ಸಚಿವ ಸ್ಥಾನ ಬೇಕೆನ್ನುವವರು ರಾಜೀನಾಮೆ ಕೊಟ್ಟು ಮನೆಯಲ್ಲಿರಲಿ: ಕಾಂಗ್ರೆಸ್​ ಶಾಸಕ ಕೊತ್ತೂರು ಮಂಜುನಾಥ್

ಶಾಸಕ ರವಿ ಗಣಿಗಗೆ ಬಿಜೆಪಿ ಆಫರ್ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ನನ್ನನ್ನೂ ಕೊಂಡುಕೊಳ್ಳುವ ಶಕ್ತಿ ಕರ್ನಾಟಕದಲ್ಲಿ ಯಾರಿಗೂ ಇಲ್ಲ. ಈ ವಿಚಾರವಾಗಿ ನನ್ನ ಬಳಿ ಯಾರಾದರೂ ಮಾತನಾಡಿದರೆ ಅವರ ಬೀಜ ಕೊಯ್ಯುವೆ. ಕೋಲಾರಮ್ಮ ಆಣೆಗೂ ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ ಎಂದು ಕಾಂಗ್ರೆಸ್​ ಶಾಸಕ ಕೊತ್ತೂರು ಮಂಜುನಾಥ್​ ಹೇಳಿದರು.

ಸಚಿವ ಸ್ಥಾನ ಬೇಕೆನ್ನುವವರು ರಾಜೀನಾಮೆ ಕೊಟ್ಟು ಮನೆಯಲ್ಲಿರಲಿ: ಕಾಂಗ್ರೆಸ್​ ಶಾಸಕ ಕೊತ್ತೂರು ಮಂಜುನಾಥ್
ಕಾಂಗ್ರೆಸ್​ ಶಾಸಕ ಕೊತ್ತೂರು ಮಂಜುನಾಥ್
Follow us
| Updated By: ವಿವೇಕ ಬಿರಾದಾರ

Updated on: Nov 01, 2023 | 1:46 PM

ಕೋಲಾರ ನ.01: ಕಾಂಗ್ರೆಸ್​​ನಲ್ಲಿ (Congress) ಸಚಿವ ಸ್ಥಾನಕ್ಕೆ ಲಾಭಿ ಹೆಚ್ಚಿದೆ. ಸಚಿವ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ವಿಚಾರವಾಗಿ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ (Kotturu Manjunath) ಸ್ವಪಕ್ಷದ ಶಾಸಕರಿಗೆ ತಿರುಗೇಟು ನೀಡಿದ್ದಾರೆ. ಸಚಿವ ಸ್ಥಾನ ಬೇಕೆನ್ನುವವರು ರಾಜೀನಾಮೆ ಕೊಟ್ಟು ಮನೆಯಲ್ಲಿರಲಿ. ಜನರು ನಮ್ಮನ್ನು ಗೆಲ್ಲಿಸಿರುವುದು ಅವರ ಸೇವೆ ಮಾಡುವುದಕ್ಕಾಗಿ ಎಂದು ಗರಂ ಆಗಿದ್ದಾರೆ.

ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾವು 136 ಶಾಸಕರಿದ್ದೇವೆ, ನಮ್ಮ ಸರ್ಕಾರ ಬೀಳಿಸಲು ಆಗುವುದಿಲ್ಲ. ಅಂತಹ ಕನಸು ಯಾರೂ ಕಾಣುವುದು ಬೇಡ, ಸ್ಟ್ರಾಂಗ್ ಆಗಿ ಇದ್ದೇವೆ. ಆಪರೇಷನ್ ಕಮಲನೂ ಇಲ್ಲ, ಮರನೂ ಇಲ್ಲ, ಗಿಡವೂ ಇಲ್ಲ. ಸರ್ಕಾರ ಪತನಗೊಳಿಸುವ ಹೇಳಿಕೆ ಕೇವಲ ಊಹಾಪೋಹ ಅಷ್ಟೇ ಎಂದರು.

ಇದನ್ನೂ ಓದಿ: ಹುಬ್ಬಳ್ಳಿ- ಧಾರವಾಡ ಕಾಂಗ್ರೆಸ್​ನಲ್ಲಿ ಭಿನ್ನಮತ ಸ್ಫೋಟ, ಶಾಸಕ ಖಡಕ್ ಎಚ್ಚರಿಕೆ

ನನ್ನ ಬಳಿ ಯಾರಾದರೂ ಮಾತನಾಡಿದರೆ ಅವರ ಬೀಜ ಕೊಯ್ಯುವೆ

ಶಾಸಕ ರವಿ ಗಣಿಗಗೆ ಬಿಜೆಪಿ ಆಫರ್ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ನನ್ನನ್ನೂ ಕೊಂಡುಕೊಳ್ಳುವ ಶಕ್ತಿ ಕರ್ನಾಟಕದಲ್ಲಿ ಯಾರಿಗೂ ಇಲ್ಲ. ಈ ವಿಚಾರವಾಗಿ ನನ್ನ ಬಳಿ ಯಾರಾದರೂ ಮಾತನಾಡಿದರೆ ಅವರ ಬೀಜ ಕೊಯ್ಯುವೆ. ಕೋಲಾರಮ್ಮ ಆಣೆಗೂ ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ ಎಂದರು.

ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ. ನಮ್ಮ ಪಕ್ಷದವರು ಯಾರೂ ಸಿಎಂ ಬದಲಾವಣೆ ವಿಚಾರ ಎತ್ತುತ್ತಿಲ್ಲ. ಮೂವರಿಗೆ‌ ಮಾತ್ರ ಸಿಎಂ ಬದಲಾವಣೆ ಮಾಡುವ ಶಕ್ತಿ ಇರುವುದು. ಅದು ಸಂಸದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್​ ಅವರಿಗೆ ಮಾತ್ರ ಸಿಎಂ ಬದಲಾವಣೆ ಮಾಡುವ ಶಕ್ತಿ ಇದೆ.ಆದರೆ ಸಿಎಂ ಬದಲಾವಣೆ ಅನ್ನೋದು ಸುಳ್ಳು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು