AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದರ ಬಂಡಾಯದ ಭೀತಿಯಿಂದ ಲೋಕಸಭೆಗೆ ನೂತನ ಮುಖ್ಯ ಸಚೇತಕರನ್ನು ನೇಮಿಸಿದ ಉದ್ಧವ್‌ ಠಾಕ್ರೆ ಬಣ

ಪಕ್ಷದ ಹಿರಿಯ ನಾಯಕ ಸಂಜಯ್ ರಾವುತ್ ಅವರು ಬುಧವಾರ ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿದ್ದು, ಭಾವನಾ ಗಾವ್ಲಿ ಅವರ ಸ್ಥಾನಕ್ಕೆ ರಾಜನ್ ವಿಚಾರೆ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂಸದರ ಬಂಡಾಯದ ಭೀತಿಯಿಂದ ಲೋಕಸಭೆಗೆ ನೂತನ ಮುಖ್ಯ ಸಚೇತಕರನ್ನು ನೇಮಿಸಿದ ಉದ್ಧವ್‌ ಠಾಕ್ರೆ ಬಣ
ಏಕನಾಥ್ ಶಿಂಧೆ- ಉದ್ಧವ್ ಠಾಕ್ರೆ
TV9 Web
| Edited By: |

Updated on:Jul 06, 2022 | 8:43 PM

Share

ದೆಹಲಿ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಲ್ಪಮತಕ್ಕೆ ಕುಸಿದಿರುವ ಶಿವಸೇನಾದ ಉದ್ಧವ್‌ ಠಾಕ್ರೆ (Uddhav Thackeray) ಬಣ, ಪಕ್ಷದ ಸಂಸದರ ಬಂಡಾಯದ ಭೀತಿಯಿಂದ ಲೋಕಸಭೆಗೆ (Lok Sabha) ನೂತನ ಮುಖ್ಯ ಸಚೇತಕರನ್ನು ನೇಮಿಸಿದೆ. ಪಕ್ಷದ ಹಿರಿಯ ನಾಯಕ ಸಂಜಯ್ ರಾವುತ್ ಅವರು ಬುಧವಾರ ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿದ್ದು, ಭಾವನಾ ಗಾವ್ಲಿ ಅವರ ಸ್ಥಾನಕ್ಕೆ ರಾಜನ್ ವಿಚಾರೆ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ. ಲೋಕಸಭೆಯಲ್ಲಿ 19 ಮತ್ತು ರಾಜ್ಯಸಭೆಯಲ್ಲಿ ಮೂರು ಸದಸ್ಯರನ್ನು ಹೊಂದಿರುವ ಶಿವಸೇನಾಗೆ ಸಂಸದರ ಬಂಡಾಯ ದೊಡ್ಡ ನಷ್ಟವನ್ನುಂಟು ಮಾಡಿದೆ. ಕಳೆದ ತಿಂಗಳು ಏಕನಾಥ್ ಶಿಂಧೆ (Eknath Shinde) ಅವರ ಬಂಡಾಯದ ನಂತರ, ಉದ್ಧವ್ ಠಾಕ್ರೆ ಅವರು ತಮ್ಮ 55 ಶಾಸಕರ ಪೈಕಿ 40 ಶಾಸಕರನ್ನು ಕಳೆದುಕೊಂಡರು. ಇದರಿಂದಾಗಿ ರಾಜ್ಯದಲ್ಲಿ ಅಧಿಕಾರವನ್ನು ಕಳೆದುಕೊಳ್ಳಬೇಕಾಯಿತು.

ಕಳೆದ ವಾರ ಉದ್ಧವ್  ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು. ಒಂದು ದಿನದ ನಂತರ, ಶಿಂಧೆ ಬಣ ಅಧಿಕೃತವಾಗಿ ಬಿಜೆಪಿಯೊಂದಿಗೆ ಕೈಜೋಡಿಸಿತು ಮತ್ತು ಸರ್ಕಾರ ರಚಿಸಲು ಹಕ್ಕು ಸಾಧಿಸಿತು. ಸೋಮವಾರ ವಿಧಾನಸಭೆಯಲ್ಲಿ ನಡೆದ ವಿಶ್ವಾಸ ಮತ ಯಾಚನೆಯಲ್ಲಿ, 288 ಸದಸ್ಯರ ವಿಧಾನಸಭೆಯಲ್ಲಿ ಏಕನಾಥ್ ಶಿಂಧೆ ಪಾಳಯವು 164 ಮತಗಳನ್ನು ಪಡೆದು ಬಹುಮತ ಸಾಬೀತು ಮಾಡಿತು. ಹೊಸ ಮೈತ್ರಿಕೂಟವು ಈಗಾಗಲೇ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸ್ಪೀಕರ್ ಮತ್ತು ಮುಖ್ಯ ಸಚೇತಕರನ್ನು ಆಯ್ಕೆ ಮಾಡಿದೆ. ವಿಧಾನಸಭೆಯಲ್ಲಿ ವಿಶ್ವಾಸ ಮತದ ವೇಳೆ ವಿಪ್ ಧಿಕ್ಕರಿಸಿದ ಠಾಕ್ರೆ ತಂಡದ ಶಾಸಕರನ್ನು ಅನರ್ಹಗೊಳಿಸುವಂತೆಯೂ ಇವರು ಮನವಿ ಮಾಡಿದ್ದಾರೆ.

ಮೂರನೇ ಎರಡರಷ್ಟು ಬಹುಮತದ ಆಧಾರದ ಮೇಲೆ ತಮ್ಮ ಬಣವೇ ನಿಜವಾದ ಶಿವಸೇನಾ ಎಂದು ಶಿಂಧೆ ಹೇಳಿಕೊಂಡಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಮೊದಲು ಹಕ್ಕು ಮಂಡಿಸಿದ ಅವರು, ಉದ್ಧವ್ ಠಾಕ್ರೆ ಅವರು ಅಧಿಕಾರಕ್ಕೆ ಅಂಟಿಕೊಳ್ಳಲು ಪ್ರಯತ್ನಿಸುತ್ತಿರುವ “ಹತಾಶ ಅಲ್ಪಸಂಖ್ಯಾತರ” ನಾಯಕ ಎಂದು ಹೇಳಿದ್ದಾರೆ.

ಆದಾಗ್ಯೂ, ಶಾಸಕರ ದಂಗೆಯ ಹೊರತಾಗಿಯೂ  ಠಾಕ್ರೆ ಅವರಿಗೆ ಇನ್ನೂ ತಳಮಟ್ಟದ ಕಾರ್ಯಕರ್ತರು ಮತ್ತು ಜನರ ಬೆಂಬಲವಿದೆ ಎಂದು ಭಾವಿಸಲಾಗಿದೆ.

Published On - 8:36 pm, Wed, 6 July 22

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ