AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress Bus Yatra: ರಾಜ್ಯದಲ್ಲಿ ಕಾಂಗ್ರೆಸ್ ಬಸ್ ಯಾತ್ರೆಗೆ ಹೈಕಮಾಂಡ್​ ಗ್ರೀನ್​ಸಿಗ್ನಲ್, ಉತ್ತರಕ್ಕೆ ಸಿದ್ದು, ದಕ್ಷಿಣಕ್ಕೆ ಡಿಕೆಶಿ

ರಾಜ್ಯದಲ್ಲಿ ಕಾಂಗ್ರೆಸ್ ಬಸ್ ಯಾತ್ರೆಗೆ ಹೈಕಮಾಂಡ್​ ಗ್ರೀನ್​ಸಿಗ್ನಲ್ ನೀಡಿದೆ. ​ ರಾಜ್ಯ ಕಾಂಗ್ರೆಸ್ ನಾಯಕರ ಪ್ರಸ್ತಾವನೆಗೆ ಹೈಕಮಾಂಡ್​ ಸಮ್ಮತಿಸಿದೆ. ಕೆ.ಸಿ.ವೇಣುಗೋಪಾಲ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

Congress Bus Yatra: ರಾಜ್ಯದಲ್ಲಿ ಕಾಂಗ್ರೆಸ್ ಬಸ್ ಯಾತ್ರೆಗೆ ಹೈಕಮಾಂಡ್​ ಗ್ರೀನ್​ಸಿಗ್ನಲ್, ಉತ್ತರಕ್ಕೆ ಸಿದ್ದು, ದಕ್ಷಿಣಕ್ಕೆ ಡಿಕೆಶಿ
Siddu And DKS
TV9 Web
| Edited By: |

Updated on:Oct 26, 2022 | 6:42 PM

Share

ಬೆಂಗಳೂರು: ಮುಂಬರುವ ವಿಧಾನಸಭೆ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಬಸ್ ಯಾತ್ರೆಗೆ ಹೈಕಮಾಂಡ್​ ಗ್ರೀನ್​ಸಿಗ್ನಲ್ ನೀಡಿದೆ. ​ ರಾಜ್ಯ ಕಾಂಗ್ರೆಸ್ ನಾಯಕರ ಪ್ರಸ್ತಾವನೆಗೆ ಹೈಕಮಾಂಡ್​ ಸಮ್ಮತಿಸಿದೆ. ಕೆ.ಸಿ.ವೇಣುಗೋಪಾಲ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಸಿದ್ದರಾಮಯ್ಯ ಬಸ್ ಯಾತ್ರೆ ನಡೆಸಬಹುದು. ಬಸವಕಲ್ಯಾಣದಿಂದ ಸಿದ್ದರಾಮಯ್ಯ ಬಸ್ ಯಾತ್ರೆ ಆರಂಭಿಸುವ ಸಾಧ್ಯತೆ ಎಂದು ಎನ್ನಲಾಗುತ್ತಿದೆ.

ಸಿದ್ದರಾಮಯ್ಯ ಉತ್ತರ ಕರ್ನಾಟಕದಿಂದ ಪ್ರಾರಂಭ ಮಾಡಿದರೆ ಡಿ.ಕೆ.ಶಿವಕುಮಾರ್ ದಕ್ಷಿಣ ಕರ್ನಾಟಕ ಭಾಗದಿಂದ ​ಬಸ್ ಯಾತ್ರೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪ್ರತಿ ದಿನ 2 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಬಸ್ ಯಾತ್ರೆ ಮಾಡಲಾಗುವುದು. ಈ ಯಾತ್ರೆಯನ್ನು ನಡೆಸಲು ಇನ್ನೂ ದಿನಾಂಕ ನಿಗದಿಯಾಗಿಲ್ಲ. ಈ ಬಗ್ಗೆ ಹೈಕಮಾಂಡ್ , ರಾಜ್ಯದಲ್ಲಿ ಸಭೆ ನಡೆಸಿ ದಿನಾಂಕ ನಿಗದಿ ಮಾಡಿಕೊಳ್ಳಿ ಎಂದು ಸಲಹೆ ನೀಡಿದೆ.

ಇದನ್ನು ಓದಿ: ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಬಣ ಬಡಿದಾಟ: ದಿಲ್ಲಿಯಲ್ಲಿ ರಾಜೀ ಸಂಧಾನ, 50:50 ಫಾರ್ಮುಲಾ

ರಾಜ್ಯ ನಾಯಕರ ಪ್ರಸ್ತಾವನೆಗೆ ಒಪ್ಪಿದ ಹೈಕಮಾಂಡ್ ಇಂದು ನಡೆದ ಸಭೆಯಲ್ಲಿ ಬಸ್ ಯಾತ್ರೆಗೆ ಗ್ರೀನ್ ಸಿಗ್ನಲ್ ನೀಡಿದ ಕಾರಣ ಉತ್ತರಕೊಬ್ಬರು, ದಕ್ಷಿಣಕ್ಕೊಬ್ಬರು ಬಸ್ ಯಾತ್ರೆ ಮಾಡಬೇಕು ಎಂದು ಹೈಕಮಾಂಡ್ ಹೇಳಿದ್ದಾರೆ. ಇದೀಗ ಉತ್ತರಕ್ಕೆ ಯಾರು..? ದಕ್ಷಿಣಕ್ಕೆ ಯಾರು..? ಎಂಬುದನ್ನು ಕೆಪಿಸಿಸಿ ಅಧ್ಯಕ್ಷ  ನಿರ್ಧಾರ ಬಿಟ್ಟದ್ದು ಎಂದು ಹೈಕಮಾಂಡ್ ಹೇಳಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಎಲ್ಲಿಂದ ?ಯಾತ್ರೆ ಮಾಡಬೇಕು ಎಂಬುದನ್ನು ಡಿಕೆ ಶಿವಕುಮಾರ್ ನಿರ್ಧರ ಮಾಡಲಿದ್ದಾರೆ.

ಬಹುತೇಕ ಸಿದ್ದರಾಮಯ್ಯ ಉತ್ತರ ಕರ್ನಾಟಕದಲ್ಲಿ ಬಸ್ ಯಾತ್ರೆ ಮಾಡಬಹುದು ಎಂದು ಹೇಳಲಾಗಿದೆ. ಇನ್ನು ದಕ್ಷಿಣದಲ್ಲಿ ಡಿ.ಕೆ ಶಿವಕುಮಾರ್ ಯಾತ್ರೆ ಮಾಡುವ ಸಾಧ್ಯತೆಗಳು ಹೆಚ್ಚಿವೆ.  ದಿನಕ್ಕೆ ಎರಡು ಕ್ಷೇತ್ರಗಳಲ್ಲಿ ಬಸ್ ಯಾತ್ರೆ ನಡೆಸಲು ಹೈಕಮಾಂಡ್ ಸೂಚನೆ ಕೊಟ್ಟಿದ್ದು, ಸಿದ್ದರಾಮಯ್ಯ ಬಸವಕಲ್ಯಾಣದಿಂದ  ಬಸ್ ಯಾತ್ರೆ ಆರಂಭಿಸುವ ಸಾಧ್ಯತೆ ಇದೆ.

ಒಟ್ಟಿನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಸ್ ಯಾತ್ರೆ ರೇಸ್​ನಲ್ಲಿ ಹೈಕಮಾಂಡ್​ ಎಂಟ್ರಿ ಕೊಟ್ಟಿದ್ದು, ಉಭಯ ನಾಯಕರ ಬಣಗಳ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದೆ.

Published On - 6:22 pm, Wed, 26 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ