AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಶಾಲೆಗೆ ಹೋದರೂ ಮಕ್ಕಳು ಅಂಕಲ್ ಸೈಕಲ್ ಕೊಡಿಸಿ ಅಂತಾರೆ: ಜೆಡಿಎಸ್ ಶಾಸಕ ಗೌರಿಶಂಕರ್

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಸರ್ಕಾರಿ ಶಾಲೆ ಮಕ್ಕಳಿಗೆ ಬಸ್ ವ್ಯವಸ್ಥೆ ಸಮಸ್ಯೆ ಇದೆ ಎಂದು ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಿದರು. ಆದರೆ ದರಿದ್ರ ಸರ್ಕಾರ ಬಂದ ನಂತರ ಕಳೆದ ಮೂರು ವರ್ಷಗಳಿಂದ ಮಕ್ಕಳಿಗೆ ಸೈಕಲ್ ಸಿಗುತ್ತಿಲ್ಲ ಎಂದು ತುಮಕೂರು ತಾಲೂಕಿನ ಬೆಳ್ಳಾವಿಯಲ್ಲಿ ಶಾಸಕ ಡಿ.ಸಿ.ಗೌರಿಶಂಕರ್ ಹೇಳಿದರು.

TV9 Web
| Edited By: |

Updated on:Feb 16, 2023 | 5:51 PM

Share

ತುಮಕೂರು: ಬಸ್ ಸಮಸ್ಯೆ ಎದುರಿಸುವ ಮಕ್ಕಳಿಗೆ ಶಾಲೆಗೆ ಹೋಗಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹೆಚ್​.ಡಿ.ಕುಮಾರಸ್ವಾಮಿ (H.D.Kumarswamy) ಅವರು ಮುಖ್ಯಮಂತ್ರಿ ಆಗಿದ್ದಾಗ ಸೈಕಲ್ (Cycle) ನೀಡುವ ಯೋಜನೆ ಜಾರಿ ಮಾಡಿದ್ದರು. ಆದರೆ ಈ ದರಿದ್ರ ಸರ್ಕಾರ ಬಂದ ನಂತರ ಮೂರು ವರ್ಷಗಳಿಂದ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡುತ್ತಿಲ್ಲ. ಯಾವುದೇ ಶಾಲೆಗೆ ಹೋದರೂ ಸೈಕಲ್ ಕೊಡಿಸಿ ಅಂಕಲ್ ಅಂತಾರೆ ಎಂದು ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್ (MLA D.C. Gowri Shankar) ಹೇಳಿಕೆ ನೀಡಿದ್ದಾರೆ.

ತುಮಕೂರು ತಾಲೂಕಿನ ಬೆಳ್ಳಾವಿಯ ಕೆಪಿಎಸ್ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಇದ್ದ ಮಕ್ಕಳಿಗೆ ಸೈಕಲ್ ಕೊಟ್ಟಿದ್ದೇವೆ, ಈ ಯೋಜನೆ ರದ್ದು ಮಾಡಬೇಡಿ ಸೈಕಲ್ ಕೊಡಿ ಅಂತಾ ಕೊರೋನಾ ಬಂದ ಮೇಲೆ ಸರ್ಕಾರಕ್ಕೆ ಹಲವು ಭಾರಿ ಮನವಿ ಕೊಟ್ಟಿದ್ದೇವೆ. ಆದರೆ ಇದೊಂಥರ ಪಾಪರ್ ಗೌರ್ನಮೆಂಟ್, ದರಿದ್ರ ಸರ್ಕಾರ. ಹಾಗಾಗಿ 3 ವರ್ಷಗಳಿಂದ ಮಕ್ಕಳಿಗೆ ಸೈಕಲ್ ನೀಡುತ್ತಿಲ್ಲ. ಯಾವ ಶಾಲೆಗೆ ಹೋದರೂ ಮಕ್ಕಳು ಅಂಕಲ್ ಸೈಕಲ್ ಕೊಡಿಸಿ ಅಂತಾರೆ ಎಂದರು.

ಇದನ್ನೂ ಓದಿ: 2004, 2018ರಂತೆ ವಿಕಲಾಂಗ ಮಗು ಹುಟ್ಟಬೇಕೆಂದು ಆಶಿಸಬೇಡಿ: ಜೆಡಿಎಸ್​ಗೆ ಟಾಂಗ್ ನೀಡಿದ ಸಿ.ಟಿ.ರವಿ

ಬೆಳ್ಳಾವಿ ಭಾಗದಲ್ಲಿ ಪದವಿ ಕಾಲೇಜು ಆಗಬೇಕು ಎಂದು ಬಹಳ ಬೇಡಿಕೆ ಇತ್ತು. ಈ ಭಾಗದ 28 ಹಳ್ಳಿ ಮಕ್ಕಳು ಡಿಗ್ರಿ ಓದಲು ತುಮಕೂರು ಹೋಗಬೇಕಿತ್ತು. ಆ ಕಷ್ಟ ತಪ್ಪಿಸಲು ನಮ್ಮ ಸರ್ಕಾರ ಇದ್ದಾಗ ಡಿಗ್ರಿ ಕಾಲೇಜು ತಂದು ಕೊಡುವ ಕೆಲಸ ಮಾಡಿದ್ದೆ. ಕಟ್ಟಡ ಅವಶ್ಯಕತೆ ಹಿನ್ನಲೆ ಇಲ್ಲಿ ಜಾಗ ಸಿಗಲಿಲ್ಲ. ಕೆಲವರು ಚಿಕ್ಕಬೆಳ್ಳಾವಿ ಬ್ಯಾಲದಲ್ಲಿ ಕಟ್ಟಿ ಅಂದರು. ಬ್ಯಾಲದಲ್ಲಿ ಬಸ್ ಸಮಸ್ಯೆ ಚಿಕ್ಕಬೆಳ್ಳಾವಿ ಇಂಟಿರಿಯರ್ ಆಗುತ್ತೆ ಅಂತಾ ಚರ್ಚೆ ಆಯ್ತು. ಆದರೆ ಕೊರೋನಾ ಬಂದು ತಡವಾಯಿತು ಎಂದರು.

ಸಚಿವರಿಗೆ ಈಗಾಗಲೇ 5 ಕೋಟಿ ಕೊಡಿ ಅಂತಾ ಪ್ರಸ್ತಾವನೆಯನ್ನ ಕೊಟ್ಟಿದ್ದೇನೆ. ಅತೀ ಶೀಘ್ರವಾಗಿ ಆಗುವ ಮುನ್ಸೂಚನೆ ಇದೆ. ಬಂದರೆ ಮುಗಿಸಿಕೊಡುತ್ತೇನೆ, ಅನುದಾನ ಬರದಿದ್ದರೆ ಮುಂದೆ ಚುನಾವಣೆಯಲ್ಲಿ ನಿಮ್ಮ ಆಶೀರ್ವಾದದಲ್ಲಿ ಗೆದ್ದು ಸಚಿವನಾಗಿ ಕೆಲಸ ಮುಗಿಸಿ ಕೊಡುತ್ತೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Thu, 16 February 23

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ