ಸಿಎಂ ಸ್ಥಾನದಿಂದ ಸಿದ್ದರಾಮಯ್ಯನ್ನ ಕೆಳಗಿಳಿಸಲು ಷಡ್ಯಂತ್ರ ನಡೆದಿದೆ: ಬಸನಗೌಡ ಪಾಟೀಲ್ ಯತ್ನಾಳ್​

| Updated By: ವಿವೇಕ ಬಿರಾದಾರ

Updated on: Nov 01, 2023 | 12:26 PM

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ದೆಹಲಿಯಲ್ಲಿ ಎಲ್ಲಿಲ್ಲಿ ಓಡಾಡುತ್ತಿದ್ದಾರೆ ಎಂಬುವುದರ ಬಗ್ಗೆ ಮಾಹಿತಿ ಇದೆ. ಡಿ.ಕೆ.ಶಿವಕುಮಾರ್​ ಪರ 70 ಶಾಸಕರು ಇದ್ದಾರೆ ಅಂತ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಪರ 65 ಶಾಸಕರು ಇದ್ದಾರೆ ಅಂತ ಕಾಂಗ್ರೆಸ್​ನವರೇ ಲೆಕ್ಕಾಚಾರ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದಿವಾಳಿ ಆಗಿದೆ. ಯೋಜನೆಗೆ ಹಣ ಕೊಡಲಾಗದೆ ಕಾಂಗ್ರೆಸ್ ಸರ್ಕಾರ ಪತನ ಆಗುತ್ತೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್​​ ಭವಿಷ್ಯ ನುಡಿದರು.

ಸಿಎಂ ಸ್ಥಾನದಿಂದ ಸಿದ್ದರಾಮಯ್ಯನ್ನ ಕೆಳಗಿಳಿಸಲು ಷಡ್ಯಂತ್ರ ನಡೆದಿದೆ: ಬಸನಗೌಡ ಪಾಟೀಲ್ ಯತ್ನಾಳ್​
ಶಾಸಕ ಬಸಗೌಡ ಪಾಟೀಲ್​ ಯತ್ನಾಳ್
Follow us on

ವಿಜಯಪುರ ನ.01: ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ (Siddaramaiah) ಅವರನ್ನು ಕೆಳಗಿಳಿಸಲು ಷಡ್ಯಂತ್ರ ನಡೆದಿದೆ. ಸಚಿವರಾದ ಜಮೀರ್ ಅಹ್ಮದ್,​ ಎಂಬಿ ಪಾಟೀಲ್ ಮತ್ತು ಕೆಎನ್​ ರಾಜಣ್ಣ, ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದಿದ್ದಾರೆ. ಆದರೆ ಸಿದ್ದರಾಮಯ್ಯ ಅವರನ್ನು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್​ (Congress) ಒಳಗಡೆಯೇ ಕುತಂತ್ರ ನಡೆದಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ​ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ದೆಹಲಿಯಲ್ಲಿ ಎಲ್ಲಿಲ್ಲಿ ಓಡಾಡುತ್ತಿದ್ದಾರೆ ಎಂಬುವುದರ ಬಗ್ಗೆ ಮಾಹಿತಿ ಇದೆ. ಡಿ.ಕೆ.ಶಿವಕುಮಾರ್​ ಪರ 70 ಶಾಸಕರು ಇದ್ದಾರೆ ಅಂತ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಪರ 65 ಶಾಸಕರು ಇದ್ದಾರೆ ಅಂತ ಕಾಂಗ್ರೆಸ್​ನವರೇ ಲೆಕ್ಕಾಚಾರ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದಿವಾಳಿ ಆಗಿದೆ. ಯುವನಿಧಿ ಯೋಜನೆ ಇನ್ನೂ ಜಾರಿ ಮಾಡಿಲ್ಲ. ಸರ್ಕಾರ ವೈಫಲ್ಯವಾಗಿದೆ. ಯೋಜನೆಗೆ ಹಣ ಕೊಡಲಾಗದೆ ಕಾಂಗ್ರೆಸ್ ಸರ್ಕಾರ ಪತನ ಆಗುತ್ತೆ ಎಂದು ಯತ್ನಾಳ್​​ ಭವಿಷ್ಯ ನುಡಿದರು.

ಇದನ್ನೂ ಓದಿ: ಸರ್ಕಾರ ಉರುಳಿಸುವ ಶಕ್ತಿಯಿರುವುದು ನಮ್ಮಣ್ಣಂಗೆ ಮಾತ್ರ: ರಮೇಶ್​ ಜಾರಕಿಹೊಳಿ ಕಾಲೆಳೆದ ಸತೀಶ್​ ಜಾರಕಿಹೊಳಿ

ಆಪರೇಷನ್ ಕಮಲ, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಫರ್​ ನೀಡಲಾಗುತ್ತಿದೆ ಎಂಬ ಆರೋಪದ ವಿಚಾರವಾಗಿ ಮಾತನಾಡಿದ ಅವರು ಆಫರ್​ ನೀಡಿದ ಬಗ್ಗೆ ವಿಡಿಯೋ, ಆಡಿಯೋ ಇದ್ದರೇ ಬಹಿರಂಗಪಡಸಲಿ. ಏನೇ ಆರೋಪ ಇದ್ದರೂ ಅದನ್ನು ಬಹಿರಂಗಪಡಿಸಬೇಕು. ಕಾಂಗ್ರೆಸ್​ನವರು ತಾವೇ ಜಗಳಾಡಿ ಹಾಳಾಗುವಾಗ ನಮ್ಮದೇನು ಕೆಲಸ ಎಂದರು.

ನಕಲಿ ವಿಡಿಯೋ ಸೃಷ್ಟಿಕರ್ತರೇ ಕಾಂಗ್ರೆಸ್​ನ ಮಹಾನಾಯಕರಿದ್ದಾರೆ. ನಕಲಿ ಸಿಡಿ ಮಾಡುವ ಕಂಪನಿ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇದೆ. ನಕಲಿ ಸಿಡಿ ಮಾಡುವ ಶಕ್ತಿ ಕಾಂಗ್ರೆಸ್​ ಬಂಡೆಗಲ್ಲಿಗಿದೆ. ಬಂಡೆಗಲ್ಲು ಮಾಡಿದ್ದರೆ ಬಹಿರಂಗಪಡಿಸಿ ತನಿಖಾ ಸಂಸ್ಥೆಗೆ ಕೊಡಲಿ ಎಂದು ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್​ ವಿರುದ್ಧ ಬಸನಗೌಡ ಪಾಟೀಲ್ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ