AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನ ಕೆಣಕಿ ಬಹುದೊಡ್ಡ ತಪ್ಪು ಮಾಡಿದೆ: ಬಿಜೆಪಿ ವಿರುದ್ಧವೇ ಉರಿಗೌಡ-ನಂಜೇಗೌಡ ಬಾಣ ಬಿಟ್ಟ ಕುಮಾರಸ್ವಾಮಿ

ಕಪೋಲಕಲ್ಪಿತ ಪಾತ್ರ ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದು ಬೆಳೆಯಲು ತನು ಮನ ಧನವನ್ನೆಲ್ಲ ಅರ್ಪಿಸುವುದೇ ಬಿಜೆಪಿ ಎಂದು ಮಾಜಿ ಸಿಎಂ ಹೆಚ್​​.ಡಿ.ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.

ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನ ಕೆಣಕಿ ಬಹುದೊಡ್ಡ ತಪ್ಪು ಮಾಡಿದೆ: ಬಿಜೆಪಿ ವಿರುದ್ಧವೇ ಉರಿಗೌಡ-ನಂಜೇಗೌಡ ಬಾಣ ಬಿಟ್ಟ ಕುಮಾರಸ್ವಾಮಿ
ಹೆಚ್​.ಡಿ ಕುಮಾರಸ್ವಾಮಿ
ಕಿರಣ್ ಹನುಮಂತ್​ ಮಾದಾರ್
|

Updated on:Mar 14, 2023 | 11:47 AM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುವ ಮಾರ್ಗದಲ್ಲಿ ಉರಿಗೌಡ ಹಾಗೂ ದೊಡ್ಡ ಮಂಜೇಗೌಡ ಮಹಾದ್ವಾರ ಎಂದು ಕಟೌಟ್​ ಹಾಕಲಾಗಿತ್ತು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಮಂಡ್ಯದಲ್ಲೇ ಇದಕ್ಕೆ ತೀವ್ರ ಆಕ್ರೋಶ, ಟೀಕೆಗಳು ವ್ಯಕ್ತವಾಗಿದ್ದವು. ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನಲೆ ವಿವಾದಿತ ಬ್ಯಾನರ್​​ ದ್ವಾರವನ್ನು ರಾತ್ರೋ ರಾತ್ರಿ ತೆರವುಗೊಳಿಸಲಾಗಿತ್ತು. ಈ ಹಿನ್ನಲೆ ಇದೀಗ ‘ಕಪೋಲಕಲ್ಪಿತ ಪಾತ್ರ ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದು ಬೆಳೆಯಲು ತನು ಮನ ಧನವನ್ನೆಲ್ಲ ಅರ್ಪಿಸುವುದೇ ಬಿಜೆಪಿ ಎಂದು ಮಾಜಿ ಸಿಎಂ ಹೆಚ್​​.ಡಿ.ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.

ಇದನ್ನೂ ಓದಿ:ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಮಂಡ್ಯದಲ್ಲಿ ಮೋದಿ ಸ್ವಾಗತಕ್ಕೆ ಹಾಕಲಾಗಿದ್ದ ಉರಿಗೌಡ-ದೊಡ್ಡನಂಜೇಗೌಡ ಕಟೌಟ್​ ತೆರವು

ಮಂಡ್ಯದಲ್ಲಿ ಉರಿಗೌಡ, ದೊಡ್ಡ ನಂಜೇಗೌಡ ಬ್ಯಾನರ್ ಅಳವಡಿಕೆ ವಿಚಾರವಾಗಿ ಬಿಜೆಪಿ ವಿರುದ್ಧ ಮಾಜಿ ಸಿಎಂ ಹೆಚ್​​.ಡಿ.ಕುಮಾರಸ್ವಾಮಿ ಟ್ವೀಟ್​ ಮಾಡಿದ್ದು, ‘ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಸುಳ್ಳಿನ ಕಥೆ ಸೃಷ್ಟಿಸಿ, ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರವನ್ನು ಬಿಜೆಪಿ ನಡೆಸಿದೆ. ಟಿಪ್ಪುವನ್ನು ಕೊಂದವರೆಂದು ಉರಿಗೌಡ, ನಂಜೇಗೌಡ ಹೆಸರು ಸೃಷ್ಟಿ ಮಾಡಲಾಗಿದೆ. ಒಕ್ಕಲಿಗ ಕಾಲ್ಪನಿಕ ಹೆಸರು ಸೃಷ್ಟಿಸಿ ಮಹಾದ್ವಾರಕ್ಕೆ ಇಟ್ಟಿದ್ದು ಅಪಮಾನ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ ಎಂದಿದ್ದಾರೆ.

ಜೊತೆಗೆ ಮಹಾದ್ವಾರದಲ್ಲಿ ಇದ್ದ ಬಾಲಗಂಗಾಧರನಾಥಶ್ರೀ ಹೆಸರು ಮುಚ್ಚಿಟ್ಟು. ಆ ಜಾಗದಲ್ಲಿ ಕಾಲ್ಪನಿಕ ಪಾತ್ರಗಳ ಹೆಸರು ಹಾಕಿದ ದುರುದ್ದೇಶವೇನು? ಇದು ಬಾಲಗಂಗಾಧರನಾಥ ಸ್ವಾಮೀಜಿಗೆ ಮಾಡಿದ ಅಪಮಾನ ಎಂದಿದ್ದಾರೆ. ದ್ವೇಷದ ನಡೆಯಿಂದ ಒಕ್ಕಲಿಗರ ಮನ ಗೆಲ್ಲಬಹುದೆಂಬ ಭ್ರಮೆಯಲ್ಲಿದೆ. ಇಂತಹ ಲಜ್ಜಗೇಡಿ ನಡೆ ಬಿಜೆಪಿ ಸರ್ಕಾರದ ನೀಚ ರಾಜಕಾರಣಕ್ಕೆ ಸಾಕ್ಷಿ. ಮೋದಿ ಮೆಚ್ಚಿಸಲು ಉರಿಗೌಡ, ನಂಜೇಗೌಡ ಹೆಸರು ಸೃಷ್ಟಿಸಲಾಯ್ತಾ? ಆ ಷಡ್ಯಂತ್ರಕ್ಕೆ ರಾಜ್ಯ ಸರ್ಕಾರದ ಒಪ್ಪಿಗೆಯೂ ಇತ್ತಾ? ಇಲ್ಲವೇ? ಇಂಥ ಹೊಣೆಗೇಡಿ ಕೃತ್ಯದ ಬಗ್ಗೆ ಪ್ರಧಾನಿ ಕಚೇರಿಗೂ ಮಾಹಿತಿ ಇತ್ತಾ? ಸುಳ್ಳಿಗೆ ಆಯಸ್ಸು ಕಡಿಮೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:44 am, Tue, 14 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ