AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಥವುಗಳಿಗೆಲ್ಲ ಪ್ರತಿಕ್ರಿಯಿಸುವ ಸಮಯ ಇದಲ್ಲ: ಮಮತಾ ಬ್ಯಾನರ್ಜಿ ಹೇಳಿಕೆಗೆ ಮಾರ್ಗರೇಟ್ ಆಳ್ವ ಪ್ರತಿಕ್ರಿಯೆ

ಇದು ಆರೋಪ, ಪ್ರತ್ಯಾರೋಪ, ಅಹಂಕಾರ ಅಥವಾ ಸಿಟ್ಟಿಗೆ ಪ್ರತಿಕ್ರಿಯಿಸುವ ಸಮಯವಲ್ಲ. ಇದು ಧೈರ್ಯ, ನಾಯಕತ್ವ ಮತ್ತು ಐಕ್ಯತೆಯ ಹೊತ್ತು. ಧೈರ್ಯದ ದ್ಯೋತಕವಾಗಿರುವ ಮಮತಾ ಬ್ಯಾನರ್ಜಿ ವಿಪಕ್ಷಗಳ ಜತೆ ನಿಲ್ಲುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದ ಮಾರ್ಗರೇಟ್ ಆಳ್ವ.

ಇಂಥವುಗಳಿಗೆಲ್ಲ ಪ್ರತಿಕ್ರಿಯಿಸುವ ಸಮಯ ಇದಲ್ಲ: ಮಮತಾ ಬ್ಯಾನರ್ಜಿ ಹೇಳಿಕೆಗೆ ಮಾರ್ಗರೇಟ್ ಆಳ್ವ ಪ್ರತಿಕ್ರಿಯೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 22, 2022 | 5:56 PM

Share

ದೆಹಲಿ: ಉಪ ರಾಷ್ಟ್ರಪತಿ ಚುನಾವಣೆಯ (Vice Presidential election) ಮತದಾನದಲ್ಲಿ ತಾವು ಭಾಗವಹಿಸುವುದಿಲ್ಲ ಎಂದು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಗುರುವಾರ ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ಉಪ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುತ್ತಿರುವ ವಿಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವ(Margaret Alva), ಇಂಥಾ ವಿಷಯಗಳಿಗೆ, ಅಹಂಕಾರ ಅಥವಾ ಸಿಟ್ಟಿಗೆ ಪ್ರತಿಕ್ರಿಸುವ ಸಮಯ ಇದಲ್ಲ ಎಂದು ಹೇಳಿದ್ದಾರೆ. ಉಪರಾಷ್ಟ್ರಪತಿ ಚುನಾವಣಾ ಮತದಾನದಲ್ಲಿ ಭಾಗವಹಿಸುವುದಿಲ್ಲ ಎಂಬ ಟಿಎಂಸಿಯ (TMC) ನಿರ್ಧಾರ ಬೇಸರದ ಸಂಗತಿ. ಇದು ಆರೋಪ, ಪ್ರತ್ಯಾರೋಪ, ಅಹಂಕಾರ ಅಥವಾ ಸಿಟ್ಟಿಗೆ ಪ್ರತಿಕ್ರಿಯಿಸುವ ಸಮಯವಲ್ಲ. ಇದು ಧೈರ್ಯ, ನಾಯಕತ್ವ ಮತ್ತು ಐಕ್ಯತೆಯ ಹೊತ್ತು. ಧೈರ್ಯದ ದ್ಯೋತಕವಾಗಿರುವ ಮಮತಾ ಬ್ಯಾನರ್ಜಿ ವಿಪಕ್ಷಗಳ ಜತೆ ನಿಲ್ಲುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಆಳ್ವ ಟ್ವೀಟ್ ಮಾಡಿದ್ದಾರೆ.

ಆಡಳಿತಾರೂಢ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಂಗಾಳದ ಮಾಜಿ ಗವರ್ನರ್ ಜಗದೀಪ್ ಧನ್ ಖರ್ ಕಣದಲ್ಲಿದ್ದಾರೆ, ಮಮತಾ ಬ್ಯಾನರ್ಜಿ ಇತ್ತೀಚೆಗೆ ಧನ್​​ಖರ್ ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಅವರನ್ನು ಭೇಟಿಯಾಗಿದ್ದರು. ವಿಪಕ್ಷಗಳಾಗ ಶಿವಸೇನಾ ಮತ್ತು ಜೆಎಂಎಂ ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಿದ ಬೆನ್ನಲ್ಲೇ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷ ಅಭ್ಯರ್ಥಿಗೆ ತಮ್ಮ ಬೆಂಬಲವಿಲ್ಲ ಎಂಬ ಧಾಟಿಯಲ್ಲಿ ಟಿಎಂಸಿ ಮತದಾನದಿಂದ ದೂರವಿರಲು ನಿರ್ಧರಿಸಿದೆ.

Published On - 5:40 pm, Fri, 22 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ