ಸಿಎಂ ಸ್ಥಾನದಿಂದ ಸಿದ್ದರಾಮಯ್ಯನ್ನ ಕೆಳಗಿಳಿಸಲು ಷಡ್ಯಂತ್ರ ನಡೆದಿದೆ: ಬಸನಗೌಡ ಪಾಟೀಲ್ ಯತ್ನಾಳ್​

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ದೆಹಲಿಯಲ್ಲಿ ಎಲ್ಲಿಲ್ಲಿ ಓಡಾಡುತ್ತಿದ್ದಾರೆ ಎಂಬುವುದರ ಬಗ್ಗೆ ಮಾಹಿತಿ ಇದೆ. ಡಿ.ಕೆ.ಶಿವಕುಮಾರ್​ ಪರ 70 ಶಾಸಕರು ಇದ್ದಾರೆ ಅಂತ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಪರ 65 ಶಾಸಕರು ಇದ್ದಾರೆ ಅಂತ ಕಾಂಗ್ರೆಸ್​ನವರೇ ಲೆಕ್ಕಾಚಾರ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದಿವಾಳಿ ಆಗಿದೆ. ಯೋಜನೆಗೆ ಹಣ ಕೊಡಲಾಗದೆ ಕಾಂಗ್ರೆಸ್ ಸರ್ಕಾರ ಪತನ ಆಗುತ್ತೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್​​ ಭವಿಷ್ಯ ನುಡಿದರು.

ಸಿಎಂ ಸ್ಥಾನದಿಂದ ಸಿದ್ದರಾಮಯ್ಯನ್ನ ಕೆಳಗಿಳಿಸಲು ಷಡ್ಯಂತ್ರ ನಡೆದಿದೆ: ಬಸನಗೌಡ ಪಾಟೀಲ್ ಯತ್ನಾಳ್​
ಶಾಸಕ ಬಸಗೌಡ ಪಾಟೀಲ್​ ಯತ್ನಾಳ್
Edited By: ವಿವೇಕ ಬಿರಾದಾರ

Updated on: Nov 01, 2023 | 12:26 PM

ವಿಜಯಪುರ ನ.01: ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ (Siddaramaiah) ಅವರನ್ನು ಕೆಳಗಿಳಿಸಲು ಷಡ್ಯಂತ್ರ ನಡೆದಿದೆ. ಸಚಿವರಾದ ಜಮೀರ್ ಅಹ್ಮದ್,​ ಎಂಬಿ ಪಾಟೀಲ್ ಮತ್ತು ಕೆಎನ್​ ರಾಜಣ್ಣ, ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದಿದ್ದಾರೆ. ಆದರೆ ಸಿದ್ದರಾಮಯ್ಯ ಅವರನ್ನು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್​ (Congress) ಒಳಗಡೆಯೇ ಕುತಂತ್ರ ನಡೆದಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ​ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ದೆಹಲಿಯಲ್ಲಿ ಎಲ್ಲಿಲ್ಲಿ ಓಡಾಡುತ್ತಿದ್ದಾರೆ ಎಂಬುವುದರ ಬಗ್ಗೆ ಮಾಹಿತಿ ಇದೆ. ಡಿ.ಕೆ.ಶಿವಕುಮಾರ್​ ಪರ 70 ಶಾಸಕರು ಇದ್ದಾರೆ ಅಂತ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಪರ 65 ಶಾಸಕರು ಇದ್ದಾರೆ ಅಂತ ಕಾಂಗ್ರೆಸ್​ನವರೇ ಲೆಕ್ಕಾಚಾರ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದಿವಾಳಿ ಆಗಿದೆ. ಯುವನಿಧಿ ಯೋಜನೆ ಇನ್ನೂ ಜಾರಿ ಮಾಡಿಲ್ಲ. ಸರ್ಕಾರ ವೈಫಲ್ಯವಾಗಿದೆ. ಯೋಜನೆಗೆ ಹಣ ಕೊಡಲಾಗದೆ ಕಾಂಗ್ರೆಸ್ ಸರ್ಕಾರ ಪತನ ಆಗುತ್ತೆ ಎಂದು ಯತ್ನಾಳ್​​ ಭವಿಷ್ಯ ನುಡಿದರು.

ಇದನ್ನೂ ಓದಿ: ಸರ್ಕಾರ ಉರುಳಿಸುವ ಶಕ್ತಿಯಿರುವುದು ನಮ್ಮಣ್ಣಂಗೆ ಮಾತ್ರ: ರಮೇಶ್​ ಜಾರಕಿಹೊಳಿ ಕಾಲೆಳೆದ ಸತೀಶ್​ ಜಾರಕಿಹೊಳಿ

ಆಪರೇಷನ್ ಕಮಲ, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಫರ್​ ನೀಡಲಾಗುತ್ತಿದೆ ಎಂಬ ಆರೋಪದ ವಿಚಾರವಾಗಿ ಮಾತನಾಡಿದ ಅವರು ಆಫರ್​ ನೀಡಿದ ಬಗ್ಗೆ ವಿಡಿಯೋ, ಆಡಿಯೋ ಇದ್ದರೇ ಬಹಿರಂಗಪಡಸಲಿ. ಏನೇ ಆರೋಪ ಇದ್ದರೂ ಅದನ್ನು ಬಹಿರಂಗಪಡಿಸಬೇಕು. ಕಾಂಗ್ರೆಸ್​ನವರು ತಾವೇ ಜಗಳಾಡಿ ಹಾಳಾಗುವಾಗ ನಮ್ಮದೇನು ಕೆಲಸ ಎಂದರು.

ನಕಲಿ ವಿಡಿಯೋ ಸೃಷ್ಟಿಕರ್ತರೇ ಕಾಂಗ್ರೆಸ್​ನ ಮಹಾನಾಯಕರಿದ್ದಾರೆ. ನಕಲಿ ಸಿಡಿ ಮಾಡುವ ಕಂಪನಿ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇದೆ. ನಕಲಿ ಸಿಡಿ ಮಾಡುವ ಶಕ್ತಿ ಕಾಂಗ್ರೆಸ್​ ಬಂಡೆಗಲ್ಲಿಗಿದೆ. ಬಂಡೆಗಲ್ಲು ಮಾಡಿದ್ದರೆ ಬಹಿರಂಗಪಡಿಸಿ ತನಿಖಾ ಸಂಸ್ಥೆಗೆ ಕೊಡಲಿ ಎಂದು ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್​ ವಿರುದ್ಧ ಬಸನಗೌಡ ಪಾಟೀಲ್ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us