AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಶಾಲೆಗೆ ಹೋದರೂ ಮಕ್ಕಳು ಅಂಕಲ್ ಸೈಕಲ್ ಕೊಡಿಸಿ ಅಂತಾರೆ: ಜೆಡಿಎಸ್ ಶಾಸಕ ಗೌರಿಶಂಕರ್

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಸರ್ಕಾರಿ ಶಾಲೆ ಮಕ್ಕಳಿಗೆ ಬಸ್ ವ್ಯವಸ್ಥೆ ಸಮಸ್ಯೆ ಇದೆ ಎಂದು ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಿದರು. ಆದರೆ ದರಿದ್ರ ಸರ್ಕಾರ ಬಂದ ನಂತರ ಕಳೆದ ಮೂರು ವರ್ಷಗಳಿಂದ ಮಕ್ಕಳಿಗೆ ಸೈಕಲ್ ಸಿಗುತ್ತಿಲ್ಲ ಎಂದು ತುಮಕೂರು ತಾಲೂಕಿನ ಬೆಳ್ಳಾವಿಯಲ್ಲಿ ಶಾಸಕ ಡಿ.ಸಿ.ಗೌರಿಶಂಕರ್ ಹೇಳಿದರು.

TV9 Web
| Edited By: |

Updated on:Feb 16, 2023 | 5:51 PM

Share

ತುಮಕೂರು: ಬಸ್ ಸಮಸ್ಯೆ ಎದುರಿಸುವ ಮಕ್ಕಳಿಗೆ ಶಾಲೆಗೆ ಹೋಗಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹೆಚ್​.ಡಿ.ಕುಮಾರಸ್ವಾಮಿ (H.D.Kumarswamy) ಅವರು ಮುಖ್ಯಮಂತ್ರಿ ಆಗಿದ್ದಾಗ ಸೈಕಲ್ (Cycle) ನೀಡುವ ಯೋಜನೆ ಜಾರಿ ಮಾಡಿದ್ದರು. ಆದರೆ ಈ ದರಿದ್ರ ಸರ್ಕಾರ ಬಂದ ನಂತರ ಮೂರು ವರ್ಷಗಳಿಂದ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡುತ್ತಿಲ್ಲ. ಯಾವುದೇ ಶಾಲೆಗೆ ಹೋದರೂ ಸೈಕಲ್ ಕೊಡಿಸಿ ಅಂಕಲ್ ಅಂತಾರೆ ಎಂದು ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್ (MLA D.C. Gowri Shankar) ಹೇಳಿಕೆ ನೀಡಿದ್ದಾರೆ.

ತುಮಕೂರು ತಾಲೂಕಿನ ಬೆಳ್ಳಾವಿಯ ಕೆಪಿಎಸ್ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಇದ್ದ ಮಕ್ಕಳಿಗೆ ಸೈಕಲ್ ಕೊಟ್ಟಿದ್ದೇವೆ, ಈ ಯೋಜನೆ ರದ್ದು ಮಾಡಬೇಡಿ ಸೈಕಲ್ ಕೊಡಿ ಅಂತಾ ಕೊರೋನಾ ಬಂದ ಮೇಲೆ ಸರ್ಕಾರಕ್ಕೆ ಹಲವು ಭಾರಿ ಮನವಿ ಕೊಟ್ಟಿದ್ದೇವೆ. ಆದರೆ ಇದೊಂಥರ ಪಾಪರ್ ಗೌರ್ನಮೆಂಟ್, ದರಿದ್ರ ಸರ್ಕಾರ. ಹಾಗಾಗಿ 3 ವರ್ಷಗಳಿಂದ ಮಕ್ಕಳಿಗೆ ಸೈಕಲ್ ನೀಡುತ್ತಿಲ್ಲ. ಯಾವ ಶಾಲೆಗೆ ಹೋದರೂ ಮಕ್ಕಳು ಅಂಕಲ್ ಸೈಕಲ್ ಕೊಡಿಸಿ ಅಂತಾರೆ ಎಂದರು.

ಇದನ್ನೂ ಓದಿ: 2004, 2018ರಂತೆ ವಿಕಲಾಂಗ ಮಗು ಹುಟ್ಟಬೇಕೆಂದು ಆಶಿಸಬೇಡಿ: ಜೆಡಿಎಸ್​ಗೆ ಟಾಂಗ್ ನೀಡಿದ ಸಿ.ಟಿ.ರವಿ

ಬೆಳ್ಳಾವಿ ಭಾಗದಲ್ಲಿ ಪದವಿ ಕಾಲೇಜು ಆಗಬೇಕು ಎಂದು ಬಹಳ ಬೇಡಿಕೆ ಇತ್ತು. ಈ ಭಾಗದ 28 ಹಳ್ಳಿ ಮಕ್ಕಳು ಡಿಗ್ರಿ ಓದಲು ತುಮಕೂರು ಹೋಗಬೇಕಿತ್ತು. ಆ ಕಷ್ಟ ತಪ್ಪಿಸಲು ನಮ್ಮ ಸರ್ಕಾರ ಇದ್ದಾಗ ಡಿಗ್ರಿ ಕಾಲೇಜು ತಂದು ಕೊಡುವ ಕೆಲಸ ಮಾಡಿದ್ದೆ. ಕಟ್ಟಡ ಅವಶ್ಯಕತೆ ಹಿನ್ನಲೆ ಇಲ್ಲಿ ಜಾಗ ಸಿಗಲಿಲ್ಲ. ಕೆಲವರು ಚಿಕ್ಕಬೆಳ್ಳಾವಿ ಬ್ಯಾಲದಲ್ಲಿ ಕಟ್ಟಿ ಅಂದರು. ಬ್ಯಾಲದಲ್ಲಿ ಬಸ್ ಸಮಸ್ಯೆ ಚಿಕ್ಕಬೆಳ್ಳಾವಿ ಇಂಟಿರಿಯರ್ ಆಗುತ್ತೆ ಅಂತಾ ಚರ್ಚೆ ಆಯ್ತು. ಆದರೆ ಕೊರೋನಾ ಬಂದು ತಡವಾಯಿತು ಎಂದರು.

ಸಚಿವರಿಗೆ ಈಗಾಗಲೇ 5 ಕೋಟಿ ಕೊಡಿ ಅಂತಾ ಪ್ರಸ್ತಾವನೆಯನ್ನ ಕೊಟ್ಟಿದ್ದೇನೆ. ಅತೀ ಶೀಘ್ರವಾಗಿ ಆಗುವ ಮುನ್ಸೂಚನೆ ಇದೆ. ಬಂದರೆ ಮುಗಿಸಿಕೊಡುತ್ತೇನೆ, ಅನುದಾನ ಬರದಿದ್ದರೆ ಮುಂದೆ ಚುನಾವಣೆಯಲ್ಲಿ ನಿಮ್ಮ ಆಶೀರ್ವಾದದಲ್ಲಿ ಗೆದ್ದು ಸಚಿವನಾಗಿ ಕೆಲಸ ಮುಗಿಸಿ ಕೊಡುತ್ತೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Thu, 16 February 23

‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ