AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ನಿಜವಾದ ಶಿವಸೇನಾ ಯಾರು ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳಬೇಡಿ: ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್

ನಿಜವಾದ ಶಿವಸೇನಾ ನಾವೇ ಎಂದು ವಾದಿಸುತ್ತಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರ ಅರ್ಜಿ ಬಗ್ಗೆ ನಿರ್ಧಾರ ಕೈಗೊಳ್ಳಬೇಡಿ ಎಂದು ಚುನಾವಣಾ ಆಯೋಗಕ್ಕೆ ಹೇಳಿದ ಸುಪ್ರೀಂಕೋರ್ಟ್

Breaking ನಿಜವಾದ ಶಿವಸೇನಾ ಯಾರು ಎಂಬುದರ ಬಗ್ಗೆ  ನಿರ್ಧಾರ ಕೈಗೊಳ್ಳಬೇಡಿ: ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್
ಉದ್ಧವ್ ಠಾಕ್ರೆ- ಏಕನಾಥ್ ಶಿಂಧೆ
TV9 Web
| Edited By: |

Updated on:Aug 04, 2022 | 12:43 PM

Share

ದೆಹಲಿ: ಶಿವಸೇನಾ (Shiv sena) ಮೇಲಿನ ನಿಯಂತ್ರಣ ಯಾರಿಗೆ ಎಂಬ ಹೋರಾಟದಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಬಿಗ್‌ ರಿಲೀಫ್‌ ನೀಡಿರುವ ಸುಪ್ರೀಂಕೋರ್ಟ್‌ (Supreme Court), ನಿಜವಾದ ಶಿವಸೇನಾ ನಾವೇ ಎಂದು ವಾದಿಸುತ್ತಿರುವ ಪ್ರತಿಸ್ಪರ್ಧಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರ ಅರ್ಜಿ ಬಗ್ಗೆ ನಿರ್ಧಾರ ಕೈಗೊಳ್ಳಬೇಡಿ ಎಂದು ಚುನಾವಣಾ ಆಯೋಗಕ್ಕೆ (Election Commission )ಹೇಳಿದೆ. ಈ ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ನೀಡಬೇಕೇ ಎಂಬುದರ ಬಗ್ಗೆ ಸುಪ್ರೀಂಕೋರ್ಟ್ ಸೋಮವಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.ನಮ್ಮಲ್ಲಿ ಹೆಚ್ಚಿನ ಸಂಖ್ಯೆಯ ಶಾಸಕರಿದ್ದಾರೆ ಹಾಗಾಗಿ ನಾವೇ ನಿಜವಾದ ಶಿವಸೇನಾ ಎಂದು ಶಿಂಧೆ ವಾದಿಸುತ್ತಿದ್ದು, ಬಹುಮತದಿಂದ ಪ್ರಜಾಸತ್ತಾತ್ಮಕವಾಗಿ ತೆಗೆದುಕೊಂಡ ಪಕ್ಷದ ಆಂತರಿಕ ನಿರ್ಧಾರಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಬಾರದು ಎಂದು ಹೇಳಿದ್ದಾರೆ. ನೀವು ಚುನಾಯಿತರಾದ ಮೇಲೆ ಸಂಪೂರ್ಣವಾಗಿ ರಾಜಕೀಯ ಪಕ್ಷವೊಂದನ್ನು ಕಡೆಗಣಿಸುತ್ತಿದ್ದೀರಿ ಎಂದಾದರೆ ಅದು ಪ್ರಜಾತಂತ್ರಕ್ಕೆ ಅಪಾಯಕಾರಿ ಅಲ್ಲವೇ ಎಂದು ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಶಿಂಧೆ ಬಣಕ್ಕೆ ಕೇಳಿದ್ದಾರೆ.  ಇದಕ್ಕೆ ಪ್ರತಿಕ್ರಿಯಿಸಿದ ಹಿರಿಯ ನ್ಯಾಯವಾದಿ, ಶಿಂಧೆ ಬಣದ ಪರ ವಾದಿಸುತ್ತಿರುವ ಹರೀಶ್ ಸಾಳ್ವೆ, ಇಲ್ಲ ಎಂದಿದ್ದಾರೆ.

ಚುನಾವಣಾ ಆಯೋಗ ನಿರ್ಧರಿಸಲಿ ಎಂದು ಠಾಕ್ರೆ ಬಣ ಬಯಸುತ್ತಿಲ್ಲ. ಶಿಂಧೆ ಬಣದಲ್ಲಿರುವ ಬಂಡಾಯ ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ನಿರ್ಧಾರ ಬಾಕಿ ಇದ್ದು ಅಲ್ಲಿಯವರಿಗೆ ನಿಜವಾದ ಶಿವಸೇನಾ ವಿಷಯ ಬಗ್ಗೆ ಚುನಾವಣಾ ಆಯೋಗ ನಿರ್ಧಾರ ಕೈಗೊಳ್ಳುವುದಕ್ಕೆ ತಡೆ ನೀಡಿ ಎಂದು ಠಾಕ್ರೆ ಬಣ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಎರಡೂ ಬಣಗಳು ಆಗಸ್ಟ್ 8ಕ್ಕೆ ಮುಂಚಿತವಾಗಿ ಸಾಕ್ಷ್ಯ ಸಲ್ಲಿಸಬೇಕು ಎಂದು ಕೇಳಿರುವ ಚುನಾವಣಾ ಆಯೋಗ ಆನಂತರವೇ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದೆ.

Published On - 12:23 pm, Thu, 4 August 22

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?