AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ; ಈ ಬಾರಿಯೂ ಅದೃಷ್ಟ ಕಟ್ಟಡದಲ್ಲಿ ಚುನಾವಣಾ ಕಚೇರಿ ಉದ್ಘಾಟಿಸಿದ ದಕ್ಷಿಣ ಕನ್ನಡ ಬಿಜೆಪಿ

ಬಿಜೆಪಿ ಹಾಗೂ ಹಿಂದುತ್ವದ ಭದ್ರಕೋಟೆ ಎನಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮತ್ತೆ ಅದೃಷ್ಟ ಕಡ್ಡದ ಬಾಗಿಲು ತೆರೆದಿದೆ. ಲೋಕಸಭಾ ಚುನಾವಣೆಗೆ ಬಿಜೆಪಿಯ ಚುನಾವಣಾ ಕಚೇರಿಯನ್ನು ಅದೃಷ್ಟದ ಕಟ್ಟಡದಲ್ಲಿ ಉದ್ಘಾಟನೆ ಮಾಡಲಾಗಿದೆ. ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ಬಳಿ‌ ಇರುವ ಚುನಾವಣಾ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಪ್ರಮುಖರು ಭಾಗಿಯಾದರು.

ಲೋಕಸಭೆ ಚುನಾವಣೆ; ಈ ಬಾರಿಯೂ ಅದೃಷ್ಟ ಕಟ್ಟಡದಲ್ಲಿ ಚುನಾವಣಾ ಕಚೇರಿ ಉದ್ಘಾಟಿಸಿದ ದಕ್ಷಿಣ ಕನ್ನಡ ಬಿಜೆಪಿ
ಈ ಬಾರಿಯೂ ಅದೃಷ್ಟದ ಕಟ್ಟಡದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ
ಅಶೋಕ್​ ಪೂಜಾರಿ
| Edited By: Rakesh Nayak Manchi|

Updated on:Feb 15, 2024 | 2:30 PM

Share

ಮಂಗಳೂರು, ಫೆ.15: ಬಿಜೆಪಿ ಹಾಗೂ ಹಿಂದುತ್ವದ ಭದ್ರಕೋಟೆ ಎನಿಸಿಕೊಂಡಿರುವ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಬಿಜೆಪಿ ಮತ್ತೆ ಅದೃಷ್ಟ ಕಟ್ಟಡದ ಬಾಗಿಲು ತೆರೆದಿದೆ. ಲೋಕಸಭಾ ಚುನಾವಣೆಗಾಗಿ (Lok Sabha Elections) ಮಂಗಳೂರು (Mangaluru) ನಗರದ ಬಂಟ್ಸ್ ಹಾಸ್ಟೆಲ್ ಬಳಿ‌ ಇರುವ ಬಿಜೆಪಿಯ ಚುನಾವಣಾ ಕಚೇರಿಯನ್ನು ಉದ್ಘಾಟಿಸಲಾಗಿದ್ದು, ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಸೇರಿದಂತೆ ಬಿಜೆಪಿಯ ಪ್ರಮುಖರು ಭಾಗಿಯಾದರು.

ಗಣಪತಿ ಹೋಮ ನಡೆಸಿ ಧಾರ್ಮಿಕ ವಿಧಿ ವಿಧಾನ ಸಂಪನ್ನಗೊಳಿಸಲಾಯಿತು. ಬಳಿಕ ಮಾಡಿದ ನಳಿನ್ ಕುಮಾರ್ ಕಟೀಲ್ ಅವರು ದೀಪ ಬೆಳಗಿಸುವ ಮೂಲಕ ಚುನಾವಣಾ ಕಚೇರಿ ಉದ್ಘಾಟನೆ ಮಾಡಿದರು. ನಂತರ ಮಾತನಾಡಿದ ಅವರು, ಗಣಪತಿ ಪೂಜೆಯ ಮೂಲಕ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇವೆ. ದೇಶದಲ್ಲಿ 400 ಕ್ಕೂ ಹೆಚ್ಚು ಕ್ಷೇತ್ರ ಗೆದ್ದು ಬಿಜೆಪಿ ಗೆಲುವು ಸಾಧಿಸಬೇಕು ಎಂದರು.

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಮ್ಮೆ ಲೋಕಸಭಾ ಕ್ಷೇತ್ರ ಬಿಜೆಪಿಯ ಗೆಲುವಾಗಬೇಕು. 2004 ರಿಂದ ಈ ಕಾರ್ಯಾಲಯ ಬಿಜೆಪಿಯ ಗೆಲುವಿನ ಕಾರ್ಯಾಲಯವಾಗಿದೆ. ಯಾವ ಯಾವ ಚುನಾವಣೆಯಲ್ಲಿ ಈ ಕಾರ್ಯಾಲಯ ಬಳಸಿದ್ದೇವೊ ಆ ಎಲ್ಲಾ ಚುನಾವಣೆಯಲ್ಲಿ ನಮಗೆ ಗೆಲುವಾಗಿದೆ ಎಂದರು.

ಇದನ್ನೂ ಓದಿ: ಶಿಕ್ಷಕಿಯಿಂದ ಹಿಂದೂ ಧರ್ಮ ಅವಹೇಳನ ಪ್ರಕರಣ; ತಮ್ಮ ವಿರುದ್ಧ ಯಾಕೆ ಎಫ್ಐಆರ್ ಎಂದ ಬಿಜೆಪಿ ಶಾಸಕರು

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಹಿನ್ನಡೆಯಾದರೂ ನಮ್ಮ ಜಿಲ್ಲೆಯಲ್ಲಿ ಈ ಕಾರ್ಯಾಲಯ ಮೂಲಕ‌ ಕಾರ್ಯ ಮಾಡಿ ಗೆಲುವು ಸಾಧಿಸಿದ್ದೇವೆ. ಮಹಾನಗರ ಪಾಲಿಕೆಗೆ ಈ ಕಾರ್ಯಾಲಯ ಬಳಕೆ ಮಾಡಿ ಚುನಾವಣೆ ಗೆದ್ದಿದ್ದೇವೆ. ಹಿಂದಿನ ಮೂರು ಲೋಕಸಭಾ ಚುನಾವಣೆಗೆ ಈ ಕಾರ್ಯಾಲಯ ಬಳಕೆ ಮಾಡಿ ಗೆದ್ದಿದ್ದೇವೆ ಎಂದರು.

ಗೆಲುವಿನ ಕಾರ್ಯಾಲಯವನ್ನು ಈ ಬಾರಿ ಮತ್ತೆ ಉದ್ಘಾಟನೆ ಮಾಡಿದ್ದೇವೆ. ಈ ಬಾರಿ ಮತ್ತೆ ಅಭೂತಪೂರ್ವವಾದ ಗೆಲುವು ಬಿಜೆಪಿಗೆ ಆಗುತ್ತದೆ. ಇಲ್ಲಿ ಬಿಜೆಪಿ ಮತ್ತೆ ಗಟ್ಟಿಯಾದ ಸ್ಥಾನ ಉಳಿಸಿಕೊಳ್ಳುತ್ತದೆ. ಕಳೆದ ಸಾರಿ 2 ಲಕ್ಷದ 73 ಸಾವಿರ ಮತಗಳ ಅಂತರದಿಂದ ಗೆದ್ದಿದೆ. ಈ ಬಾರಿ ಮೂರೂವರೆ ಲಕ್ಷಕ್ಕಿಂತ ಹೆಚ್ಚು ಬಹುಮತದಿಂದ ಈ ಸ್ಥಾನ ಉಳಿಸಿಕೊಳ್ಳುವ ವಿಶ್ವಾಸವಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:29 pm, Thu, 15 February 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ