬಲಿಗರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು.

ನನ್ನನ್ನು ಸಂಧಾನ ಮಾಡುವ ಪ್ರಯತ್ನ ಆಗಿಲ್ಲ

ನನ್ನನ್ನು ಸಂಧಾನ ಮಾಡುವ ಪ್ರಯತ್ನ ಇಂದು ಆಗಿಲ್ಲ. ನಾಳೆ ಮಂಡ್ಯಕ್ಕೆ ಹೋಗಿ ಬೆಂಬಲಿಗರೊಂದಿಗೆ ಮಾತನಾಡುತ್ತೇನೆ. ಕಾರ್ಯಕರ್ತರನ್ನು ಬಿಟ್ಟು ಕೊಟ್ಟು ಯಾವುದೇ ನಿರ್ಧಾರ ಮಾಡುವುದಿಲ್ಲ ಎಂದಿದ್ದೇನೆ. ನಿಮ್ಮ ಬೆಂಬಲಿಗರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ವರಿಷ್ಠರು ಭರವಸೆ ನೀಡಿದ್ದಾರೆ. ಪ್ರಧಾನಿ ಕಚೇರಿಯಿಂದ ಕರೆ ಮಾಡಿ ಅಮಿತ್ ಶಾ ಅವರ ಭೇಟಿ ಮಾಡೊಕೆ ಹೇಳಿದ್ದಾರೆ. ನಾಳೆಯೊಳಗೆ ಟೈಂ ಸಿಕ್ಕರೆ ಭೇಟಿ ಮಾಡುತ್ತೇನೆ. ಏನೇ ಆಗಲಿ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು