AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸ್ಥಾನದಿಂದ ಸಿದ್ದರಾಮಯ್ಯನ್ನ ಕೆಳಗಿಳಿಸಲು ಷಡ್ಯಂತ್ರ ನಡೆದಿದೆ: ಬಸನಗೌಡ ಪಾಟೀಲ್ ಯತ್ನಾಳ್​

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ದೆಹಲಿಯಲ್ಲಿ ಎಲ್ಲಿಲ್ಲಿ ಓಡಾಡುತ್ತಿದ್ದಾರೆ ಎಂಬುವುದರ ಬಗ್ಗೆ ಮಾಹಿತಿ ಇದೆ. ಡಿ.ಕೆ.ಶಿವಕುಮಾರ್​ ಪರ 70 ಶಾಸಕರು ಇದ್ದಾರೆ ಅಂತ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಪರ 65 ಶಾಸಕರು ಇದ್ದಾರೆ ಅಂತ ಕಾಂಗ್ರೆಸ್​ನವರೇ ಲೆಕ್ಕಾಚಾರ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದಿವಾಳಿ ಆಗಿದೆ. ಯೋಜನೆಗೆ ಹಣ ಕೊಡಲಾಗದೆ ಕಾಂಗ್ರೆಸ್ ಸರ್ಕಾರ ಪತನ ಆಗುತ್ತೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್​​ ಭವಿಷ್ಯ ನುಡಿದರು.

ಸಿಎಂ ಸ್ಥಾನದಿಂದ ಸಿದ್ದರಾಮಯ್ಯನ್ನ ಕೆಳಗಿಳಿಸಲು ಷಡ್ಯಂತ್ರ ನಡೆದಿದೆ: ಬಸನಗೌಡ ಪಾಟೀಲ್ ಯತ್ನಾಳ್​
ಶಾಸಕ ಬಸಗೌಡ ಪಾಟೀಲ್​ ಯತ್ನಾಳ್
ಅಶೋಕ ಯಡಳ್ಳಿ, ವಿಜಯಪುರ
| Updated By: ವಿವೇಕ ಬಿರಾದಾರ|

Updated on: Nov 01, 2023 | 12:26 PM

Share

ವಿಜಯಪುರ ನ.01: ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ (Siddaramaiah) ಅವರನ್ನು ಕೆಳಗಿಳಿಸಲು ಷಡ್ಯಂತ್ರ ನಡೆದಿದೆ. ಸಚಿವರಾದ ಜಮೀರ್ ಅಹ್ಮದ್,​ ಎಂಬಿ ಪಾಟೀಲ್ ಮತ್ತು ಕೆಎನ್​ ರಾಜಣ್ಣ, ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದಿದ್ದಾರೆ. ಆದರೆ ಸಿದ್ದರಾಮಯ್ಯ ಅವರನ್ನು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್​ (Congress) ಒಳಗಡೆಯೇ ಕುತಂತ್ರ ನಡೆದಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ​ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ದೆಹಲಿಯಲ್ಲಿ ಎಲ್ಲಿಲ್ಲಿ ಓಡಾಡುತ್ತಿದ್ದಾರೆ ಎಂಬುವುದರ ಬಗ್ಗೆ ಮಾಹಿತಿ ಇದೆ. ಡಿ.ಕೆ.ಶಿವಕುಮಾರ್​ ಪರ 70 ಶಾಸಕರು ಇದ್ದಾರೆ ಅಂತ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಪರ 65 ಶಾಸಕರು ಇದ್ದಾರೆ ಅಂತ ಕಾಂಗ್ರೆಸ್​ನವರೇ ಲೆಕ್ಕಾಚಾರ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದಿವಾಳಿ ಆಗಿದೆ. ಯುವನಿಧಿ ಯೋಜನೆ ಇನ್ನೂ ಜಾರಿ ಮಾಡಿಲ್ಲ. ಸರ್ಕಾರ ವೈಫಲ್ಯವಾಗಿದೆ. ಯೋಜನೆಗೆ ಹಣ ಕೊಡಲಾಗದೆ ಕಾಂಗ್ರೆಸ್ ಸರ್ಕಾರ ಪತನ ಆಗುತ್ತೆ ಎಂದು ಯತ್ನಾಳ್​​ ಭವಿಷ್ಯ ನುಡಿದರು.

ಇದನ್ನೂ ಓದಿ: ಸರ್ಕಾರ ಉರುಳಿಸುವ ಶಕ್ತಿಯಿರುವುದು ನಮ್ಮಣ್ಣಂಗೆ ಮಾತ್ರ: ರಮೇಶ್​ ಜಾರಕಿಹೊಳಿ ಕಾಲೆಳೆದ ಸತೀಶ್​ ಜಾರಕಿಹೊಳಿ

ಆಪರೇಷನ್ ಕಮಲ, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಫರ್​ ನೀಡಲಾಗುತ್ತಿದೆ ಎಂಬ ಆರೋಪದ ವಿಚಾರವಾಗಿ ಮಾತನಾಡಿದ ಅವರು ಆಫರ್​ ನೀಡಿದ ಬಗ್ಗೆ ವಿಡಿಯೋ, ಆಡಿಯೋ ಇದ್ದರೇ ಬಹಿರಂಗಪಡಸಲಿ. ಏನೇ ಆರೋಪ ಇದ್ದರೂ ಅದನ್ನು ಬಹಿರಂಗಪಡಿಸಬೇಕು. ಕಾಂಗ್ರೆಸ್​ನವರು ತಾವೇ ಜಗಳಾಡಿ ಹಾಳಾಗುವಾಗ ನಮ್ಮದೇನು ಕೆಲಸ ಎಂದರು.

ನಕಲಿ ವಿಡಿಯೋ ಸೃಷ್ಟಿಕರ್ತರೇ ಕಾಂಗ್ರೆಸ್​ನ ಮಹಾನಾಯಕರಿದ್ದಾರೆ. ನಕಲಿ ಸಿಡಿ ಮಾಡುವ ಕಂಪನಿ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇದೆ. ನಕಲಿ ಸಿಡಿ ಮಾಡುವ ಶಕ್ತಿ ಕಾಂಗ್ರೆಸ್​ ಬಂಡೆಗಲ್ಲಿಗಿದೆ. ಬಂಡೆಗಲ್ಲು ಮಾಡಿದ್ದರೆ ಬಹಿರಂಗಪಡಿಸಿ ತನಿಖಾ ಸಂಸ್ಥೆಗೆ ಕೊಡಲಿ ಎಂದು ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್​ ವಿರುದ್ಧ ಬಸನಗೌಡ ಪಾಟೀಲ್ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ