AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tripura Assembly bypoll ತ್ರಿಪುರಾ ಉಪಚುನಾವಣೆ: ಮತಚಲಾಯಿಸಲು ಮತಗಟ್ಟೆಗೆ ಹೋಗುತ್ತಿದ್ದ ಪೊಲೀಸ್​​ ಸಿಬ್ಬಂದಿಗೆ ದುಷ್ಕರ್ಮಿಗಳಿಂದ ಇರಿತ

ಕಾಂಗ್ರೆಸ್ ಅಭ್ಯರ್ಥಿ ಮತ್ತು ಮಾಜಿ ಸಚಿವ ಸುದೀಪ್ ರಾಯ್ ಬರ್ಮನ್ ಅವರು ತಮ್ಮ ತವರು ಕ್ಷೇತ್ರ  ಅಗರ್ತಲಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಮತದಾರರನ್ನು ಹೆದರಿಸಲು ಬಿಜೆಪಿ  ಗೂಂಡಾಗಳನ್ನು ಬಿಟ್ಟಿದೆ. ಇದರಿಂದಾಗಿ ಅನೇಕ ಮತದಾರರು ಮತದಾನ ಕೇಂದ್ರಗಳಿಗೆ ಬಂದಿಲ್ಲ ಎಂದು ಹೇಳಿದ್ದಾರೆ

Tripura Assembly bypoll ತ್ರಿಪುರಾ ಉಪಚುನಾವಣೆ: ಮತಚಲಾಯಿಸಲು ಮತಗಟ್ಟೆಗೆ ಹೋಗುತ್ತಿದ್ದ ಪೊಲೀಸ್​​ ಸಿಬ್ಬಂದಿಗೆ ದುಷ್ಕರ್ಮಿಗಳಿಂದ ಇರಿತ
ತ್ರಿಪುರಾದಲ್ಲಿ ಉಪಚುನಾವಣೆಗೆ ಮತದಾನ
TV9 Web
| Edited By: |

Updated on: Jun 23, 2022 | 1:53 PM

Share

ತ್ರಿಪುರಾ: ಗುರುವಾರ ಬೆಳಗ್ಗೆ 7 ಗಂಟೆಯಿಂದ ತ್ರಿಪುರಾದಲ್ಲಿ(Tripura Assembly bypolls) ಅಗರ್ತಲಾ, ಟೌನ್ ಬರ್ದೋವಾಲಿ ಸುರ್ಮಾ ಮತ್ತು ಜುಬಾರಾಜ್‌ನಗರದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯ (bypolls)  ಮತದಾನ ಪ್ರಾರಂಭವಾಗಿದೆ. ಮತದಾರರನ್ನು ಬೆದರಿಸುತ್ತಿದ್ದಾರೆ ಮತ್ತು ಗೂಂಡಾಗಳಿಂದ ಮತ ಚಲಾಯಿಸಲು ಅವಕಾಶ ನೀಡುತ್ತಿಲ್ಲ ಎಂದು ವಿಪಕ್ಷಗಳು ಆರೋಪಿಸಿವೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಇತ್ತೀಚಿನ ವರದಿಗಳ ಪ್ರಕಾರ ಬೆಳಗ್ಗೆ 11 ಗಂಟೆಯವರೆಗೆ ಶೇಕಡಾ 33.18 ರಷ್ಟು ಮತದಾನವಾಗಿದೆ. ಎರಡು ಸ್ಥಾನಗಳಲ್ಲಿ ಶಾಸಕರ ರಾಜೀನಾಮೆ, ಒಂದು ಶಾಸಕರ ಅನರ್ಹತೆ ಮತ್ತು ಶಾಸಕರೊಬ್ಬರ ನಿಧನದಿಂದಾಗಿ ಈ ಸ್ಥಾನಗಳಿಗೆ ಉಪಚುನಾವಣೆ ಅನಿವಾರ್ಯವಾಗಿತ್ತು. ಅಗರ್ತಲಾ (Agartala) ಕ್ಷೇತ್ರದ ಕುಂಜಾಬಾನ್ ಪ್ರದೇಶದ ನಿವಾಸಿ ಸಮೀರ್ ಸಹಾ (54) ಮತ ಚಲಾಯಿಸಲು ಮತಗಟ್ಟೆಗೆ ಹೋದಾಗ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದಾರೆ . ತನ್ನ ತಂದೆಯನ್ನು ದುಷ್ಕರ್ಮಿಗಳ ಗುಂಪು ಮತಗಟ್ಟೆಗೆ ಹೋಗದಂತೆ ತಡೆದಿದೆ ಎಂದು ಅವರ ಪುತ್ರ ಸಮರ್ ಸಹಾ ಹೇಳಿದ್ದಾರೆ. ಸಮೀರ್ ಅವರನ್ನು ತಡೆದಾಗ ಅವರು ಅದನ್ನು ನಿರ್ಲಕ್ಷಿಸಿ ಮುಂದೆ ಹೋಗಿದ್ದಾರೆ. ಆಗ ದುಷ್ಕರ್ಮಿಗಳು ಇರಿದಿದ್ದಾರೆ. ಮಾಜಿ ಶಾಸಕ ಲಲಿತ್ ಮೋಹನ್ ತ್ರಿಪುರಾ ಅವರ ಪೊಲೀಸ್ ಮತ್ತು ಭದ್ರತಾ ಸಿಬ್ಬಂದಿ ಆಗಿದ್ದಾರೆ ಸಮೀರ್ ಸಹಾ. ಗಾಯಗೊಂಡ ಸಹಾ ಅವರನ್ನು ಗೋವಿಂದ್ ಬಲ್ಲಭ್ ಪಂತ್ (ಜಿಬಿಪಿ) ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಜುಬಾರಾಜ್‌ನಗರ ಕ್ಷೇತ್ರದ ತೃಣಮೂಲ ಕಾಂಗ್ರೆಸ್‌ನ ಅಭ್ಯರ್ಥಿ ಮೃಣಾಲ್ ಕಾಂತಿ ದೇಬನಾಥ್ ಅವರು ಬುಧವಾರ ರಾತ್ರಿಯಿಂದಲೇ ಗೂಂಡಾಗಳು ಮತದಾರರಿಗೆ ಬೆದರಿಕೆ ಹಾಕುತ್ತಿದ್ದಾರೆ. ಗುರುವಾರ ಮತದಾರರನ್ನು ಮತ ಚಲಾಯಿಸಲು ಅನುಮತಿಸಿಲ್ಲ ಎಂದು ಆರೋಪಿಸಿದ್ದಾರೆ.

ಬಿಜೆಪಿಯ ಮೋಟಾರ್‌ಸೈಕಲ್‌ನಲ್ಲಿ ಬಂದ ಗೂಂಡಾಗಳು ಅಥವಾ ‘ಬೈಕ್ ಬಾಹಿನಿ’,  ಮತದಾರರನ್ನು ಮತಗಟ್ಟೆಗಳಿಗೆ ಹೋಗುವ ದಾರಿಯಲ್ಲಿ ನಿಲ್ಲಿಸಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಪಕ್ಷದ ಅಗರ್ತಲಾ ಅಭ್ಯರ್ಥಿ ಪನ್ನಾ ದೇಬ್ ಆರೋಪಿಸಿದ್ದಾರೆ. ಈ ಘಟನೆಗಳು ಸಂಭವಿಸಿದ ಬೀದಿಗಳಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ಇರಲಿಲ್ಲ ಎಂದು ದೇಬ್ ಆರೋಪಿಸಿದ್ದಾರೆ.

ಕಾಂಗ್ರೆಸ್ ವಕ್ತಾರರು ಇದೇ ರೀತಿಯ ಆರೋಪಗಳನ್ನು ಮಾಡಿದ್ದು, ಮತದಾರರು ಮತ ಚಲಾಯಿಸಲು ಮತಗಟ್ಟೆಗಳಿಗೆ ಬರದಂತೆ ಅಡ್ಡಿಪಡಿಸಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಮತ್ತು ಮಾಜಿ ಸಚಿವ ಸುದೀಪ್ ರಾಯ್ ಬರ್ಮನ್ ಅವರು ತಮ್ಮ ತವರು ಕ್ಷೇತ್ರ  ಅಗರ್ತಲಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಮತದಾರರನ್ನು ಹೆದರಿಸಲು ಬಿಜೆಪಿ  ಗೂಂಡಾಗಳನ್ನು ಬಿಟ್ಟಿದೆ. ಇದರಿಂದಾಗಿ ಅನೇಕ ಮತದಾರರು ಮತದಾನ ಕೇಂದ್ರಗಳಿಗೆ ಬಂದಿಲ್ಲ ಎಂದು ಹೇಳಿದ್ದಾರೆ.

ಜೂನ್ 26 ರಂದು ಮತಗಳ ಎಣಿಕೆ ನಡೆಯಲಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು