
ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಣಿಸಿಯೇ ತೀರಬೇಕೆಂದು ಶತಾಯಗತಾಯ ಪ್ರಯತ್ನಿಸುತ್ತಿರುವ ಪ್ರತಿಪಕ್ಷಗಳು ‘ಮಹಾಮೈತ್ರಿ ಅಥವಾ ಮಹಾಘಟಬಂಧನ್’ (Opposition Parties Meeting) ಅನ್ನು ಬಲಪಡಿಸಲು ಶ್ರಮಿಸುತ್ತಿವೆ. ಅದರ ಅಂಗವಾಗಿ ಇದೀಗ ಬೆಂಗಳೂರಿನಲ್ಲಿ ಎರಡನೇ ಸಭೆ ನಡೆಸಲಾಗುತ್ತಿದೆ. ಆದರೆ, ವಿಪಕ್ಷಗಳ ಮಹಾಘಟಬಂದನ್ ಮುಂದಿರುವ ಹಾದಿ ಅಷ್ಟೊಂದು ಸುಲಭದ್ದಲ್ಲ. ಈ ಮೈತ್ರಿಕೈಟದ ಮುಂದೆ ಸಾಲು ಸಾಲು ಸವಾಲುಗಳಿರುವ ಬಗ್ಗೆ ರಾಜಕೀಯ ಪಡಸಾಲೆಯಲ್ಲಿ ಚರ್ಚೆ ನಡೆಯುತ್ತಿದೆ.
ಸವಾಲುಗಳನ್ನು ಮೀರಿ ನಿಂತರೆ ಮಾತ್ರ ಪ್ರತಿಪಕ್ಷಗಳ ಮೈತ್ರಿಕೂಟ ಬಿಜೆಪಿ ವಿರುದ್ಧ ಸೆಣಸಬಹುದಾಗಿದೆ. ಆದರೆ, ಈ ಮೈತ್ರಿಕೂಟದ ಭವಿಷ್ಯ ಬೇರೆ ಬೇರೆ ರಾಜ್ಯಗಳ ಸ್ಥಿತಿಗತಿಗಳ ಮೇಲೆಯೇ ನಿಂತಿದೆ.
ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:50 pm, Tue, 18 July 23