AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಶಾಸಕರ ಅನರ್ಹತೆ ವಿಚಾರ; ಜುಲೈ 20ರಲ್ಲಿ ಸುಪ್ರೀಂಕೋರ್ಟ್​​​ನಲ್ಲಿ ವಿಚಾರಣೆ

ವಿಪ್ ಪಾಲಿಸದೇ ಇರುವ 53 ಶಾಸಕರಿಗೆ ಶಾಸಕಾಂಗ ಕಾರ್ಯದರ್ಶಿ ರಾಜೇಂಜ್ರ ಭಾಗ್ವತ್ ಶೋಕಾಸ್ ನೋಟಿಸ್ ನೀಡಿದ ನಂತರ ಶಿವಸೇನಾ ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಸುಪ್ರೀಂಕೋರ್ಟ್..

ಮಹಾರಾಷ್ಟ್ರದ ಶಾಸಕರ ಅನರ್ಹತೆ ವಿಚಾರ; ಜುಲೈ 20ರಲ್ಲಿ ಸುಪ್ರೀಂಕೋರ್ಟ್​​​ನಲ್ಲಿ ವಿಚಾರಣೆ
ಸುಪ್ರೀಂಕೋರ್ಟ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 17, 2022 | 7:40 PM

Share

ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟು (Maharashtra political crisis) ಬಗ್ಗೆ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ (Supreme Court) ಜುಲೈ 20ಕ್ಕೆ ನಡೆಸಲಿದೆ. ಸಿಜೆಐ ಎನ್​​ವಿ ರಮಣ ನೇತೃತ್ವದ ಮೂವರು ನ್ಯಾಯಮೂರ್ತಿಗಳ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸಲಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಮತ್ತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ಬಣ ಶಾಸಕರ ಅನರ್ಹತೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ವಿಪ್ ಪಾಲಿಸದೇ ಇರುವ 53 ಶಾಸಕರಿಗೆ ಶಾಸಕಾಂಗ ಕಾರ್ಯದರ್ಶಿ ರಾಜೇಂಜ್ರ ಭಾಗ್ವತ್ ಶೋಕಾಸ್ ನೋಟಿಸ್ ನೀಡಿದ ನಂತರ ಶಿವಸೇನಾ ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಸುಪ್ರೀಂಕೋರ್ಟ್ ಕಳೆದ ಸೋಮವಾರ ಮಹಾರಾಷ್ಟ್ರದ ಅಸೆಂಬ್ಲಿ ಸ್ಪೀಕರ್ ಗೆ ಹೇಳಿತ್ತು. ಶೋಕಾಸ್ ನೋಟಿಸ್ ಗಳಲ್ಲಿ 40 ಶೋಕೇಸ್ ನೋಟಿಸ್ ಶಿಂಧೆ ಬಣದ ಶಾಸಕರಿಗೆ ನೀಡಲಾಗಿದ್ದು 13 ಶೋಕಾಸ್ ನೋಟಿಸ್ ಗಳನ್ನ ಠಾಕ್ರೆ ಬಣದ ಶಾಸಕರಿಗೆ ನೀಡಲಾಗಿದೆ. ಈ ಎರಡೂ ಗುಂಪುಗಳು ಪರಸ್ಪರ ಗುಂಪಿನ ಶಾಸಕರ ಅನರ್ಹತೆಗೆ ಒತ್ತಾಯಿಸಿವೆ.

ಇದಕ್ಕಿಂತ ಮೊದಲು ಶಿವಸೇನಾ ಸಂಸದ ಸಂಜಯ್ ರಾವುತ್, ಶಾಸಕರ ಅನರ್ಹತೆ ಬಗ್ಗೆ ಸುಪ್ರೀಂ ತೀರ್ಪು ನೀಡುವವರೆಗೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಬೇಕು ಎಂದು ಒತ್ತಾಯಿಸಿದ್ದರು.

Published On - 7:36 pm, Sun, 17 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ