AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Poll 2023: ಕಾಂಗ್ರೆಸ್​ಗೆ ಬಿಗ್ ಶಾಕ್ ಕೊಟ್ಟ ಹಾವೇರಿ ಕೈ ಟಿಕೆಟ್​ ಆಕಾಂಕ್ಷಿ ಎಂ.ಎಂ.ಹಿರೆಮಠ

ಹಾವೇರಿ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿಯಾಗಿದ್ದ ಎಂ.ಎಂ.ಹಿರೆಮಠ, ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್​ಗೆ ಬಿಗ್ ಶಾಕ್ ಕೊಟ್ಟಿದ್ದಾರೆ.

Karnataka Poll 2023: ಕಾಂಗ್ರೆಸ್​ಗೆ ಬಿಗ್ ಶಾಕ್ ಕೊಟ್ಟ ಹಾವೇರಿ ಕೈ ಟಿಕೆಟ್​ ಆಕಾಂಕ್ಷಿ ಎಂ.ಎಂ.ಹಿರೆಮಠ
ಎಂ.ಎಂ. ಹಿರೆಮಠ
ರಮೇಶ್ ಬಿ. ಜವಳಗೇರಾ
|

Updated on: Mar 28, 2023 | 12:14 PM

Share

ಮುಖ್ಯಾಂಶಗಳು

  • ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಎಂ.ಎಂ.ಹಿರೇಮಠ ರಾಜೀನಾಮೆ
  • ಹಾವೇರಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದ ಎಂ.ಎಂ.ಹಿರೇಮಠ
  • ರುದ್ರಪ್ಪ ಲಮಾಣಿಗೆ ಟಿಕೆಟ್​ ನೀಡಲು ವಿರೋಧ ವ್ಯಕ್ತಪಡಿಸಿದ್ದ ಹಿರೇಮಠ

ಹಾವೇರಿ:  ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್, ಜೆಡಿಎಸ್​​ ಹಾಗೂ ಬಿಜೆಪಿಯಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಮತ್ತೊಂದೆಡೆ ಭಿನ್ನಮತ, ಅಸಮಾಧಾನಗಳು ಸ್ಫೋಟಗೊಳ್ಳಿತ್ತಿವೆ. ಅದರಂತೆ ಹಾವೇರಿ ಕಾಂಗ್ರೆಸ್​ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಹಾವೇರಿ ಕಾಂಗ್ರೆಸ್​​ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ.ಹಿರೆಮಠ(MM Hiremath) ರಾಜಿನಾಮೆ ನೀಡಿದ್ದಾರೆ. ಅಲ್ಲದೇ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಗುಡ್​ಬೈ ಹೇಳಿದ್ದಾರೆ. ಈ ಕುರಿತಂತೆ .ಹಿರೆಮಠ ಅವರು ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ​ ಅವರಿಗೆ ರವಾನಿಸಿದ್ದಾರೆ.

ಇದನ್ನೂ ಓದಿ: ಕೇಸರಿ ಪಡೆಗೆ ಮತ್ತೊಂದು ಶಾಕ್​: ಕಾಂಗ್ರೆಸ್​ನತ್ತ ಮುಖ ಮಾಡಿದ ಬಿಜೆಪಿ ಹಾಲಿ ಶಾಸಕ, ಮಾತುಕತೆ ಫೈನಲ್​

ಇಲ್ಲಿವರೆಗೂ ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಬಂದಿದ್ದೇನೆ. ಆದ್ರೆ, ಕಳೆದ ಕೆಲವು ದಿನಗಳಿಂದ ಅಧ್ಯಕ್ಷ ಸ್ಥಾನವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುತ್ತಿದ್ದು, ಇದನ್ನು ಅಂಗೀಕರಿಸಬೇಕೆಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಾವೇರಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದ ಎಂ.ಎಂ.ಹಿರೆಮಠ ಅವರು ರುದ್ರಪ್ಪ ಲಮ್ಮಾಣಿಯನ್ನು ಹೊರತುಪಡಿಸಿ ಬೇರೆಯಾರಿಗಾದರೂ ಟಿಕೆಟ್ ಕೊಡಿ ಎಂದು ರಾಜ್ಯ ಕೈ ನಾಯಕರಿಗೆ ಮನವಿ ಮಾಡಿದ್ದರು. ಅಲ್ಲದೇ ಈ ಬಾರಿ ಸ್ಪರ್ಧಿಸುವುದಾಗಿ ಇಂಗಿತ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬೇಡ ಜಂಗಮ ಜಾತಿ ಪ್ರಮಾಣಪತ್ರವನ್ನು ಸಹ ರೆಡಿ ಮಾಡಿಕೊಂಡಿದ್ದರು. ಆದ್ರೆ, ಹಾವೇರಿ ಕ್ಷೇತ್ರಕ್ಕೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಸರು ಘೋಷಣೆ ಮಾಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಹಿರೆಮಠ ಹಾವೇರಿ ಜಿಲ್ಲಾಧ್ಯಕ್ಷ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಇನ್ನು ಕಾಂಗ್ರೆಸ್​ಗೆ ಗುಡ್​ಬೈ ಹೇಳಿರುವ ಹಿರೆಮಠ ಅವರು ಮುಂದೆ ಬಿಜೆಪಿ ಅಥವಾ ಜೆಡಿಎಸ್​ ಸೇರುತ್ತಾರಾ?  ಎನ್ನುವುದು ಕಾದುನೋಡಬೇಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ