AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supriya Sule: ಶರದ್ ಪವಾರ್ ಕರೆದಿರುವ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸುಪ್ರಿಯಾ ಸುಳೆ ಮನವಿ

ಶರದ್ ಪವಾರ್ ನೇತೃತ್ವದ ಎನ್​​ಸಿಪಿ ಬಣವು ಇಂದು ಎಲ್ಲಾ ಶಾಸಕರ ಸಭೆಯನ್ನು ಮಾಡಲಾಗವುದು ಎಂದು ಸ್ಪಷ್ಟವಾದ ಕರೆ ಬಂದಿದೆ. ನೀವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಗೆ ಹಾಜರಾಗಬೇಕೆಂಬುದು ಒಂದು ವಿನಮ್ರ ವಿನಂತಿ ಎಂದು ವೀಡಿಯೊ ಮಾಡಿದ ಸುಪ್ರಿಯಾ ಸುಳೆ

Supriya Sule: ಶರದ್ ಪವಾರ್ ಕರೆದಿರುವ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸುಪ್ರಿಯಾ ಸುಳೆ ಮನವಿ
ಸುಪ್ರಿಯಾ ಸುಳೆ
ಅಕ್ಷಯ್​ ಪಲ್ಲಮಜಲು​​
|

Updated on: Jul 05, 2023 | 12:35 PM

Share

ಮುಂಬೈ: ಕಳೆದ ವಾರ ಮಹಾರಾಷ್ಟ್ರದಲ್ಲಿ ಭಾರಿ ರಾಜಕೀಯ ಸಂಚಲನಗಳು ನಡೆದಿತ್ತು. ಎನ್​ಸಿಪಿ ಪಕ್ಷದ ನಾಯಕ ಅಜಿತ್​​ ಪವಾರ್​ ಬಿಜೆಪಿ ಮತ್ತು ಸಿಂಧೆ ಶಿವಸೇನೆ ಬೆಂಬಲಿತ ಸರ್ಕಾರಕ್ಕೆ ಬೆಂಬಲ ನೀಡಿ, ಉಪಮುಖ್ಯಮಂತ್ರಿ ಕೂಡ ಆಗಿದ್ದಾರೆ. ಇದೀಗ ಪಕ್ಷದ ಬಹುಪಾಲು ಶಾಸಕರು ತಮ್ಮೊಂದಿಗಿದ್ದಾರೆ ಎಂಬುದನ್ನು ನಿರೂಪಿಸಲು ಎನ್​ಸಿಪಿಯ ಎರಡು ಬಣಗಳು ಇಂದು ಮುಂಬೈನಲ್ಲಿ ಸಭೆ ಕರೆದಿವೆ. ಈ ಬಗ್ಗೆ ಶರದ್ ಪವಾರ್ ಅವರು ಇಂದು ಕರೆದಿರುವ ಸಭೆಗೆ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರು ಹಾಜರಾಗುವಂತೆ ಎನ್‌ಸಿಪಿ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ (Supriya Sule) ಟ್ವೀಟ್​​ ಮೂಲಕ ಮನವಿ ಮಾಡಿದ್ದಾರೆ.

ಶರದ್ ಪವಾರ್ ನೇತೃತ್ವದ ಎನ್​​ಸಿಪಿ ಬಣವು ಇಂದು ಎಲ್ಲಾ ಶಾಸಕರ ಸಭೆಯನ್ನು ಮಾಡಲಾಗವುದು ಎಂದು ಸ್ಪಷ್ಟವಾದ ಕರೆ ಬಂದಿದೆ. ನೀವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಗೆ ಹಾಜರಾಗಬೇಕೆಂಬುದು ಒಂದು ವಿನಮ್ರ ವಿನಂತಿ. ಪ್ರಸ್ತುತ ಪರಿಸ್ಥಿತಿಯಲ್ಲಿ, 83 ವರ್ಷದ ಯುವ ಯೋಧ ಅಂದರೆ ನಮ್ಮ ಗೌರವಾನ್ವಿತ ಪವಾರ್ ಸಾಹೇಬರು ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಿದ್ದಾರೆ. ಎಂದು ಸುಪ್ರಿಯಾ ಸುಳೆ ವಿಡಿಯೋ ಮಾಡಿ ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ.

ಅಜಿತ್ ಪವಾರ್ ಅವರು ವಿರೋಧ ಪಕ್ಷದ ನಾಯಕತ್ವವನ್ನು ತೊರೆದು ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಸರ್ಕಾರವನ್ನು ಸೇರಿದ ನಂತರ ಈ ಸಭೆಯನ್ನು ಕರೆದಿರುವುದು ಬಹಳ ಕುತೂಹಲ ಮೂಡಿಸಿದೆ. ಇದೀಗ ಅವರು ಉಪಮುಖ್ಯಮಂತ್ರಿ ಹುದ್ದೆಯನ್ನು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Supriya Sule: ಶರದ್ ಪವಾರ್ ರಾಜೀನಾಮೆಗೆ ಮರುಗಿದ ಪೌರ ಕಾರ್ಮಿಕ, ವಿಶೇಷ ವ್ಯಕ್ತಿಯ ಜತೆ ಸೆಲ್ಫಿ ಕ್ಲಿಕ್ಕಿಸಿದ ಸುಪ್ರಿಯಾ ಸುಳೆ

ಶರದ್ ಪವಾರ್ ಅವರು ಪಕ್ಷದ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಮತ್ತು ಪ್ರಧಾನ ಕಾರ್ಯದರ್ಶಿ, ಖಜಾಂಚಿ ಸುನಿಲ್ ತಟ್ಕರೆ ಅವರನ್ನು “ಪಕ್ಷ ವಿರೋಧಿ” ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಇದು ಅಜಿತ್ ಪವಾರ್ ಅವರ ಬಂಡಾಯದಲ್ಲಿ ಭಾಗಿಯಾಗುವಂತೆ ಮಾಡಿದೆ ಎಂದು ಹೇಳಿದ್ದಾರೆ.

ರಾಜ್ಯ ಎನ್‌ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್ ಅವರನ್ನು ತೆಗೆದುಹಾಕಿ ಮತ್ತು ಹೊಸ ನೇಮಕಾತಿಗಳನ್ನು ಮಾಡುವ ಮೂಲಕ ಅಜಿತ್ ಪವಾರ್ ಬಣಕ್ಕೆ ದೊಡ್ಡ ಪಟ್ಟು ನೀಡಿದೆ. ನಮ್ಮ ಬಣಕ್ಕೆ ಎನ್‌ಸಿಪಿ ಶಾಸಕರ ಬೆಂಬಲವಿದೆ ಎಂದು ಎರಡೂ ಬಣಗಳು ಹೇಳಿಕೊಳ್ಳುತ್ತಿದ್ದು, ಇಂದಿನ ಸಭೆಗಳು ಈ ಬಗ್ಗೆ ತಿಳಿದು ಬರಲಿದೆ.

ಇನ್ನಷ್ಟು  ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್