AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Floor Test ಮಹಾರಾಷ್ಟ್ರದಲ್ಲಿ ನಾಳೆ ನಡೆಯಲಿರುವ ವಿಶ್ವಾಸಮತ ಯಾಚನೆಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್

ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಬಗ್ಗೆ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ನಾಳೆ ಎಂವಿಎ ಸರ್ಕಾರ ವಿಶ್ವಾಸಮತ ಯಾಚನೆ ಮಾಡಲಿದೆ.

Maharashtra Floor Test ಮಹಾರಾಷ್ಟ್ರದಲ್ಲಿ ನಾಳೆ ನಡೆಯಲಿರುವ ವಿಶ್ವಾಸಮತ ಯಾಚನೆಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್
ಉದ್ಧವ್ ಠಾಕ್ರೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 29, 2022 | 10:28 PM

ಗುರುವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ (Floor Test) ಬಗ್ಗೆ ರಾಜ್ಯಪಾಲರ ಆದೇಶದ ವಿರುದ್ಧ ಮಹಾರಾಷ್ಟ್ರ(Maharashtra) ಸರ್ಕಾರ ಸಲ್ಲಿಸಿರುವ ಅರ್ಜಿಯ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ (Supreme Court) ವಿಶ್ವಾಸಮತ ಯಾಚನೆಗೆ  ತಡೆ ನೀಡಲು ನಿರಾಕರಿಸಿದೆ. ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ ಅವರು ಬಹುಮತ ಸಾಬೀತು ಪಡಿಸುವ ಆದೇಶ ನೀಡುವಲ್ಲಿ ಆತುರವನ್ನು ತೋರಿಸಿದ್ದಾರೆ. ಅವರು ವಿರೋಧ ಪಕ್ಷದ ನಾಯಕರ ಸಲಹೆಯಂತೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಎಂವಿಎ ಸರ್ಕಾರವು ನ್ಯಾಯಾಲಯದಲ್ಲಿ ವಾದಿಸಿತು. ಅದೇ ವೇಳೆ ಬಂಡಾಯ ಶಾಸಕರ ಅನರ್ಹತೆಗೆ ಸಂಬಂಧಿಸಿದ ಅರ್ಜಿಯು ನ್ಯಾಯಾಲಯದ ಮುಂದೆ ಬಾಕಿ ಇದೆ ಎಂದು ಅದು ಸೂಚಿಸಿದೆ. ಬುಧವಾರ ರಾತ್ರಿ 9ಗಂಟೆಗೆ ತೀರ್ಪು ಪ್ರಕಟಿಸಿದ ನ್ಯಾಯಪೀಠ, ನಾಳೆ ನಡೆಯಲಿರುವ  ಬಹುಮತ ಸಾಬೀತು  ಪ್ರಕ್ರಿಯೆಯು ರಿಟ್ ಅರ್ಜಿಯ ಅಂತಿಮ ಫಲಿತಾಂಶಕ್ಕೆ ಒಳಪಟ್ಟಿರುತ್ತದೆ ಎಂದು ಹೇಳಿದೆ. ಇದಾದ ನಂತರ ಪೀಠವು ಇದೀಗ ಜೈಲಿನಲ್ಲಿರುವ ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಅವರು ನಾಳೆ ವಿಶ್ವಾಸ ಮತಯಾಚನೆಯಲ್ಲಿ ಮತದಾನ ಮಾಡಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದೆ.

ವಿಚಾರಣೆಯ ಅಪ್ಡೇಟ್ಸ್

  1. ಅರ್ಜಿಗೆ ಸಾಲಿಸಿಟರ್ ಜನರಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
  2. ನ್ಯಾಯಮೂರ್ತಿ ಕಾಂತ್: ಅವರು ಭಾಗವಹಿಸಲಿ, ಅವರು ಚುನಾಯಿತ ಶಾಸಕರು. ಕೆಲವೊಂದು ಪರಿಸ್ಥಿತಿಯಲ್ಲಿ ಯಾವುದೇ ಕೇಂದ್ರೀಯ ಸಂಸ್ಥೆಗಳು ಶಾಸಕರನ್ನು ಪ್ರಕರಣಗಳಲ್ಲಿ ಸಿಲುಕಿಸಬಹುದು ಮತ್ತು ಅವರನ್ನು ತಡೆಯಬಹುದು.
  3. ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಮತದಾನ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂದು ಹೇಳಿದ ಸಾಲಿಸಿಟರ್ ಜನರಲ್ ಸೆಕ್ಷನ್ 69(5) RPA ಜೈಲಿನಲ್ಲಿರುವ ವ್ಯಕ್ತಿಗಳನ್ನು ಮತದಾನ ಮಾಡದಂತೆ ನಿರ್ಬಂಧಿಸುತ್ತದೆ ಎಂದಿದ್ದಾರೆ.
  4. ಸೆಕ್ಷನ್ 69 (5) ಗೆ ಸಂಬಂಧಿಸಿದ ದೊಡ್ಡ ಪ್ರಶ್ನೆಗಳನ್ನು ಪರಿಗಣಿಸಲು ಎಂಎಲ್‌ಸಿ ಚುನಾವಣೆಯಲ್ಲಿ ಮತ ಚಲಾಯಿಸುವಂತೆ ಕೋರಿ ಅರ್ಜಿಯಲ್ಲಿ ಪೀಠವು ನೋಟಿಸ್ ನೀಡಿದೆ ಎಂದು ಅರ್ಜಿದಾರರ ಪರ ವಾದಿಸಿದ ಆರೋರಾ ಹೇಳಿದ್ದಾರೆ.
  5. ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಅಲರ ವಿಶ್ವಾಸ ಮತ ಯಾಚನೆಯಲ್ಲಿಮತ ಚಲಾಯಿಸಬಹುದು ಎಂದು ಸಾಲಿಸಿಟರ್ ಜನರಲ್ ಒಪ್ಪಿದ್ದಾರೆ.
  6. “ಅವರು ಇಡಿ ಕಸ್ಟಡಿಯಲ್ಲಿ ಬರುತ್ತಾರೆ ಮತ್ತು ಇಡಿ ಕಸ್ಟಡಿಗೆ ಹಿಂತಿರುಗುತ್ತಾರೆ” ಎಂದ ಎಸ್ ಜಿ.
  7. ನಾಳೆ ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ವಿಶ್ವಾಸಮತ ಪರೀಕ್ಷೆಯಲ್ಲಿ ಭಾಗವಹಿಸಲು ಜೈಲಿನಲ್ಲಿರುವ ಶಾಸಕರಾದ ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಅವರಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಇಡಿ/ಸಿಬಿಐ ದಾಖಲಿಸಿದ ಪ್ರಕರಣಗಳಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿರುವುದರಿಂದ ಅವರನ್ನು ಬೆಂಗಾವಲು ಮಾಡಲು ಎರಡೂ ಸಂಸ್ಥೆಗಳಿಗೆ ಸೂಚಿಸಲಾಗಿದೆ.
  8. ಪ್ರಕ್ರಿಯೆಗಳು ಮುಗಿದ ನಂತರ, ಅರ್ಜಿದಾರರನ್ನು ನ್ಯಾಯಾಂಗ ಬಂಧನಕ್ಕೆ ಹಿಂತಿರುಗಿಸಲಾಗುತ್ತದೆ. ಆದೇಶವನ್ನು ಪಾಲನೆಗಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

Published On - 9:18 pm, Wed, 29 June 22

ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ