AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕನಾಥ್ ಶಿಂಧೆ, ದೇವೇಂದ್ರ ಫಡ್ನವಿಸ್​​ರನ್ನು ಅಭಿನಂದಿಸಿದ ಉದ್ಧವ್ ಠಾಕ್ರೆ

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ  ಏಕನಾಥ್ ಶಿಂಧೆ ಮತ್ತು  ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಅಭಿನಂದನೆಗಳು. ನೀವು ಮಹಾರಾಷ್ಟ್ರದಲ್ಲಿ ಉತ್ತಮ ಕೆಲಸ ಮಾಡಬೇಕೆಂದು ನಾನು ಬಯಸುತ್ತೇನೆ ಎಂದು ಉದ್ಧವ್ ಠಾಕ್ರೆ ಟ್ವೀಟ್.

ಏಕನಾಥ್ ಶಿಂಧೆ, ದೇವೇಂದ್ರ ಫಡ್ನವಿಸ್​​ರನ್ನು ಅಭಿನಂದಿಸಿದ ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jun 30, 2022 | 10:23 PM

Share

ಏಕನಾಥ್ ಶಿಂಧೆ (Eknath Shinde) ಮತ್ತು ದೇವೇಂದ್ರ ಫಡ್ನವಿಸ್ (Devendra Fadnavis) ಅವರನ್ನು ಉದ್ಧವ್ ಠಾಕ್ರೆ (Uddhav Thackeray) ಅಭಿನಂದಿಸಿದ್ದಾರೆ. ಮರಾಠಿಯಲ್ಲಿ ಟ್ವೀಟ್ ಮಾಡಿದ ಉದ್ಧವ್, “ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ  ಏಕನಾಥ್ ಶಿಂಧೆ ಮತ್ತು  ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಅಭಿನಂದನೆಗಳು. ನೀವು ಮಹಾರಾಷ್ಟ್ರದಲ್ಲಿ ಉತ್ತಮ ಕೆಲಸ ಮಾಡಬೇಕೆಂದು ನಾನು ಬಯಸುತ್ತೇನೆ” ಎಂದು ಹೇಳಿದ್ದಾರೆ. ಶಿವಸೇನೆಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ 20 ನೇ ಸಿಎಂ ಆಗಿ ಇಂದು  ಪ್ರಮಾಣ ವಚನ ಸ್ವೀಕರಿಸಿದರು. ಇಂದು ಸಂಜೆ ಅಚ್ಚರಿಯ ನಡೆಯಲ್ಲಿ, ಶಿವಸೇನೆಯಲ್ಲಿ ಬಂಡಾಯದ ನೇತೃತ್ವ ವಹಿಸಿದ್ದ ಶಿಂಧೆ ಅವರು ಹೊಸ ಸಿಎಂ ಆಗಲಿದ್ದಾರೆ ಎಂದು ಫಡ್ನವಿಸ್ ಘೋಷಿಸಿದರು. ಶಿಂಧೆ ಅವರನ್ನು ಸಿಎಂ ಆಗಿ ಘೋಷಿಸಿದ್ದ   ಫಡ್ನವಿಸ್ ತಾನು ಸರ್ಕಾರದ ಭಾಗವಾಗಿರುವುದಿಲ್ಲ ಎಂದು ಹೇಳಿದ್ದರು. ನಂತರ ಬಿಜೆಪಿ ನೇತೃತ್ವ ಅವರ ಮನವೊಲಿಸಿದ್ದು ಉಪಮುಖ್ಯಮಂತ್ರಿಯಾಗಿ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜ್ಯಪಾಲ ಕೊಶ್ಯಾರಿ ಅವರು ಶಿಂಧೆ ಮತ್ತು ಫಡ್ನವಿಸ್ ಅವರಿಗೆ ರಾಜಭವನದಲ್ಲಿ ಸಂಜೆ 7.30ಕ್ಕೆ  ಪ್ರಮಾಣ ವಚನ ಬೋಧಿಸಿದರು. ನಾಲ್ಕು ಬಾರಿ ಶಾಸಕರಾಗಿರುವ ಶಿಂಧೆ ಅವರು ಶಿವಸೇನೆಯ ದಿವಂಗತ ನಾಯಕರಾದ ಬಾಳ್ ಠಾಕ್ರೆ ಮತ್ತು ಅವರ ಆಪ್ತ ಆನಂದ್ ದಿಘೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Published On - 9:59 pm, Thu, 30 June 22

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್