Sumalatha Ambareesh: ನಾಳೆ ಸಂಸದೆ ಸುಮಲತಾ ಅಂಬರೀಶ್​ ಬಿಜೆಪಿ ಸೇರುತ್ತಾರೆ: ಮಂಡ್ಯ ಗೌಡ್ತಿ ಒಳಗುಟ್ಟು ರಟ್ಟು ಮಾಡಿದ ಜೆಡಿಎಸ್ ಶಾಸಕ

ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಅಂತಿಮವಾಗಿ ಬಿಜೆಪಿ ಸೇರುವುದನ್ನು ಜೆಡಿಎಸ್​ ಶಾಸಕ ಖಚಿತಪಡಿಸಿದ್ದಾರೆ, ಅಲ್ಲದೇ ಯಾವಾಗ ಸೇರಲಿದ್ದಾರೆ ಅಂತಲೂ ದಿನವನ್ನು ಸಹ ಹೇಳಿದ್ದಾರೆ.

Sumalatha Ambareesh: ನಾಳೆ ಸಂಸದೆ ಸುಮಲತಾ ಅಂಬರೀಶ್​ ಬಿಜೆಪಿ ಸೇರುತ್ತಾರೆ: ಮಂಡ್ಯ ಗೌಡ್ತಿ ಒಳಗುಟ್ಟು ರಟ್ಟು ಮಾಡಿದ ಜೆಡಿಎಸ್ ಶಾಸಕ
Follow us
|

Updated on:Mar 09, 2023 | 1:39 PM

ಮೈಸೂರು/ ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ (Sumalatha Ambareesh)​ ಅವರು ಯಾವ ಪಕ್ಷಕ್ಕೆ ಸೇರುತ್ತಾರೆ ಎನ್ನುವ ಕುತೂಹಲ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಸಂಸದೆ ಸುಮಲತಾ ರಾಜಕೀಯ ನಡೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಯಾವ ಪಕ್ಷ ಸೇರಬೇಕೆಂದು ಮಂಡ್ಯ ಗೌಡ್ತಿ ತಮ್ಮ ಆಪ್ತರೊಂದಿಗೆ ಚರ್ಚೆ ನಡೆಸಿದ್ದಾರೆ. ಇದರ ಮಧ್ಯೆ ಸುಮಲತಾ ಅಂಬರೀಶ್​ ನಾಳೆ(ಮಾರ್ಚ್ 10) ಬಿಜೆಪಿ ಸೇರುತ್ತಾರೆ ಎಂದು ಜೆಡಿಎಸ್​ ಶಾಸಕ ಸಿ.ಎಸ್.ಪುಟ್ಟರಾಜು (CS Puttaraju) ಹೊಸ ಬಾಂಬ್ ಸಿಡಿಸಿದ್ದಾರೆ.

ಇದನ್ನೂ ಓದಿ: ಮತ್ತೆ ರಾಜಕಾರಣದ ಸೆಂಟರ್‌ ಆಫ್ ಅಟ್ರಾಕ್ಷನ್ ಆಯ್ತು ಮಂಡ್ಯ, ಹಲ್‌ಚಲ್ ಎಬ್ಬಿಸಿದ ಸುಮಲತಾ ರಾಜಕೀಯ ನಿಗೂಢ ಹೆಜ್ಜೆ

ಇಂದು(ಮಾರ್ಚ್ 09) ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಸ್.ಪುಟ್ಟರಾಜು, ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ ನಾಳೆ ಬಿಜೆಪಿ ಸೇರ್ತಾರೆ. ಮೋದಿ ಕಾರ್ಯಕ್ರಮದಲ್ಲೇ ಪಕ್ಷ ಸೇರ್ಪಡೆಗೆ ಪ್ಲ್ಯಾನ್ ಮಾಡಿದ್ದರು. ಆದ್ರೆ, ಸರ್ಕಾರಿ ಕಾರ್ಯಕ್ರಮ ಆಗಿದ್ದರಿಂದ ಅವಕಾಶ ಸಿಗಲಿಲ್ಲ ಎಂದು ಹೇಳಿದರು. ಈ ಮೂಲಕ ಸುಮಲತಾ ಬಿಜೆಪಿ ಸೇರುವುದು ಕನ್ಫರ್ಮ್ ಎನ್ನುವ ಸುಳಿವು ಸಿಕ್ಕಂತಾಗಿದೆ.

ನಾಳೆ ಮಧ್ಯಾಹ್ನ ಸುದ್ದಿಗೋಷ್ಠಿ ಕರೆದ ಸುಮಲತಾ ಅಂಬರೀಶ್​

ನಾಳೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಾರೆ ಎಂದು ಜೆಡಿಎಸ್​ ಶಾಸಕ ಹೇಳಿದ್ದಾರೆ. ಮತ್ತೊಂದೆಡೆ ನಾಳೆಯೇ(ಮಾ.10) ಸುಮಲತಾ ಅಂಬರೀಶ್​ ಸುದ್ದಿಗೋಷ್ಠಿ ಕರೆದಿದ್ದು, ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಬಗ್ಗೆ ಘೋಷಿಸುವ ಸಾಧ್ಯತೆಗಳಿವೆ. ಮಂಡ್ಯದ ತಮ್ಮ ನಿವಾಸದಲ್ಲೇ  ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ. ಸುಮಲತಾ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್​ನಿಂದ​ ಗ್ರೀನ್ ಸಿಗ್ನಲ್​ ನೀಡಿದ್ದರಿಂದ ಸುಮಲತಾ ಅಂಬರೀಶ್ ತಮ್ಮ ನಿರ್ಧಾರ ಪ್ರಕಟಿಸಲು​ ಸುದ್ದಿಗೋಷ್ಠಿ ಕರೆದಿದ್ದಾರೆ ಎಂದು ತಿಳಿದುಬಂದಿದೆ.

ಮೋದಿ ಸಮ್ಮುಖದಲ್ಲಿ ಬಿಜೆಪಿ ಸೇರಲು ಕಸರತ್ತು ನಡೆಸಿದ್ರಾ?

ಹೌದು…ಸುಮಲತಾ ಅವರು ತಮ್ಮ ಆಪ್ತರೊಂದಿಗೆ ಸರಣಿ ಸಭೆಗಳನ್ನು ತರಾತುರಿಯಲ್ಲಿ ಮಾಡಿದ್ದನ್ನು ಗಮನಿಸಿದ್ದರೆ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲೇ ಬಿಜೆಪಿ ಸೇರಲು ಬಯಸಿದ್ದರು. ಇದೇ ಮಾರ್ಚ್ 12ರಂದು ಮೋದಿ ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಬಿಜೆಪಿ ಸೇರಲು ಸುಮಲತಾ ಪ್ಲಾನ್ ಮಾಡಿದ್ದರು ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ಮೊನ್ನೇ ಅಷ್ಟೇ ರಾಜಕೀಯ ಮುತ್ಸದಿ ಎಸ್​.ಎಂ. ಕೃಷ್ಣ ಅವರನ್ನು ಭೇಟಿ ಮಾಡಿದ್ದರು. ಬಳಿಕ ಬೆಂಗಳೂರಿನ ತಮ್ಮ ನಿವಾಸದಲ್ಲಿ ಆಪ್ತರೊಂದಿಗೆ ಸಭೆ ಮಾಡಿ ಈ ಬಗ್ಗೆ ಚರ್ಚೆ ಮಾಡಿದ್ದರು.  ಇದೀಗ ಇದಕ್ಕೆ ಪುಟ್ಟರಾಜು ಸಹ ಹೇಳಿಕೆ ಹಿಂಬು ನೀಡಿದಂತಿದೆ.

ಮೊದಲು ಕಾಂಗ್ರೆಸ್​​ ಸೇರ್ಪಡೆಗೆ ಒಲವು ತೋರಿದ್ದ ಸುಮಲತಾ ಅಂಬರೀಶ್​ ಇದೀಗ ಬಿಜೆಪಿ ಸೇರಲು ತೀರ್ಮಾನಿಸಿದ್ದಾರೆ. ಹೀಗಾಗಿ ಎಸ್​ಎಂ ಕೃಷ್ಣ ಸೇರಿದಂತೆ ತಮ್ಮ ಆಪ್ತರೊಂದಿಗೆ ಚರ್ಚೆ ಮಾಡಿದ್ದಾರೆ. ಅಲ್ಲದೇ ಈಗಾಗಲೇ ಬಿಜೆಪಿ ನಾಯಕರ ಜೊತೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದು, ತಮ್ಮ ಮುಂದಿನ ರಾಜಕೀಯ ಭವಿಷ್ಯವನ್ನು ನೋಡಿಕೊಂಡು ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಬಿಜೆಪಿ ವಿಜಯ್ ಸಂಕಲ್ಪ ಯಾತ್ರೆಯಲ್ಲಿ ಸುಮಲತಾ‌ ಭಾವಚಿತ್ರ ಮದ್ದೂರಿನ ಬಿಜೆಪಿ‌ ನಾಯಕರ ಫ್ಲೆಕ್ಸ್​ನಲ್ಲಿ ರಾರಾಜಿಸಿತ್ತು. ಮದ್ದೂರಿನ ಬಿಜೆಪಿ ಮುಖಂಡ ಎಸ್ಪಿ ಸ್ವಾಮಿ ಭಾವಚಿತ್ರದ ಪೋಸ್ಟರ್ ಜೊತೆಗೆ ಸುಮಲತಾ ಭಾವಚಿತ್ರ ಕಂಡು ಬಂದಿತ್ತು. ಅಲ್ಲದೇ ಈ ಹಿಂದೆ ಅಮಿತ್​ ಶಾ ಭೇಟಿ ಸಂದರ್ಭದಲ್ಲೂ ಸಹ ಬಿಜೆಪಿ ಬ್ಯಾನರ್​ನಲ್ಲಿ ಸುಮಲತಾ ಅಂಬರೀಶ್​ ಫೋಟೋ ರಾರಾಜಿಸಿದ್ದವು. ಆದ್ರೆ, ಇದೀಗ ಜೆಡಿಎಸ್​ ಶಾಸಕ ಪುಟ್ಟರಾಜು, ಸಮಲತಾ ಬಿಜೆಪಿ ಸೇರ್ಪಡೆಯನ್ನು ಖಚಿತಪಡಿಸಿದ್ದಾರೆ.

ಸುಮಲತಾ ಅಂಬರೀಶ್ ಬಿಜೆಪಿ ಸೇರುವ ವದಂತಿ ಹಲವು ದಿನಗಳಿಂದ ಹರಿದಾಡುತ್ತಿದ್ದವು. ಆದರೆ ಅದು ಕನ್ಫರ್ಮ್ ಅನ್ನೋ ಸುಳಿವು ಸಿಕ್ಕಿದೆ. ಕಾರಣ ಸುಮಲತಾ ಬಿಜೆಪಿ ಸೇರ್ಪಡೆ ಆಗಲು, ಮದ್ದೂರು,ಮಂಡ್ಯ, ಶ್ರೀರಂಗಪಟ್ಟಣದಲ್ಲಿ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಬೇಕೆಂಬ ಕೆಲ ಷರತ್ತುಗಳು ಹಾಕಿದ್ದಾರ ಎಂದು ತಿಳಿದುಬಂದಿದೆ. ಇನ್ನು 2024ಕ್ಕೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್​ ಕೇಳಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:03 pm, Thu, 9 March 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು