AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Floor Test ಮಹಾರಾಷ್ಟ್ರದಲ್ಲಿ ನಾಳೆ ನಡೆಯಲಿರುವ ವಿಶ್ವಾಸಮತ ಯಾಚನೆಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್

ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಬಗ್ಗೆ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ನಾಳೆ ಎಂವಿಎ ಸರ್ಕಾರ ವಿಶ್ವಾಸಮತ ಯಾಚನೆ ಮಾಡಲಿದೆ.

Maharashtra Floor Test ಮಹಾರಾಷ್ಟ್ರದಲ್ಲಿ ನಾಳೆ ನಡೆಯಲಿರುವ ವಿಶ್ವಾಸಮತ ಯಾಚನೆಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್
ಉದ್ಧವ್ ಠಾಕ್ರೆ
TV9 Web
| Edited By: |

Updated on:Jun 29, 2022 | 10:28 PM

Share

ಗುರುವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ (Floor Test) ಬಗ್ಗೆ ರಾಜ್ಯಪಾಲರ ಆದೇಶದ ವಿರುದ್ಧ ಮಹಾರಾಷ್ಟ್ರ(Maharashtra) ಸರ್ಕಾರ ಸಲ್ಲಿಸಿರುವ ಅರ್ಜಿಯ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ (Supreme Court) ವಿಶ್ವಾಸಮತ ಯಾಚನೆಗೆ  ತಡೆ ನೀಡಲು ನಿರಾಕರಿಸಿದೆ. ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ ಅವರು ಬಹುಮತ ಸಾಬೀತು ಪಡಿಸುವ ಆದೇಶ ನೀಡುವಲ್ಲಿ ಆತುರವನ್ನು ತೋರಿಸಿದ್ದಾರೆ. ಅವರು ವಿರೋಧ ಪಕ್ಷದ ನಾಯಕರ ಸಲಹೆಯಂತೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಎಂವಿಎ ಸರ್ಕಾರವು ನ್ಯಾಯಾಲಯದಲ್ಲಿ ವಾದಿಸಿತು. ಅದೇ ವೇಳೆ ಬಂಡಾಯ ಶಾಸಕರ ಅನರ್ಹತೆಗೆ ಸಂಬಂಧಿಸಿದ ಅರ್ಜಿಯು ನ್ಯಾಯಾಲಯದ ಮುಂದೆ ಬಾಕಿ ಇದೆ ಎಂದು ಅದು ಸೂಚಿಸಿದೆ. ಬುಧವಾರ ರಾತ್ರಿ 9ಗಂಟೆಗೆ ತೀರ್ಪು ಪ್ರಕಟಿಸಿದ ನ್ಯಾಯಪೀಠ, ನಾಳೆ ನಡೆಯಲಿರುವ  ಬಹುಮತ ಸಾಬೀತು  ಪ್ರಕ್ರಿಯೆಯು ರಿಟ್ ಅರ್ಜಿಯ ಅಂತಿಮ ಫಲಿತಾಂಶಕ್ಕೆ ಒಳಪಟ್ಟಿರುತ್ತದೆ ಎಂದು ಹೇಳಿದೆ. ಇದಾದ ನಂತರ ಪೀಠವು ಇದೀಗ ಜೈಲಿನಲ್ಲಿರುವ ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಅವರು ನಾಳೆ ವಿಶ್ವಾಸ ಮತಯಾಚನೆಯಲ್ಲಿ ಮತದಾನ ಮಾಡಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದೆ.

ವಿಚಾರಣೆಯ ಅಪ್ಡೇಟ್ಸ್

  1. ಅರ್ಜಿಗೆ ಸಾಲಿಸಿಟರ್ ಜನರಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
  2. ನ್ಯಾಯಮೂರ್ತಿ ಕಾಂತ್: ಅವರು ಭಾಗವಹಿಸಲಿ, ಅವರು ಚುನಾಯಿತ ಶಾಸಕರು. ಕೆಲವೊಂದು ಪರಿಸ್ಥಿತಿಯಲ್ಲಿ ಯಾವುದೇ ಕೇಂದ್ರೀಯ ಸಂಸ್ಥೆಗಳು ಶಾಸಕರನ್ನು ಪ್ರಕರಣಗಳಲ್ಲಿ ಸಿಲುಕಿಸಬಹುದು ಮತ್ತು ಅವರನ್ನು ತಡೆಯಬಹುದು.
  3. ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಮತದಾನ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂದು ಹೇಳಿದ ಸಾಲಿಸಿಟರ್ ಜನರಲ್ ಸೆಕ್ಷನ್ 69(5) RPA ಜೈಲಿನಲ್ಲಿರುವ ವ್ಯಕ್ತಿಗಳನ್ನು ಮತದಾನ ಮಾಡದಂತೆ ನಿರ್ಬಂಧಿಸುತ್ತದೆ ಎಂದಿದ್ದಾರೆ.
  4. ಸೆಕ್ಷನ್ 69 (5) ಗೆ ಸಂಬಂಧಿಸಿದ ದೊಡ್ಡ ಪ್ರಶ್ನೆಗಳನ್ನು ಪರಿಗಣಿಸಲು ಎಂಎಲ್‌ಸಿ ಚುನಾವಣೆಯಲ್ಲಿ ಮತ ಚಲಾಯಿಸುವಂತೆ ಕೋರಿ ಅರ್ಜಿಯಲ್ಲಿ ಪೀಠವು ನೋಟಿಸ್ ನೀಡಿದೆ ಎಂದು ಅರ್ಜಿದಾರರ ಪರ ವಾದಿಸಿದ ಆರೋರಾ ಹೇಳಿದ್ದಾರೆ.
  5. ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಅಲರ ವಿಶ್ವಾಸ ಮತ ಯಾಚನೆಯಲ್ಲಿಮತ ಚಲಾಯಿಸಬಹುದು ಎಂದು ಸಾಲಿಸಿಟರ್ ಜನರಲ್ ಒಪ್ಪಿದ್ದಾರೆ.
  6. “ಅವರು ಇಡಿ ಕಸ್ಟಡಿಯಲ್ಲಿ ಬರುತ್ತಾರೆ ಮತ್ತು ಇಡಿ ಕಸ್ಟಡಿಗೆ ಹಿಂತಿರುಗುತ್ತಾರೆ” ಎಂದ ಎಸ್ ಜಿ.
  7. ನಾಳೆ ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ವಿಶ್ವಾಸಮತ ಪರೀಕ್ಷೆಯಲ್ಲಿ ಭಾಗವಹಿಸಲು ಜೈಲಿನಲ್ಲಿರುವ ಶಾಸಕರಾದ ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಅವರಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಇಡಿ/ಸಿಬಿಐ ದಾಖಲಿಸಿದ ಪ್ರಕರಣಗಳಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿರುವುದರಿಂದ ಅವರನ್ನು ಬೆಂಗಾವಲು ಮಾಡಲು ಎರಡೂ ಸಂಸ್ಥೆಗಳಿಗೆ ಸೂಚಿಸಲಾಗಿದೆ.
  8. ಪ್ರಕ್ರಿಯೆಗಳು ಮುಗಿದ ನಂತರ, ಅರ್ಜಿದಾರರನ್ನು ನ್ಯಾಯಾಂಗ ಬಂಧನಕ್ಕೆ ಹಿಂತಿರುಗಿಸಲಾಗುತ್ತದೆ. ಆದೇಶವನ್ನು ಪಾಲನೆಗಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

Published On - 9:18 pm, Wed, 29 June 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ