AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಪಕ್ಷಗಳ ಮಹಾ ಘಟಬಂಧನಕ್ಕೆ ಇದೆ ಸಾಲು ಸಾಲು ಸವಾಲು; ಅವುಗಳು ಯಾವುವು?

ಸವಾಲುಗಳನ್ನು ಮೀರಿ ನಿಂತರೆ ಮಾತ್ರ ಪ್ರತಿಪಕ್ಷಗಳ ಮೈತ್ರಿಕೂಟ ಬಿಜೆಪಿ ವಿರುದ್ಧ ಸೆಣಸಬಹುದಾಗಿದೆ. ಆದರೆ, ಈ ಮೈತ್ರಿಕೂಟದ ಭವಿಷ್ಯ ಬೇರೆ ಬೇರೆ ರಾಜ್ಯಗಳ ಸ್ಥಿತಿಗತಿಗಳ ಮೇಲೆಯೇ ನಿಂತಿದೆ.

ಪ್ರತಿಪಕ್ಷಗಳ ಮಹಾ ಘಟಬಂಧನಕ್ಕೆ ಇದೆ ಸಾಲು ಸಾಲು ಸವಾಲು; ಅವುಗಳು ಯಾವುವು?
ಪ್ರತಿಪಕ್ಷಗಳ ನಾಯಕರು
ಪ್ರಸನ್ನ ಗಾಂವ್ಕರ್​
| Edited By: |

Updated on:Jul 18, 2023 | 7:20 PM

Share

ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಣಿಸಿಯೇ ತೀರಬೇಕೆಂದು ಶತಾಯಗತಾಯ ಪ್ರಯತ್ನಿಸುತ್ತಿರುವ ಪ್ರತಿಪಕ್ಷಗಳು ‘ಮಹಾಮೈತ್ರಿ ಅಥವಾ ಮಹಾಘಟಬಂಧನ್’ (Opposition Parties Meeting) ಅನ್ನು ಬಲಪಡಿಸಲು ಶ್ರಮಿಸುತ್ತಿವೆ. ಅದರ ಅಂಗವಾಗಿ ಇದೀಗ ಬೆಂಗಳೂರಿನಲ್ಲಿ ಎರಡನೇ ಸಭೆ ನಡೆಸಲಾಗುತ್ತಿದೆ. ಆದರೆ, ವಿಪಕ್ಷಗಳ ಮಹಾಘಟಬಂದನ್​​​ ಮುಂದಿರುವ ಹಾದಿ ಅಷ್ಟೊಂದು ಸುಲಭದ್ದಲ್ಲ. ಈ ಮೈತ್ರಿಕೈಟದ ಮುಂದೆ ಸಾಲು ಸಾಲು ಸವಾಲುಗಳಿರುವ ಬಗ್ಗೆ ರಾಜಕೀಯ ಪಡಸಾಲೆಯಲ್ಲಿ ಚರ್ಚೆ ನಡೆಯುತ್ತಿದೆ.

ಸವಾಲುಗಳನ್ನು ಮೀರಿ ನಿಂತರೆ ಮಾತ್ರ ಪ್ರತಿಪಕ್ಷಗಳ ಮೈತ್ರಿಕೂಟ ಬಿಜೆಪಿ ವಿರುದ್ಧ ಸೆಣಸಬಹುದಾಗಿದೆ. ಆದರೆ, ಈ ಮೈತ್ರಿಕೂಟದ ಭವಿಷ್ಯ ಬೇರೆ ಬೇರೆ ರಾಜ್ಯಗಳ ಸ್ಥಿತಿಗತಿಗಳ ಮೇಲೆಯೇ ನಿಂತಿದೆ.

ಮಹಾಘಟಬಂಧನಕ್ಕಿರುವ ಪ್ರಮುಖ ಸವಾಲುಗಳಿವು

  1. ವಿಪಕ್ಷಗಳನ್ನು ಒಗ್ಗೂಡಿಸಿಕೊಂಡು ಮುನ್ನಡೆಸುವವರು ಯಾರು ಎಂಬುದೇ ಮೊದಲ ಪ್ರಶ್ನೆಯಾಗಿದೆ.
  2. ಆರು ಮಂದಿ ಹಾಲಿ ಮುಖ್ಯಮಂತ್ರಿಗಳು ತಾವೇ ಮುಂಚೂಣಿಯಲ್ಲಿರಬೇಕು ಎಂಬ ಲೆಕ್ಕಾಚಾರ ಹಾಕಿಕೊಂಡಿದ್ದಾರೆ.
  3. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕಿರೀಟ ತೊಡಿಸಲು ಮಹಾಘಟಬಂಧನ್ ಪೂರ್ಣಪ್ರಮಾಣದಲ್ಲಿ ಸಿದ್ದವಿಲ್ಲ
  4. ಯಾರ ಸ್ಥಾನ ಏನೇನು ಜವಾಬ್ದಾರಿಗಳೇನು ಎಂಬುದು ಇನ್ನೂ ನಿರ್ಣಯವಾಗಿಲ್ಲ
  5. 24 ಪಕ್ಷಗಳು ಬೇರೆ ಬೇರೆ ರಾಜ್ಯಗಳಲ್ಲಿ ಸ್ಪರ್ಧಿಗಳಾಗಿವೆ
  6. ಕಾಂಗ್ರೆಸ್ ಪಕ್ಷಕ್ಕೆ ಒಕ್ಕೂಟದಲ್ಲಿರುವ ಎಎಪಿ, ತೃಣಮೂಲ ಕಾಂಗ್ರೆಸ್ ಪಕ್ಷಗಳೇ ನೇರ ಸ್ಪರ್ಧಿಗಳಾಗಿವೆ
  7. ವಿಧಾನಸಭೆಗೆ ಒಂದು ಸೂತ್ರ, ಲೋಕಸಭೆಗೆ ಇನ್ನೊಂದು ಸೂತ್ರ ಎಷ್ಟರ ಮಟ್ಟಿಗೆ ವರ್ಕೌಟ್ ಆಗಲಿದೆ ಎಂಬ ಬಗ್ಗೆ ಇನ್ನೂ ಸ್ಪಷ್ಟತೆಯಿಲ್ಲ
  8. ಪಂಜಾಬ್​​ನಲ್ಲಿ ಆಮ್ ಆದ್ಮಿಯ ಬದ್ಧ ವೈರಿ ಹಾಗೂ ನೇರ ಸೆಣಸಾಟ ಇರುವುದು ಕಾಂಗ್ರೆಸ್ ಜೊತೆಗೆ
  9. ಅದೇ ಕಾಂಗ್ರೆಸ್ ದೆಹಲಿಯ ರಾಜಕಾರಣದಲ್ಲಿ ಆಮ್ ಆದ್ಮಿಗೆ ಬೆಂಬಲ ನೀಡುವುದಕ್ಕೆ ಸಿದ್ಧವಿಲ್ಲ, ಆದರೆ ಲೋಕಸಭೆಗೆ ಮಾತ್ರ ಆಮ್ ಆದ್ಮಿ ಜೊತೆಗೆ ಕೈ ಜೋಡಿಸಲು ಸಿದ್ದವಾಗಿದೆ
  10. ಅದೇ ರೀತಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಬದ್ಧ ವೈರಿಗಳು, ತೃಣಮೂಲ ಕಾಂಗ್ರೆಸ್ ಕಾರಣದಿಂದಾಗಿಯೇ ಕಾಂಗ್ರೆಸ್ ನೆಲಕಚ್ಚಿಹೋಗಿದೆ
  11. ಲೋಕಸಭೆಯಲ್ಲಿ ಪ್ರಮುಖ ಜವಾಬ್ದಾರಿ ನೀಡಲು ಕಾಂಗ್ರೆಸ್ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ನೆಚ್ಚಿಕೊಂಡಿದೆ
  12. ತಮಿಳುನಾಡು, ಕೇರಳದಲ್ಲೂ ತ್ರಿಕೋನ‌ ಸ್ಪರ್ಧೆ ಇಲ್ಲ, ನೇರ ಸ್ಪರ್ಧೆ ಇರುವುದು ಕಾಂಗ್ರೆಸ್ ಜೊತೆಗೆ
  13. ನೇರ ಸ್ಪರ್ಧೆ ಇರುವ ಪಕ್ಷಗಳೊಂದಿಗೆ ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಮಾಡಿಕೊಳ್ಳುತ್ತಿರುವ ಒಕ್ಕೂಟ ಬಾಂಧವ್ಯ ಹೇಗೆ ವರ್ಕ್ ಆಗಬಹುದು ಎಂಬುದು ಸದ್ಯದ ಕುತೂಹಲವಾಗಿದೆ
  14. ಬರುವ ನವೆಂಬರ್ ಒಳಗಾಗಿ ಇನ್ನೂ ಮೂರು ಸುತ್ತಿನ ಸಭೆ ನಡೆಸಲು ಬಿಜೆಪಿಯೇತರ ವಿರೋಧ ಪಕ್ಷಗಳ ನಾಯಕರು ತೀರ್ಮಾನ ಮಾಡಿದ್ದಾರೆ

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:50 pm, Tue, 18 July 23

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!