AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ 2 ಸಲ ಪುನರ್ಜನ್ಮ ಕೊಟ್ಟಿದ್ದೇನೆ, ಇದೇ ನಾನು ಮಾಡಿದ ದೊಡ್ಡ ತಪ್ಪು: H.D.ಕುಮಾರಸ್ವಾಮಿ

ಮಾಜಿ ಸಿಎಂ ಸಿದ್ದರಾಮಯ್ಯಗೆ 2 ಸಲ ಪುನರ್ಜನ್ಮ ಕೊಟ್ಟಿದ್ದೇನೆ. ಇದೇ ನಾನು ಮಾಡಿದ ದೊಡ್ಡ ತಪ್ಪು ಎಂದು ಎಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸಿದ್ದರಾಮಯ್ಯಗೆ 2 ಸಲ ಪುನರ್ಜನ್ಮ ಕೊಟ್ಟಿದ್ದೇನೆ, ಇದೇ ನಾನು ಮಾಡಿದ ದೊಡ್ಡ ತಪ್ಪು: H.D.ಕುಮಾರಸ್ವಾಮಿ
siddaramaiah and hd kumaraswamy
TV9 Web
| Edited By: |

Updated on: Nov 13, 2022 | 5:44 PM

Share

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರದ್ದೇ (Siddarmaiah) ಸುದ್ದಿ. ಅವರು ಇಂದು(ನ.13) ಕೋಲಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಮತ್ತೊಂದೆಡೆ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ಸಿದ್ದರಾಮಯ್ಯಗೆ 2 ಸಲ ಪುನರ್ಜನ್ಮ ಕೊಟ್ಟಿದ್ದೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಯಾರೂ ಊಹೆ ಮಾಡದ ಅಚ್ಚರಿ ಅಭ್ಯರ್ಥಿ ನಿಲ್ತಾರೆ: ಶ್ರೀರಾಮುಲು ಸ್ಫೋಟಕ ಹೇಳಿಕೆ

ಬೆಂಗಳೂರಿನ ಜೆಪಿ ಭವನದಲ್ಲಿ ಇಂದು(ನ.13) ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯಗೆ 2 ಸಲ ಪುನರ್ಜನ್ಮ ಕೊಟ್ಟಿದ್ದೇನೆ. ಇದೇ ನಾನು ಮಾಡಿದ ದೊಡ್ಡ ತಪ್ಪು ಎಂದರು.

ಅವತ್ತು 2005ರಲ್ಲಿ ಚಾಮುಂಡೇಶ್ವರಿಯಲ್ಲಿ ಅವರು ಗೆದ್ದಿದ್ದು ಬರೀ ಇನ್ನೂರೋ ಇನ್ನೂರೈವತ್ತು ಮತಗಳಿಂದ. ಚಾಮುಂಡೇಶ್ವರಿ, ಬಾದಾಮಿಯಲ್ಲೂ ಜಾತಿ ಲೆಕ್ಕಾಚಾರದಲ್ಲಿ ಚುನಾವಣೆ ನಡೆದಿರೋದು. ನಾನು ಲಾಸ್ಟ್ ಮೂರು ದಿನ ಬಾದಾಮಿಗೆ ಹೋಗದೆ ಇದ್ರೆ ಹತ್ತು ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲುತ್ತಿದ್ದರು ಎಂದು ಹೇಳಿದರು.

ಗುಳೆದಗುಡ್ಡ ಸೇರಿದಂತೆ ಹಲವೆಡೆ ಪ್ರಚಾರ ಮಾಡಿದ್ದೆ. ಸಾಕಷ್ಟು ಜನ ಸೇರಿದ್ರು. ಬಾದಾಮಿಯಲ್ಲೂ ನನ್ನಿಂದಲೇ ಗೆದ್ದಿದ್ದು, ಇದರಲ್ಲಿ ಯಾವುದೇ ಸಂಶಯ ಇಲ್ಲ. ನಮ್ಮ ಜೆಡಿಎಸ್ ಅಭ್ಯರ್ಥಿಯೂ 28 ಸಾವಿರ ಓಟ್ ಪಡೆದಿದ್ರು. ಸಿದ್ದರಾಮಯ್ಯಗೆ ಎರಡು ಬಾರಿ ನನ್ನಿಂದ ಪುನರ್‌ಜನ್ಮ ಸಿಕ್ಕಿದೆ ಎಂದು ತಿಳಿಸಿದರು.

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ, ಸಿದ್ದರಾಮಯ್ಯ ಬಗ್ಗೆ ಲಘುವಾಗಿ ಮಾತನಾಡಲ್ಲ. ಅವರು ಮಾಜಿ ಸಿಎಂ ಆಗಿದ್ದಾರೆ. ಸಚಿವರಾಗಿ. ಉಪಮುಖ್ಯಮಂತ್ರಿಯಾಗಿದ್ದವರು. ಅವರು ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು. ಅವರಿಗೆ ಕ್ಷೇತ್ರವೇ ಇಲ್ಲ ಎಂಬ ಕ್ಷುಲ್ಲಕ ಮಾತುಗಳು ನಮಗೆ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕೋಲಾರದಲ್ಲಿ ನಮ್ಮ ಯಾವುದೇ ಸ್ಟ್ರಾಟರ್ಜಿ ಬದಲಾಗಲ್ಲ. ಕೋಲಾರದಲ್ಲಿ ಸಮರ್ಥ ಅಭ್ಯರ್ಥಿಗಳಿದ್ದಾರೆ. ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಾಭಿಪ್ರಾಯಕ್ಕಿಂತ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಬೇಕು. ಮಿಷನ್ 123 ಗುರಿಯಲ್ಲಿ ಕೋಲಾರ ಕ್ಷೇತ್ರವೂ ಒಂದು. ಸಿದ್ದರಾಮಯ್ಯ ಅಷ್ಟೇ ಅಲ್ಲ, ಯಾರೇ ನಿಂತರೂ ನಮ್ಮಲ್ಲಿ ಸಮರ್ಥ ಅಭ್ಯರ್ಥಿಗಳಿದ್ದಾರೆ. ಸಿದ್ದರಾಮಯ್ಯಗೆ ಮುಳುವಾಗೋದೇ ಶ್ರೀನಿವಾಸ್‌ಗೌಡ್ರು. ನೆಗೆಟೀವ್ ಪಾಯಿಂಟ್ಸ್ ಇರೋದೆ ಅಲ್ಲಿ ಎಂದು ಜೆಡಿಎಸ್​ನಿಂದ ಆಚೆ ಬಂದಿರುವ ಶ್ರೀನಿವಾಸ್ ಗೌಡಗೆ ಟಾಂಗ್ ಕೊಟ್ಟರು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ