AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಧಮ್ಕಿಗಳನ್ನ ಇಲ್ಲಿಗೆ ನಿಲ್ಲಿಸಿದ್ರೆ ಒಳ್ಳೆದು”: ಶಾಸಕ ಎಸ್.ಆರ್.ಶ್ರೀನಿವಾಸ್​ಗೆ ಎಚ್ಚರಿಕೆ ನೀಡಿದ ವೀರಶೈವ ಮುಖಂಡರು

ಎಲ್ಲರಿಗೂ ತಿಳುವಳಿಕೆ ಬಂದಿದೆ, ಎಲ್ಲರೂ ರಾಜಕಾರಣವನ್ನ ತುಂಬಾ ಹತ್ತಿರದಿಂದ ನೋಡುತ್ತಿದ್ದಾರೆ. ಈ ಧಮ್ಕಿಗಳನ್ನ ಇಲ್ಲಿಗೆ ನಿಲ್ಲಿಸಿದರೆ ಒಳ್ಳೆದು ಎಂದು ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್​ಗೆ ವೀರಶೈವ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಧಮ್ಕಿಗಳನ್ನ ಇಲ್ಲಿಗೆ ನಿಲ್ಲಿಸಿದ್ರೆ ಒಳ್ಳೆದು: ಶಾಸಕ ಎಸ್.ಆರ್.ಶ್ರೀನಿವಾಸ್​ಗೆ ಎಚ್ಚರಿಕೆ ನೀಡಿದ ವೀರಶೈವ ಮುಖಂಡರು
ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಮತ್ತು ವೀರಶೈವ ಮುಖಂಡ ಸುರೇಶ್
TV9 Web
| Edited By: |

Updated on:Dec 15, 2022 | 10:29 AM

Share

ತುಮಕೂರು: ಗುಬ್ಬಿ ಕ್ಷೇತ್ರದ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ (MLA S.R.Srinivas) ಕಾಂಗ್ರೆಸ್ ಸೇರ್ಪಡೆಗೆ ಕಾಂಗ್ರೆಸ್ ಪಕ್ಷದಿಂದಲೇ ವಿರೋಧ ಕೇಳಿಬಂದಿದ್ದವು. ಇದೀಗ ಕಾಂಗ್ರೆಸ್ ಮುಖಂಡರಾದ ಹೊನ್ನಗಿರಿ ಗೌಡರು, ಜಿ.ಎಸ್.ಪ್ರಸನ್ನ ಕುಮಾರ್ ಅವರ ಬಗ್ಗೆ ಮಾತನಾಡಿದ ಶ್ರೀನಿವಾಸ್ ವಿರುದ್ಧ ವೀರಶೈವ ಸಮುದಾಯ (Veerashaiva community)ದ ಕೆಲವು ಮುಖಂಡರು ತಿರುಗಿಬಿದ್ದಿದ್ದಾರೆ. ಕಾಂಗ್ರೆಸ್​ಗೆ ಇತ್ತೀಚೆಗೆ ಬಂದು 15 ವರ್ಷಗಳಿಂದ ಪಕ್ಷ ಸಂಘಟನೆ ಮಾಡಿರುವ ಹೊನ್ನಗಿರಿ ಗೌಡರು, ಜಿ.ಎಸ್.ಪ್ರಸನ್ನ ಕುಮಾರ್ ಬಗ್ಗೆ ಮಾತನಾಡುತ್ತಿಯಾ, ನಿನ್ನ ಮತ್ತು ನಿನ್ನ ಹಿಂಬಾಲಕರ ಬೆದರಿಕೆಗಳಿಗೆ ಯಾರೂ ಬಗ್ಗುವವರಲ್ಲ ಎಂದು ವೀರಶೈವ ಮುಖಂಡ ಸುರೇಶ್ ಅವರ ಶಾಸಕ ಶ್ರೀನಿವಾಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಸ್.ಆರ್.ಶ್ರೀನಿವಾಸ್ ಅವರ ಪರವಾಗಿರುವ ವೀರಶೈವ ಮುಖಂಡರು ಇತ್ತೀಚೆಗೆ ಕಾಂಗ್ರೆಸ್ಸಿಗರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರು. ನಿಮಗೆ ತಾಕತ್ ಇದ್ದರೆ ಕಾಂಗ್ರೆಸ್​ನಿಂದ ವಾಸಣ್ಣನವರಿಗೆ ಟಿಕೆಟ್ ತಪ್ಪಿಸಿ ಎಂದು ಸವಾಲೆಸೆದಿದ್ದರು. ಇದಕ್ಕೆ ಪ್ರತಿಯಾತಿ ಶ್ರೀನಿವಾಸ್ ವಿರುದ್ಧ ಮತ್ತೊಂದು ವೀರಶೈವ ಸಮುದಾಯ ಮುಖಂಡರು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಶಿವನೇಹಳ್ಳಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ನಿಂದ​ ಭರದ ಸಿದ್ಧತೆ, ಟಿಕೆಟ್ ಹಂಚಿಕೆಗೆ ಸಮಿತಿ ರಚನೆ

ಎಸ್.ಆರ್.ಶ್ರೀನಿವಾಸ್​ಗೆ ಎಚ್ಚರಿಕೆ ನೀಡಿ ಮಾತನಾಡಿದ ವೀರಶೈವ ಮುಖಂಡ ಸುರೇಶ್, ರಾಜ್ಯದಲ್ಲಿ, ಜಿಲ್ಲೆಯಲ್ಲಿ ವೀರಶೈವ ಸಮಾಜ ತುಂವಾ ಬಲಿಷ್ಠವಾಗಿದೆ. ಇಷ್ಟಕ್ಕೆ ಸುಮ್ಮನಾದರೆ ಒಳ್ಳೆಯದು. ವೀರಶೈವ ಸಮುದಾಯಕ್ಕೆ ನಿನ್ನ ಕೊಡುಗೆ ಏನೆಂದು ವೀರಶೈವ ಮುಖಂಡರು ಸವಾಲೆಸೆದರು. ಇಲ್ಲಿಯವರೆಗೆ ನಾಲ್ಕು ಬಾರಿ ಚುನಾವಣೆ ಗೆದ್ದಿದ್ದೀಯ, ಒಂದೇ ಒಂದು ಅಭಿವೃದ್ಧಿ ಕಾರ್ಯ ಮಾಡಿಲ್ಲ. ಯಾವ ಯಾವ ವೇಷ ಹಾಕಿ ಗೆದ್ದಿದ್ದೀಯ ಎಂಬುದು ಗೊತ್ತು. ವೀರಶೈವ ಸಮುದಾಯದ ಯಾರೋ ಒಬ್ಬರಿಗೆ ತಾಲೂಕು ಅಧ್ಯಕ್ಷನ ಸ್ಥಾನ ಕೊಟ್ಟಿರುವುದು ಬಿಟ್ಟರೆ ಬೇರೆ ಏನು ಅಧಿಕಾರ ಕೊಟ್ಟಿದ್ದೀಯಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಸೇರ್ಪಡೆಗೆ 2 ಕಾರಣ ಕೊಟ್ಟ ದತ್ತ, ದೇವೇಗೌಡ್ರ ಹತ್ತಿರ ಹೇಳಿಕೊಳ್ಳಲಾಗದೇ ತೊಳಲಾಟಕ್ಕೆ ಒಳಗಾದ ಮೇಷ್ಟ್ರು

ವೀರಶೈವ ಸಮಾಜಕ್ಕಾಗಿ ಯಾವೊಬ್ಬನೂ ಇಲ್ಲ. ನಿನ್ನ ಜೊತೆ ಇರುವವರೆಲ್ಲಾ ನಿನಗೋಸ್ಕರ ಇರುವವರು. ಈ ಹಿಂದೆ ಸಂಸದ ಜಿ.ಎಸ್. ಬಸವರಾಜುಗೆ ಕೀಳಾಗಿ ಮಾತನಾಡಿದ್ದೀಯ. ಇಷ್ಟೋಂದು ಕೀಳುಮಟ್ಟದ ರಾಜಕಾರಣಕ್ಕೆ ನೀನು ಇಳಿದರೆ ನಾವು ಹೆದರುವುದಿಲ್ಲ. ಈ ಧಮ್ಕಿ ಎಲ್ಲ ಇಲ್ಲಿಗೆ ನಿಲ್ಲಸಬೇಕು ಎಂದು ಎಚ್ಚರಿಕೆ ನೀಡಿದರು.

ಶ್ರೀನಿವಾಸ್ ಅವರು ಕಾಂಗ್ರೆಸ್ ಸೇರುವ ಬಗ್ಗೆ ಹೊನ್ನಗಿರಿ ಗೌಡರು, ಜಿ.ಎಸ್.ಪ್ರಸನ್ನ ಕುಮಾರ್ ಅವರು ವಿರೋಧ ವ್ಯಕ್ತಪಡಿಸಿದ್ದರು. ಜಂಟಿ ಸುದ್ದಿಗೋಷ್ಠಿ ನಡೆಸಿ ಶ್ರೀನಿವಾಸ್ ಫೋಟೋ ಹಾಕದೆ 10 ತಲೆಯ ರಾವಣನ ಪೋಸ್ಟರ್ ಬಿಡುಗಡೆ ಮಾಡಿದ್ದರು. ಈ ಇಬ್ಬರು ಮುಖಂಡರು ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಎಂದು ಹೇಳಲಾಗುತ್ತಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 am, Thu, 15 December 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್